ತುಮಕೂರು | ‘ದ್ವೇಷ ಅಳಿಸೋಣ-ದೇಶ ಉಳಿಸೋಣ’ ನ.10ರವೆರೆಗೆ ಜಾಗೃತಿ ಅಭಿಯಾನ: ತಾಜುದ್ದೀನ್ ಷರೀಫ್

Date:

Advertisements

ಧರ್ಮದ ಹೆಸರಿನಲ್ಲಿ ಎಲ್ಲಡೆ ದ್ವೇಷ ಬಿತ್ತಲಾಗುತ್ತಿದೆ. ಧಾರ್ಮಿಕ ದ್ವೇಷ ವಿರುದ್ಧ ‘ದ್ವೇಷ ಅಳಿಸೋಣ ದೇಶ ಉಳಿಸೋಣ’ ಎಂಬ ಅಭಿಯಾನವನ್ನು ನ.1 ರಿಂದ ಆರಂಭಿಸಿದ್ದೇವೆ. ಅಭಿಯಾನವು ನ.10ರವರೆಗೆ ರಾಜ್ಯಾದ್ಯಂತ ನಡೆಯಲಿದೆ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ತುಮಕೂರು ಜಿಲ್ಲಾ ಅಧ್ಯಕ್ಷ ತಾಜುದ್ದೀನ್ ಷರೀಫ್ ತಿಳಿಸಿದ್ದಾರೆ.

ಅಭಿಯಾನದ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, “ಧರ್ಮದ ಹೆಸರಲ್ಲಿ ದ್ವೇಷ ಹುಟ್ಟಿಸುವ ಮತ್ತು ಸುಳ್ಳು ಸುದ್ದಿಗಳನ್ನು ಹರಡಿ ಜನರ ನೆಮ್ಮದಿ ಕೆಡಿಸುವ ಕೆಲಸ ನಿರಂತರವಾಗಿ ನಡೆಯುತ್ತಿದೆ. ಕೆಲವರು ಇದನ್ನು ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದ್ದಾರೆ” ಆತಂಕ ವ್ಯಕ್ತಪಡಿಸಿದರು.

“ಸ್ವಾರ್ಥ ರಾಜಕಾರಣಿಗಳು ಅಧಿಕಾರ ಭದ್ರಪಡಿಸಿಕೊಳ್ಳಲು ಜನರ ನಡುವೆ ದ್ವೇಷದ ಕಿಚ್ಚು ಹಚ್ಚುವ ಪ್ರಯತ್ನದಲ್ಲಿ ತೊಡಗಿಕೊಂಡಿದ್ದಾರೆ. ಸರ್ವಜನಾಂಗದ ಶಾಂತಿಯ ತೋಟವಾಗಿದ್ದ ನಮ್ಮ ಕನ್ನಡನಾಡಿನಲ್ಲಿ ಪ್ರಚೋದನಕಾರಿ ಭಾಷಣಗಳು ವ್ಯಾಪಕವಾಗಿ ನಡೆಯುತ್ತಿವೆ. ಇದರ ಪರಿಣಾಮವಾಗಿ ಜಾತಿ ಮತ್ತು ಕೋಮು ಸಂಘರ್ಷ ನಡೆದು ಅಮಾಯಕರ ಕೊಲೆಯಲ್ಲಿ ಮುಕ್ತಾಯವಾಗುತ್ತಿದೆ. ಇದು ರಾಜ್ಯದ ಸೌಹಾರ್ದ ವಾತಾವರಣ ಮತ್ತು ಅಭಿವೃದ್ಧಿಗೆ ಮಾರಕ” ಎಂದು ವಿವರಿಸಿದ್ದಾರೆ.

Advertisements

“ಸಮಾಜದಲ್ಲಿ ಅಶಾಂತಿಯ ವಾತಾವರಣ ಇದ್ದರೆ ಕನ್ನಡಿಗರು ನೆಮ್ಮದಿಯಿಂದ ಬದುಕಲು ಸಾಧ್ಯವೇ? ಖಂಡಿತವಾಗಿಯೂ ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಪರಿಸ್ಥಿತಿಯ ಗಂಭೀರತೆ ಅರಿತು ರಾಜ್ಯದ ನಾಗರಿಕರಲ್ಲಿ ದ್ವೇಷ ರಾಜಕೀಯ ಮತ್ತು ಅದರ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವುದು, ಅಲ್ಪ ಸಂಖ್ಯಾತ ಮತ್ತು ಹಿಂದುಳಿದ ವರ್ಗಗಳ ರಾಜಕೀಯ ಸ್ಥಾನಮಾನ ಕುಗ್ಗುತ್ತಿರುವ ಬಗ್ಗೆ ಜಾಗೃತಿ ಮೂಡಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಅಭಿಯಾನದಲ್ಲಿ ಮೌಲ್ಯಾಧಾರಿತ ರಾಜಕೀಯ, ಪ್ರೀತಿ, ಶಾಂತಿ ಸಹೋದರತೆ ಭಾವ ಹರಡಿ ದ್ವೇಷ ಮತ್ತು ಸುಳ್ಳಿನ ರಾಜಕೀಯದ ವಿರುದ್ಧ ದ್ವನಿ ಎತ್ತಲು ಪ್ರೇರೇಪಿಸಲಾಗುತ್ತದೆ” ಎಂದು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X