ತುಮಕೂರು | ಮಂಡಿಪೇಟೆಯಲ್ಲಿ ಆಗ್ನಿ ಅನಾಹುತ : ಪಾಟಕಿ ಸ್ಟೋಟ

Date:

Advertisements

ತುಮಕೂರು ನಗರದ ಹೃದಯ ಭಾಗದಲ್ಲಿನ ಮಂಡಿಪೇಟೆಯ ನೇತಾಜಿ ಟ್ರೇಡರ್ಸ್‌ಗೆ ಆಕಸ್ಮಿಕ ಬೆಂಕಿ ಬಿದ್ದು ಹೊತ್ತಿ ಉರಿಯುತ್ತಿರುವ ಬೆಂಕಿಯಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ದಟ್ಟ ಹೊಗೆ ಅವರಿಸಿದೆ.

ನೇತಾಜಿ ಟ್ರೇಡರ್ಸ್‌ನ ಗೋದಾಮಿನಲ್ಲಿ ಪಟಾಕಿ, ಗ್ರಂಧಿಗೆ ಅಂಗಡಿಗೆ ಸಂಬಂಧಿಸಿದ ವಸ್ತುಗಳು,
ಪ್ಲಾಸ್ಟಿಕ್ ವಸ್ತುಗಳು ಸೇರಿ ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ರಾಮಕೃಷ್ಣ ಎನ್ನುವವರಿಗೆ ಸೇರಿದ ನೇತಾಜಿ ಟ್ರೇಡರ್ಸ್‌ ಮಳಿಗೆ ಎಂದು ಗೋತ್ತಾಗಿದೆ.

WhatsApp Image 2024 09 02 at 9.56.54 PM

ಸೋಮವಾರ ಮುಂಜಾನೆ 6 ಗಂಟೆಗೆ ಕಾಣಿಸಿಕೊಂಡ ಬೆಂಕಿ, 9 ಗಂಟೆ ಆದ್ರೂ ಬೆಂಕಿ ನಂದಿಸಲಾಗಿಲ್ಲ.
ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿಯವರು ಹರಸಾಹಸ ಪಟ್ಟರು. ಪಟಾಕಿ ಶೇಖರಣೆಯ ಪರಿಣಾಮ ಬೆಂಕಿಗೆ ನಿರಂತರವಾಗಿ ಪಟಾಕಿಗಳು ಸಿಡಿಯುತ್ತಿವೆ. ನಿರಂತರವಾಗಿ ಸಿಡಿಯುತ್ತಿರುವ ಪಟಾಕಿಯಿಂದಾಗಿ ಅಕ್ಕ-ಪಕ್ಕದ ನಿವಾಸಿಗಳಲ್ಲಿ ಆತಂಕ ಎದುರಾಗಿದೆ. ವಾಹನ ಸವಾರರನ್ನು ತಡೆಗಟ್ಟಿ ಬೆಂಕಿ ನಂದಿಸಲು ನಗರ ಠಾಣೆ ಪೊಲೀಸರು ಸಹಕಾರ ನೀಡುತ್ತಿದ್ದಾರೆ.

Advertisements

ಮಂಡಿಪೇಟೆ ರಸ್ತೆಯ ಎರಡೂ ಬದಿಯ ವಾಹನ ಸಂಚಾರವನ್ನು ತಕ್ಷಣಕ್ಕೆ ಸ್ಥಗಿತಗೊಳಿಸಲಾಗಿದೆ. ತುಮಕೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X