ತುಮಕೂರು | ಅಸಮರ್ಪಕ ನಿರ್ವಹಣೆ; ಗೋಶಾಲೆಯಲ್ಲಿ 10ಕ್ಕೂ ಹೆಚ್ಚು ರಾಸುಗಳ ಸಾವು

Date:

Advertisements

ಗೋಶಾಲೆಯಲ್ಲಿ ಕಳೆದ ಎರಡು ತಿಂಗಳಿಂದ ರಾಸುಗಳಿಗೆ ಸಮರ್ಪಕ ಮೇವು ನೀರು ನೀಡದ ಕಾರಣ 10ಕ್ಕೂ ಹೆಚ್ಚು ರಾಸುಗಳು ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನಲ್ಲಿ ಇತ್ತೀಚೆಗೆ ನಡೆದಿದೆ.

“ತಾಲೂಕಿನ ಬೈಚಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೆಡ್ಡಿಹಳ್ಳಿ ಗ್ರಾಮದ ಬಳಿಯ ‘ಗೋಮುಖ’ ಗೋಶಾಲೆಯಲ್ಲಿ ಎರಡು ತಿಂಗಳುಗಳಿಂದ ಮೇವು, ನೀರು ಕೊಡದೆ ಕಬ್ಬಿಣದ ‌ಬೇಲಿಯಲ್ಲಿಯೇ ಎಮ್ಮೆ ಹಾಗೂ ರಾಸುಗಳನ್ನು ಕೂಡಿ ಹಾಕಲಾಗಿದೆ. ಅವುಗಳಿಗೆ ಸಮರ್ಪಕ ಮೇವು, ನೀರು ನೀಡಿಲ್ಲ” ಎಂದು ಸ್ಥಳೀಯರ ಆರೋಪ ಕೇಳಿಬಂದಿದೆ.

“ಗೋಮುಖ ಎಂಬ ಹೆಸರಿನಲ್ಲಿ ಪ್ರಾರಂಭಿಸಿರುವ ಗೋಶಾಲೆಯನ್ನು ಸರ್ಕಾರಿ ಅನುದಾನ ಬಳಸಿಕೊಳ್ಳಲು ಅಥವಾ ಇಲ್ಲಿನ ಸರ್ಕಾರಿ ಗೋಮಾಳ  ಕಬಳಿಸುವ ದುರುದ್ದೇಶದಿಂದ ಮಾಡಲಾಗಿದೆಯೇ ಹೊರತು ನಿಜವಾದ ಗೋರಕ್ಷಣೆಗಾಗಿ ಅಲ್ಲ. ಇಲ್ಲಿ ರಾಸುಗಳಿಗೆ ಸರಿಯಾಗಿ ಆಹಾರ ನೀಡುತ್ತಿಲ್ಲ. ಸರಿಯಾದ  ನಿರ್ವಹಣೆಯೂ ಇಲ್ಲದೆ ಮೂಕ ಪ್ರಾಣಿಗಳು ಮೃತಪಟ್ಟಿವೆ” ಎಂದು ಸ್ಥಳೀಯರು ಆರೋಪಿಸಿದ್ದಾರೆ.

Advertisements

“ಸರ್ಕಾರದಿಂದ ಲಾಭ ಪಡೆಯುವ ಉದ್ದೇಶದಿಂದ ಗೋಶಾಲೆ ತೆರೆಯಲಾಗಿದ್ದು, ಪಕ್ಕದಲ್ಲಿನ ಗೋಮಾಳ ಕಬಳಿಸುವ ಯತ್ನ ಮಾಡಲಾಗುತ್ತಿದೆ. ಆ ಕಾರಣದಿಂದ ಇಲ್ಲಿನ ರಾಸುಗಳನ್ನು ನಿಗಾವಹಿಸಿ ಸಾಕುತ್ತಿಲ್ಲ” ಎಂದು ಸ್ಥಳೀಯ ನಿವಾಸಿ ಸಿದ್ದಲಿಂಗಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಧಾರವಾಡ | ಲಿಂಗಾಯತ ಸ್ವತಂತ್ರ ಧರ್ಮ ಆಗುವುದರಿಂದ ಹಿಂದುತ್ವಕ್ಕೆ ಧಕ್ಕೆಯಾಗದು: ಸಿದ್ಧರಾಮ‌ ಸ್ವಾಮೀಜಿ

“ಗೋಶಾಲೆಯಲ್ಲಿ ಗೋವುಗಳು ಸತ್ತಿರುವುದರ ಬಗ್ಗೆ ಪಶು ಇಲಾಖೆಗೆ ಮಾಹಿತಿ ನೀಡಲಾಗಿದೆ. ಸಮರ್ಪಕವಾಗಿ ನಿರ್ವಹಣೆ ಮಾಡದ ಕಾರಣ ಹತ್ತಕ್ಕೂ ಹೆಚ್ಚು ರಾಸುಗಳು ಸಾವಿಗೀಡಾಗಿವೆ” ಎಂದು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶ್ರೀನಿವಾಸ್ ತಿಳಿಸಿದ್ದಾರೆ.

“ಗೋಶಾಲೆಯಲ್ಲಿ ರಾಸುಗಳ ಕಸ ಎತ್ತದ ಕಾರಣ ತೊಂದರೆಯಾಗಿದೆ. ಒಂದು ತಿಂಗಳಿನಿಂದ ಮೇವು ನೀರು ಇರಲಿಲ್ಲ. ಕೆಲವು ದಾನಿಗಳು ಮೇವು ದಾನ ನೀಡಿದ್ದಾರೆ. ಇತ್ತೀಚೆಗೆ 10ಕ್ಕೂ ಹೆಚ್ಚು ರಾಸು ಸಾವಿಗೀಡಾಗಿವೆ” ಎಂದು ಗೋಶಾಲೆ ನಿರ್ವಣಾಕಾರ ದೇಶ್ಯಾ ನಾಯಕ್ ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X