ತುಮಕೂರು | ಗೃಹ ಸಚಿವರಿಂದ ಮತ್ಸ್ಯಾಲಯ ಲೋಕಾರ್ಪಣೆ

Date:

 ತುಮಕೂರು  ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದ ಬಳಿ ನವೀಕರಣಗೊಂಡ ಜಿಲ್ಲಾ ಮತ್ಸ್ಯಾಲಯವನ್ನು ಸೋಮವಾರ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಲೋಕಾರ್ಪಣೆ ಮಾಡಿದರು.

- Advertisement -

   ಮತ್ಸ್ಯಾಲಯವನ್ನು ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸಾರ್ವಜನಿಕರು ಹಾಗೂ ವಿಶೇಷವಾಗಿ ಮಕ್ಕಳಿಗೆ ಅಲಂಕಾರಿಕ ಮೀನು ಸೇರಿದಂತೆ ಜಲಚರ ಪ್ರಪಂಚದ ಪರಿಚಯ ನೀಡಲು ಮತ್ಸ್ಯಾಲಯವನ್ನು ನಿರ್ಮಿಸಲಾಗಿದೆ. ವಿವಿಧ ಬಗೆಯ ಮೀನುಗಳನ್ನು ನೇರವಾಗಿ ನೋಡುವ ಅವಕಾಶ ಇರುವುದರಿಂದ ವಿದ್ಯಾರ್ಥಿಗಳಿಗೆ ಕಲಿಕೆಯ ಜೊತೆಗೆ ಮನರಂಜನೆ ದೊರೆಯಲಿದೆ. ಅಲ್ಲದೆ ಜಲಚರಗಳ ಆಹಾರ ಸರಪಳಿಯ ಮಹತ್ವದ ಬಗ್ಗೆ ಅರಿವು ಮೂಡಲಿದೆ. ಈ ಮತ್ಸಾö್ಯಲಯವನ್ನು ನಿರ್ಮಿಸಿರುವುದರಿಂದ ನೈಸರ್ಗಿಕ ಸ್ಥಳೀಯವಾಗಿ ಲಭ್ಯವಿರುವ ಹಾಗೂ ಅಳಿವಿನ ಹಂಚಿನಲ್ಲಿರುವ ಮೀನಿನ ಸಂತತಿಯನ್ನು ಸಂರಕ್ಷಿಸಬಹುದಾಗಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಮತ್ಸ್ಯಾಲಯವನ್ನು ವೀಕ್ಷಿಸಲು ಸಾರ್ವಜನಿಕರಿಗೆ ಪ್ರವೇಶ ಶುಲ್ಕ ಕೇವಲ 10 ರೂ.ಗಳನ್ನು ನಿಗಧಿಪಡಿಸಲಾಗುವುದು. ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಈ ಮತ್ಸ್ಯಾಲಯದ ಪ್ರವೇಶ ಸಂಪೂರ್ಣ ಉಚಿತವಾಗಿರುತ್ತದೆ. ಎಂದು ತಿಳಿಸಿದರು.

ಜಿಲ್ಲಾ ಜಿಲ್ಲಾಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಮಾತನಾಡಿ ನವೀಕೃತಗೊಂಡ ಮತ್ಸ್ಯಾಲಯದಲ್ಲಿ 36 ಅಕ್ವೇರಿಯಂಗಳಲ್ಲಿ ವಿವಿಧ ಬಗೆಯ ಸುಮಾರು 70ಕ್ಕೂ ಹೆಚ್ಚಿನ ಪ್ರಬೇಧದ ಅಲಂಕಾರಿಕ ಮೀನುಗಳನ್ನು ವೀಕ್ಷಿಸಲು ಅವಕಾಶವಿದೆ. ಸುಮಾರು 15 ಲಕ್ಷ ರೂ. ವೆಚ್ಚದಲ್ಲಿ ಈ ಮತ್ಸ್ಯಾಲಯ ನವೀಕರಣವನ್ನು ಕೈಗೊಳ್ಳಲಾಗಿದೆ. ಮಕ್ಕಳಿಗಾಗಿ ಮುಂದಿನ ದಿನಗಳಲ್ಲಿ 12ಲಕ್ಷ ರೂ. ವೆಚ್ಚದಲ್ಲಿ ಕನಿಷ್ಠ 40 ಆಸನ ಸಾಮರ್ಥ್ಯದ ಆ್ಯಂಪಿ ಥಿಯೇಟರ್ ನಿರ್ಮಿಸಲಾಗುವುದು ಎಂದು ತಿಳಿಸಿದರು. 

ಇದೇ ಸಂದರ್ಭದಲ್ಲಿ ಇಲಾಖೆಯು ಹೊರತಂದಿರುವ 2024-25ನೇ ಸಾಲಿನ ಇಲಾಖಾ ಕಾರ್ಯಕ್ರಮಗಳ ಅನುಷ್ಠಾನ ಕುರಿತ ವಾರ್ಷಿಕ ವರದಿಯನ್ನು ಬಿಡುಗಡೆ ಮಾಡಲಾಯಿತು. 

ನಗರ ಶಾಸಕ ಜಿ.ಬಿ. ಜ್ಯೋತಿ ಗಣೇಶ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಮೀನುಗಾರಿಕೆ ಇಲಾಖೆ ಉಪನಿರ್ದೇಶಕ ನಂಜುಂಡಪ್ಪ ಎಂ.ಹೆಚ್., ಸಹಾಯಕ ನಿರ್ದೇಶಕ ಮೋಹನ್ ಕುಮಾರ್ ಕೆ.ಸಿ., ವಿವಿಧ ಶಾಲಾ ವಿದ್ಯಾರ್ಥಿಗಳು ಹಾಜರಿದ್ದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ರೇಬಿಸ್ ತಡೆಗೆ ಜಾಗೃತಿ ಮುಖ್ಯ; ಬೀದಿ ನಾಯಿ ಕಡಿತದ ಬಗ್ಗೆ ಜನರಲ್ಲಿ ಅರಿವು

ರೇಬಿಸ್ ವೈರಾಣು ಹರಡುವಿಕೆ, ನಾಯಿ ಕಡಿತದಿಂದ ಉಂಟಾಗಬಹುದಾದ ಅಪಾಯ ಹಾಗೂ ಮುನ್ನೆಚ್ಚರಿಕಾ...

ಜಮಖಂಡಿ | ಸರ್ವೆ ನಂ.71/4ರಲ್ಲೇ ಸ್ಮಶಾನಕ್ಕೆ ಜಾಗ ನೀಡುವಂತೆ ದಲಿತ ಸಮುದಾಯದ ಆಗ್ರಹ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಲಬೀಳಗಿ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿ...

ಸಿದ್ದರಾಮಯ್ಯ ಪ್ರತಿಮೆ ತೆರವು ಖಂಡಿಸಿ ವಿಜಯಪುರದಲ್ಲಿ ಬೃಹತ್ ಪ್ರತಿಭಟನೆ

ಕಲಬುರಗಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆ ತೆರವುಗೊಳಿಸಿರುವುದನ್ನು ಖಂಡಿಸಿ, ಸಿದ್ದರಾಮಯ್ಯ...

ರಾಯಚೂರು | ಪತ್ರಿಕಾ ರಂಗ ಜನರ ಧ್ವನಿಯಾಗಿ ಕೆಲಸ ಮಾಡಬೇಕು: ಎ.ವಸಂತ್ ಕುಮಾರ

ಪತ್ರಿಕಾ ರಂಗ ಸ್ವತಂತ್ರವಾಗಿ, ಸ್ವಾವಲಂಬಿಯಾಗಿ ಕಾರ್ಯನಿರ್ವಹಿಸುವ ಮೂಲಕ ಸತ್ಯವನ್ನು ವರದಿ ಮಾಡಬೇಕು....