ತುಮಕೂರು | ಕುಡಿಯಲು ಯೋಗ್ಯವಲ್ಲದ ನೀರಿನ ಮೂಲಗಳ ವರದಿ ನೀಡಲು ಜಿಲ್ಲಾಧಿಕಾರಿ ಸೂಚನೆ

Date:

Advertisements

ತುಮಕೂರು ಜಿಲ್ಲೆಯಲ್ಲಿ ಕಳೆದ ವರ್ಷದಲ್ಲಿ ಮಧುಗಿರಿ ಚಿನ್ನೇನಹಳ್ಳಿಯಲ್ಲಿ ಕಲುಷಿತ ನೀರಿನಿಂದ ಸಂಭವಿಸಿದ ಸಾವಿನ ಪ್ರಕರಣಗಳು ಮರುಕಳಿಸದಂತೆ ಎಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕುಡಿಯಲು ಯೋಗ್ಯವಲ್ಲದ ನೀರಿನ ಮೂಲಗಳ ಬಗ್ಗೆ ವರದಿ ನೀಡಬೇಕೆಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು. 

ತುಮಕೂರು ಜಿಲ್ಲಾಧಿಕಾರಿ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ಸೋಮವಾರ ಸಂಜೆ ವಿಡಿಯೋ ಕಾನ್ಫರೆನ್ಸ್ ಮೂಲಕ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ನಗರ ಪ್ರದೇಶದ ಎಲ್ಲಾ ವಾರ್ಡುಗಳಿಗೂ ಪ್ರತೀ ದಿನ ನೀರು ಸರಬರಾಜಾಗಬೇಕು. ಪ್ರತೀ ದಿನ ನೀರು ಸರಬರಾಜಿಗೆ ಕ್ರಮ ಕೈಗೊಳ್ಳದ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ ಶೋಕಾಸ್ ನೋಟೀಸ್ ನೀಡಲಾಗುವುದೆಂದು ನಿರ್ದೇಶನ ನೀಡಿದರು. 

ಕೊಳವೆ ಬಾವಿ ಮೋಟಾರ್ ಕೆಟ್ಟಿದೆ, ಪೈಪ್‌ಲೈನ್ ಒಡೆದಿದೆ, ದುರಸ್ತಿಯಲ್ಲಿದೆ ಎಂದು ಕುಂಟು ನೆಪ ಹೇಳಬಾರದು. ಜನರಿಂದ ದೂರು ಬಾರದಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಜನ-ಜಾನುವಾರುಗಳಿಗೆ ಕುಡಿಯುವ ನೀರೊದಗಿಸಲು ವಿಫಲರಾದಲ್ಲಿ ಸರ್ಕಾರಕ್ಕೆ ಅಂಥವರ ವಿರುದ್ಧ ದೂರು ನೀಡಲಾಗುವುದು. ಎಲ್ಲಾ ಮುಖ್ಯಾಧಿಕಾರಿಗಳು ಪ್ರತಿ ದಿನ ಬೆಳಿಗ್ಗೆ 6 ರಿಂದ 8 ಗಂಟೆಯವರೆಗೆ ತಮ್ಮ ವ್ಯಾಪ್ತಿಯ ಕ್ಷೇತ್ರಕ್ಕೆ ಭೇಟಿ ನೀಡಿ ಕುಡಿಯುವ ನೀರಿನ ಸಮಸ್ಯೆಯಿದ್ದಲ್ಲಿ ಕೂಡಲೇ ಬಗೆಹರಿಸಬೇಕು ಹಾಗೂ ಡೆಂಗ್ಯೂ ಪ್ರಕರಣಗಳು ಹರಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಸಂಜೆ 2 ಗಂಟೆಗಳ ಕಾಲ ಫಾಗಿಂಗ್ ಕಾರ್ಯವನ್ನು ಪರಿಶೀಲಿಸಬೇಕೆಂದು ಸೂಚಿಸಿದರು.

Advertisements

ತುಮಕೂರು ಜಿಲ್ಲೆಯಲ್ಲಿ ಪೂರ್ವ ಮುಂಗಾರಿನಲ್ಲಿ ಬಿದ್ದ ಮಳೆ ವಿವರ, ಸುಸ್ಥಿತಿಯಲ್ಲಿರುವ ಕೊಳವೆ ಬಾವಿ, ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವ ಗ್ರಾಮ, ಕೆರೆಗಳಲ್ಲಿ ನೀರಿನ ಪ್ರಮಾಣ ಲಭ್ಯತೆ, ಕುಡಿಯುವ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ ಸಹಾಯವಾಣಿ ಮೂಲಕ ಸ್ವೀಕೃತ ದೂರು, ವಿಲೇವಾರಿ ಕುರಿತು ತಾಲ್ಲೂಕುವಾರು ಮಾಹಿತಿ ಪಡೆದರು. 

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ, ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಸಂಜೀವಪ್ಪ, ಕೃಷಿ ಜಂಟಿ ನಿರ್ದೇಶಕ ರಮೇಶ್, ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಶಾಂತ್ ಕೂಡ್ಲಿಗಿ, ಪಾಲಿಕೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸಂದೀಪ್, ಸೇರಿದಂತೆ ಮತ್ತಿತರೆ ಅಧಿಕಾರಿಗಳು ಉಪಸ್ಥಿತರಿದ್ದರು. 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X