ತುಮಕೂರು | ವಸತಿ ಸಮುಚ್ಛಯದಲ್ಲಿ ಅಮಾನಿಕೆರೆ ಕೋಡಿಹಳ್ಳ ನಿವಾಸಿಗಳಿಗೆ ಆದ್ಯತೆ ನೀಡಿ: ನರಸಿಂಹಮೂರ್ತಿ

Date:

Advertisements

200 ಮನೆಗಳಿರುವ ವಸತಿ ಸಮುಚ್ಛಯಗಳಲ್ಲಿ ಅಮಾನಿಕೆರೆ ಕೋಡಿಹಳ್ಳ ನಿವಾಸಿಗಳಿಗೆ ಮೊದಲ ಆದ್ಯತೆ ನೀಡಬೇಕು ಎಂದು ಕರ್ನಾಟಕ ರಾಜ್ಯ ಸ್ಲಂ ಜನಾದೋಲನದ ಸಂಚಾಲಕ ಎ.ನರಸಿಂಹಮೂರ್ತಿ ಒತ್ತಾಯಿಸಿದರು.

ತುಮಕೂರು ನಗರದ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿಯಿಂದ ನಡೆದ ಅಮಾನಿಕೆರೆ ಕೋಡಿಹಳ್ಳ ಶಾಖೆ ವರ್ಷಾಚರಣೆ ಮತ್ತು ಪುನೀತ್‌ರಾಜ್‌ಕುಮಾರ್‌ರವರ ಎರಡನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

“ನಗರದ ಕೋಡಿಹಳ್ಳದಲ್ಲಿ ಸ್ಲಂ ಶಾಖೆ ತೆರೆದು ಒಂದು ವರ್ಷ ಕಳೆದಿದೆ. ಸಂಘಟಿತರಾಗಿ ಬದುಕನ್ನು ಕಟ್ಟಿಕೊಳ್ಳುವ ನಿರಂತರ ಹೋರಾಟದ ಭಾಗವಾಗಿ ಜಿಲ್ಲಾಡಳಿತ ಮತ್ತು ನಗರ ಪಾಲಿಕೆ ಆಶ್ರಯ ಸಮಿತಿ ಗಮನ ಸೆಳೆಯುವಂತ ಕೆಲಸವನ್ನು ಇಲ್ಲಿನ 30 ಕುಟುಂಬಗಳು ಮಾಡಿರುವುದು ಆದರ್ಶಪ್ರಾಯವಾಗಿದೆ” ಎಂದರು.

Advertisements

“ನಮ್ಮ ಮುಂದಿನ ಹೋರಾಟ ಮತ್ತು ಜವಾಬ್ದಾರಿ ಹೊನ್ನೇನಹಳ್ಳಿ ಡಾನ್‌ ಬೋಸ್ಕೋ ಶಾಲೆಯ ಆಸುಪಾಸಿನ ಸರ್ವೇ ನಂಬರ್‌ನಲ್ಲಿ ಈಗಾಗಲೇ ಸರ್ಕಾರದಿಂದ 200 ವಸತಿ ಸಮುಚ್ಛಯಗಳ (ಮನೆಗಳ) ನಿರ್ಮಾಣವಾಗುತ್ತಿವೆ. ಈ ವಸತಿ ಸಮುಚ್ಛಯಗಳಲ್ಲಿ ಕೋಡಿಹಳ್ಳದ ಮಡಿವಾಳ(ಅಗಸ) ಮತ್ತು ಇತರೆ ವೃತ್ತಿನಿರತ 30 ಬಡಕುಟುಂಬಗಳನ್ನು ಪುನರ್ವಸತಿಗೊಳಿಸಲು ಮೊದಲ ಆದ್ಯತೆ ನೀಡಬೇಕು” ಎಂದರು.

“ಕೊಳಗೇರಿ ಹಿತರಕ್ಷಣಾ ಸಮಿತಿಯಿಂದ ಈ ಬಗ್ಗೆ ಹಲವು ಬಾರಿ ನಗರ ಶಾಸಕರ ಗಮನಕ್ಕೆ ತರಲಾಗಿದೆ. ಶಾಸಕರು ಸ್ಪಂದಿಸಿದ್ದಾರೆ. ಆದ್ಯತೆ ನೀಡದೆ ಹೋದರೆ ಹೋರಾಟ ಕೈಗೆತ್ತಿಕೊಳ್ಳಲು ಸಿದ್ಧರಾಗಬೇಕಿದೆ” ಎಂದರು.

“ಪುನೀತ್ ರಾಜಕುಮಾರ್ ಅವರ ಕೆಲಸಗಳು ಮಾದರಿಯ ಕಾರ್ಯಗಳು. ಅವರು ದೈಹಿಕವಾಗಿ ಇಲ್ಲವಾದರು ಮಾನಸಿಕವಾಗಿ ನಮ್ಮ ನಡುವೆ ಇದ್ದಾರೆ” ಎಂದರು.

ಸ್ಲಂ ಸಂಘಟನೆಯ ಕಾರ್ಯದರ್ಶಿ ಅರುಣ್‌ ಮಾತನಾಡಿ, “ಸ್ಲಂಗಳಲ್ಲಿ ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆ ಅಧಿಕಾರಿಗಳು ವಾಸ್ತವ್ಯ ಮಾಡಿ ಸ್ಲಂ ಜನರ ಸಮಸ್ಯೆ ಆಲಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ದಸರಾ ಯಶಸ್ಸಿಗೆ ಶ್ರಮಿಸಿದ ಎಲ್ಲರಿಗೂ ಅಭಿನಂದನೆ: ಸಚಿವ ಡಾ ಎಚ್.ಸಿ ಮಹದೇವಪ್ಪ

ಕಾರ್ಯಕ್ರಮದಲ್ಲಿ ಸ್ಲಂ ಸಮಿತಿಯ ಉಪಾಧ್ಯಕ್ಷ ಶಂಕ್ರಯ್ಯ, ಸ್ಥಳೀಯ ಮುಖಂಡರುಗಳಾದ ಮೋಹನ್‌ಕುಮಾರ್, ಕೋಡಿಹಳ್ಳ ಸ್ಲಂ ಶಾಖೆಯ ಪದಾಧಿಕಾರಿಗಳಾದ ಗಣೇಶ್, ಗೋವಿಂದರಾಜ್, ಮಂಜುನಾಥ್, ವೆಂಕಟೇಶ್, ಅಶ್ವತ್, ಜಯಮ್ಮ, ಲಕ್ಷ್ಮೀದೇವಮ್ಮ, ಕವಿತಾ, ಕೆಂಪಮ್ಮ, ಹೊನ್ನಮ್ಮ, ದೊಡ್ಡತಾಯಮ್ಮ, ಪಾಪಣಿ, ಮಂಜುಳ ಸೇರಿದಂತೆ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X