ತುಮಕೂರು | ಕೃಷಿ ಕೂಲಿ‌ ಕಾರ್ಮಿಕ ವೃದ್ದ ದಂಪತಿಯನ್ನು ಕೂಡಿ ಹಾಕಿ ಮಾಲೀಕನಿಂದ ದೌರ್ಜನ್ಯ: ಆರೋಪ

Date:

Advertisements

ತುಮಕೂರು ಜಿಲ್ಲೆಯಲ್ಲಿ ಕೃಷಿ ಕೂಲಿ‌ ಕಾರ್ಮಿಕ ವೃದ್ದ ದಂಪತಿಗೆ ತೋಟದಲ್ಲಿ‌ ಕೂಡಿ ಹಾಕಿ, ಮಾಲೀಕ ದೌರ್ಜನ್ಯ‌ ಎಸಗಿರುವ ಆರೋಪ ಕೇಳಿಬಂದಿದೆ.

ಜಿಲ್ಲೆಯ ಮಧುಗಿರಿ ತಾಲೂಕಿನಲ್ಲಿ ಬೆಳಕಿಗೆ ಬಂದಿದ್ದು, ತಾಲೂಕಿನ ಬೆಲ್ಲದಮಡಗು ಗ್ರಾಮದಲ್ಲಿರುವ ತೋಟದ ಮಾಲೀಕ ಲಕ್ಷ್ಮೀನಾರಾಯಣ ಎಂಬಾತ ದೌರ್ಜನ್ಯ ಎಸಗಿರುವುದಾಗಿ ಕೃಷಿ ಕೂಲಿ‌ ಕಾರ್ಮಿಕ ವೃದ್ದ ದಂಪತಿ ಆರೋಪಿಸಿದ್ದಾರೆ.

ಈ ಬಗ್ಗೆ ಹೇಳಿಕೆ ನೀಡಿರುವ ಸಂತ್ರಸ್ತ ದಂಪತಿಗಳಾದ ಹನುಮಂತರಾಯಪ್ಪ, ರಾಮಕ್ಕ ಎಂಬುವವರು, ಮಾಲೀಕ ಲಕ್ಷ್ಮೀನಾರಾಯಣ ದೌರ್ಜನ್ಯ ಎಸಗುತ್ತಿದ್ದು, ಕೆಲಸಕ್ಕೆಂದು ಕರೆತಂದು ತೋಟದಲ್ಲಿ ಕೂಡಿ ಹಾಕಿರುವುದಾಗಿ ಆರೋಪಿಸಿದ್ದಾರೆ.

Advertisements

“ತಲಾ 14 ಸಾವಿರ ಸಂಬಳ, ವಸತಿ ನೀಡುವುದಾಗಿ ಒಂದು ವರ್ಷದಿಂದ ದುಡಿಸಿಕೊಳ್ಳಲಾಗುತ್ತಿದೆ. ಇದೀಗ ಇಬ್ಬರಿಗೂ ತಲಾ 7 ಸಾವಿರ ನೀಡುವುದಾಗಿ ಹೇಳಿ ಎರಡು ತಿಂಗಳಿಂದ ಸಂಬಳ ನೀಡಿಲ್ಲ. ಕೇಳಿದರೆ ಒಬ್ಬರಿಗಷ್ಟೇ ಕೊಡೋದು. ಇನ್ನೊಬ್ಬರಿಗೆ ಕೊಡಲ್ಲ ಎಂದು ಹೇಳುತ್ತಿದ್ದಾರೆ. ನಮಗೆ ಜೀವನ ನಡೆಸಲು ತುಂಬಾ ಕಷ್ಟವಾಗುತ್ತಿದೆ. ಸರಿಯಾಗಿ ಕುಡಿಯಲು ನೀರು ಕೂಡ ನಮಗೆ ಸಿಗುತ್ತಿಲ್ಲ. ಬೇರೆ ಕಡೆಯಿಂದ ತಂದು ಕುಡಿಯುತ್ತಿದ್ದೇವೆ. ಸಂಬಳ ಕೇಳಿದರೆ ದೌರ್ಜನ್ಯ ಎಸಗುತ್ತಿದ್ದಾರೆ. ವಾಸವಿರುವ ಶೆಡ್‌ಗೂ ಬೀಗ ಹಾಕಿ ಹೋಗ್ತಾರೆ” ಎಂದು ಮಾಲೀಕನ ವಿರುದ್ಧ ಆರೋಪಿಸಿದ್ದಾರೆ.

ವೃದ್ದ ದಂಪತಿಯನ್ನು ಕೂಡಿ ಹಾಕಿ ದೌರ್ಜನ್ಯ ಎಸಗುತ್ತಿರುವ ಬಗ್ಗೆ ಸ್ಥಳೀಯರು ನೀಡಿದ ಮಾಹಿತಿಯನ್ನು ಆಧರಿಸಿ ಡಾ. ಬಿ ಆರ್ ಅಂಬೇಡ್ಕರ್ ದಂಡು ತುಮಕೂರು ಜಿಲ್ಲಾಧ್ಯಕ್ಷ ಎನ್ ಕುಮಾರ್ ತೋಟಕ್ಕೆ ಬಂದಾಗ ತೋಟದ ಗೇಟಿಗೆ ಬೀಗ ಹಾಕಿರುವುದು ಕಂಡು ಬಂತು. ಕುಮಾರ್ ಅವರಲ್ಲಿ ದಂಪತಿ ತಮ್ಮ ನೋವನ್ನು ವೃದ್ಧ ದಂಪತಿ ತೋಡಿಕೊಂಡಿದ್ದಾರೆ.

ಈ ಬಗ್ಗೆ ಹೇಳಿಕೆ ನೀಡಿರುವ ಅಂಬೇಡ್ಕರ್ ದಂಡು ತುಮಕೂರು ಜಿಲ್ಲಾಧ್ಯಕ್ಷ ಎನ್ ಕುಮಾರ್, ವೃದ್ದ ದಂಪತಿಯನ್ನ ತೋಟದಲ್ಲಿ‌ ಕೂಡಿ ಹಾಕಿ ದೌರ್ಜನ್ಯ ಎಸಗುತ್ತಿದ್ದಾರೆ. ತೋಟದಿಂದ ಹೊರಗೆ ಹೋಗಲು ಬಿಡದೇ ಗೇಟ್ ಗೆ ಬೀಗ ಹಾಕಿದ್ದಾರೆ. ಈ ಬಗ್ಗೆ ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ಬಂದಿದ್ದೇವೆ. ಸದ್ಯ ದಂಪತಿಗೆ ಹೊಟೇಲ್‌ನಿಂದ ಊಟ ಪಾರ್ಸೆಲ್ ತಂದು ನೀಡಿದ್ದೇವೆ. ಈ ಕೂಡಲೇ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು, ತೋಟದ ಮಾಲೀಕರನ್ನು ಕರೆಸಿ, ಈ ವೃದ್ಧ ದಂಪತಿಗೆ ನ್ಯಾಯ ಕೊಡಿಸಬೇಕು. ವೃದ್ದ ದಂಪತಿಗಳ ರಕ್ಷಣೆ ಮಾಡಿ, ಮಾಲೀಕನ ವಿರುದ್ದ ಕ್ರಮ ಕೈಗೊಳ್ಳಬೇಕು ಎಂಬುದು ನಮ್ಮ ಒತ್ತಾಯ” ಎಂದು ಆಗ್ರಹಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

Download Eedina App Android / iOS

X