ತುಮಕೂರು ಜಿಲ್ಲಾಸೌಧ ಮುಟ್ಟಿಬಂದ ಅಲೆಮಾರಿಗಳು

Date:

Advertisements

ಚಿಕ್ಕನಾಯಕನಹಳ್ಳಿ  ತಾಲೂಕಿನ‌ ಹುಳಿಯಾರು ಹೋಬಳಿ ಕೆಂಕೆರೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗೌಡಗೆರೆ ಸರ್ವೆ ನಂಬರ್ 20-ಪಿ1’ನಲ್ಲಿ ನಿವೇಶನ ಹಂಚಿಕೆಯಾಗಿರುವ ಅಲೆಮಾರಿಗಳು, ವರ್ಷಾನುವರ್ಷಗಳಿಂದ ನಿರ್ಲಕ್ಷ್ಯಕ್ಕೊಳಗಾಗಿರುವ ತಮ್ಮ ಮೂಲಭೂತ ಹಕ್ಕು-ಸೌಕರ್ಯಗಳನ್ನು ಶೀಘ್ರವೇ ಒದಗಿಸಿಕೊಡುವಂತೆ ಮನವಿ ಮಾಡುವ ಸಲುವಾಗಿ, ಬುಧವಾರದಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯಾಧಿಕಾರಿಗಳನ್ನು ಭೇಟಿ ಮಾಡಿದರು.

ಅಲೆಮಾರಿ ಹಕ್ಕುಗಳ ಹೋರಾಟಗಾರ ಮತ್ತು ಅಲೆಮಾರಿ ಬುಡಕಟ್ಟು ಮಹಾಸಭಾ ಮುಖಂಡ ಹಂದಿಜೋಗರ ರಾಜಪ್ಪನವರ ನೇತೃತ್ವದಲ್ಲಿ ಬುಧವಾರ ಬೆಳಗ್ಗೆ ಜಿಲ್ಲಾ ಪಂಚಾಯಿತಿ ಮುಖ್ಯಾಧಿಕಾರಿಗಳನ್ನು ಭೇಟಿ ಮಾಡಿದ ಅಲೆಮಾರಿ ಮಹಿಳೆಯರು, ಅಲೆಮಾರಿಗಳ ಅಭಿವೃದ್ಧಿ ಕಾರ್ಯಗಳ ವಿಚಾರದಲ್ಲಿ ಚಿಕ್ಕನಾಯಕನಹಳ್ಳಿ ತಾಲೂಕು  ಪಂಚಾಯಿತಿ ಅಧಿಕಾರಿಗಳು ಅನುಸರಿಸುತ್ತಿರುವ ವಿಳಂಬ ಧೋರಣೆ ಮತ್ತು ಮಂದಗತಿಯ ಕೆಲಸಕಾರ್ಯಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ, ಅವರ ಮೂಲಭೂತ ಸೌಕರ್ಯಗಳನ್ನು ಶೀಘ್ರ ಒದಗಿಸಿಕೊಡುವಂತೆ ಮನವಿ ಸಲ್ಲಿಸಿದರು. ತಾವು ಕಚೇರಿಯಲ್ಲಿಲ್ಲದ ಕಾರಣ ಅಲೆಮಾರಿ ಮಹಿಳೆಯರ ಮನವಿಯನ್ನು ತಮ್ಮ ಆಪ್ತ ಕಾರ್ಯದರ್ಶಿಯವರ ಮುಖೇನ ಸ್ವೀಕರಿಸಿರುವ ಜಿಲ್ಲಾ ಪಂಚಾಯತಿ ಸಿಇಒ ಜಿ ಪ್ರಭುರವರು, ಫೋನ್ ಮೂಲಕ ಈದಿನ ಡಾಟ್ ಕಾಮ್ ಜೊತೆ ಮಾತನಾಡಿ, ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ, ಅಲೆಮಾರಿಗಳ ಅಭಿವೃದ್ಧಿ ಕಾರ್ಯಗಳಲ್ಲಿ ತ್ವರಿತ ಪ್ರಗತಿ ತರಲು ಸೂಕ್ತ ಕ್ರಮ ಜರುಗಿಸುವ ಭರವಸೆಯನ್ನು ನೀಡಿದ್ದಾರೆ.

1000735706

ನಂತರ, ಮಧ್ಯಾಹ್ನ ನಾಲ್ಕು ಗಂಟೆಯ ಆಸುಪಾಸಿನಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್’ರವರನ್ನು ಭೇಟಿಮಾಡಿದ ತಾಲ್ಲೂಕಿನ ಅಲೆಮಾರಿ ಮಹಿಳೆಯರು, ಅವರ ಬಳಿ ತಮ್ಮ ಸಂಕಟಗಳನ್ನು ತೋಡಿಕೊಂಡು, ಶೀಘ್ರ ಪರಿಹಾರಕ್ಕಾಗಿ ಮನವಿ ಸಲ್ಲಿಸಿದ್ದಾರೆ. ಮುಂದಿನ ವಾರಗಳಲ್ಲಿ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಅಲೆಮಾರಿಗಳ ಕುಂದು-ಕೊರತೆಗಳನ್ನು ಪರಿಹರಿಸಲು ತಾಲ್ಲೂಕಿನ ಅಲೆಮಾರಿ ವಸತಿ ಪ್ರದೇಶಗಳಿಗೇ ಭೇಟಿ ನೀಡುವ ಭರವಸೆಯನ್ನು ಅಲೆಮಾರಿ ಮಹಿಳೆಯರಿಗೆ ಜಿಲ್ಲಾಧಿಕಾರಿಗಳು ನೀಡಿದ್ದಾರೆ ಎಂದು ಅಲೆಮಾರಿ ನಾಗಮ್ಮ ಅವರು ಈದಿನ ಡಾಟ್ ಕಾಮ್ ಗೆ ತಿಳಿಸಿದ್ದಾರೆ.

Advertisements

ಸಂಚಲನ

ಚಿಕ್ಕನಾಯಕನ ಸೀಮೆಯಿಂದ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X