ತುಮಕೂರು | ಮಧುಗಿರಿ ಜಿಲ್ಲೆ ಮಾಡುವ ಬಗ್ಗೆ ಪರಿಶೀಲನೆ: ಸಿಎಂ ಸಿದ್ದರಾಮಯ್ಯ

Date:

ಮಧುಗಿರಿ ಮತ್ತು ಮೂರು ತಾಲೂಕುಗಳನ್ನು ಸೇರಿಸಿ ಮಧುಗಿರಿ ಜಿಲ್ಲೆಯನ್ನು ಮಾಡಬೇಕೆಂದು ಜನರು ಒತ್ತಾಯಿಸುತ್ತಿದ್ದಾರೆ. ಸಚಿವ ಕೆ.ಎನ್ ರಾಜಣ್ಣ ಅವರೂ ಹೇಳಿದ್ದಾರೆ. ನಮ್ಮ ಸರ್ಕಾರದಿಂದ ಹೊಸ ಜಿಲ್ಲೆ ಮಾಡುವ ಬಗ್ಗೆ ಗಂಭೀರವಾಗಿ ಪರಿಶೀಲಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -

ಮಧುಗಿರಿಯಲ್ಲಿ ನಡೆದ ಕ್ಷೀರಭಾಗ್ಯ ದಶಮಾನೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ನಮ್ಮ ಸರ್ಕಾರ ನುಡಿದಂತೆ ನಡೆದ ನಡೆಯುವ ಸರ್ಕಾರ. ಹಾಗಾಗಿ ಸುಳ್ಳು ಹೇಳುವುದಿಲ್ಲ. ನಾನು ಹೊಸಕೋಟೆಯಲ್ಲಿ ಕ್ಷೀರಭಾಗ್ಯ ಯೋಜನೆಯನ್ನು ಉದ್ಘಾಟನೆ ಮಾಡಿದ್ದೆ. ಈಗ ದಶಮಾನೋತ್ಸವ ಕಾರ್ಯಕ್ರಮ ನಡೆಯುತ್ತಿದೆ. ಈಗಲೂ ನಾನೇ ಮುಖ್ಯಮಂತ್ರಿ ಆಗಿದ್ದೇನೆ. ಅಪೌಷ್ಟಿಕತೆಯಿಂದ ನರಳುತ್ತಿರುವ ಸರ್ಕಾರಿ ಅನುದಾನಿತ ಶಾಲೆ ಮಕ್ಕಳು ಹಾಗೂ ಅಂಗನವಾಡಿ ಮಕ್ಕಳಿಗೆ ಹಾಲುಕೊಡಬೇಕು ಎಂಬ ಉದ್ದೇಶದಿಂದ ಈ ಯೋಜನೆಯನ್ನು ಜಾರಿ ಮಾಡಿದ್ದೆವು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಕಳೆದ ಬಾರಿ ನಮ್ಮ ಸರ್ಕಾರ ಇದ್ದಾಗ ಕೆ.ಎನ್.ರಾಜಣ್ಣ ಅವರ ಸಲಹೆಯಂತೆ ಶೂಭಾಗ್ಯ ಯೋಜನೆಯನ್ನು ಘೋಷಿಸಿದ್ದೆ. ಹೀಗೆ ಹಲವು ಭಾಗ್ಯಗಳನ್ನು ನಾವು ನೀಡಿದ್ದೆವು. ಬಿಜೆಪಿಯವರು ಬಡವರ ವಿರೋಧಿಗಳು ಹಾಗೂ ಮನುಷತ್ವ ಇಲ್ಲದವರು. ಬಡವರಿಗೆ ಅಕ್ಕಿ ಕೊಡಲಿಲ್ಲ. ಹಾಗಾಗಿ ಹಣ ಕೊಡಬೇಕಾಗಿ ಬಂತು. ಈಗ ಅಕ್ಕಿ ಸಿಗಲಿದೆ ಎಂದು ಗೊತ್ತಾಗಿದೆ. ಈಗ ನಾವು ಹತ್ತು ಕೆಜಿ ಅಕ್ಕಿ ಕೊಡುವ ಬಗ್ಗೆ ಚಿಂತೆ ಮಾಡುತ್ತಿದ್ದೇವೆ. ಪ್ರಧಾನಿ ಮೋದಿಯವರು ಉಚಿತ ಅಕ್ಕಿಕೊಟ್ಟರೆ ರಾಜ್ಯ ದಿವಾಳಿಯಾಗುತ್ತವೆ ಎನ್ನುತ್ತಾರೆ. ನಾವು ಐದು ಗ್ಯಾರೆಂಟಿಗಳನ್ನು ಜಾರಿ ಮಾಡಿ ತೋರಿಸಿದ್ದೇವೆ” ಎಂದರು.

ಗೃಹಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿ, “ಕೆ.ಎನ್.ರಾಜಣ್ಣ ನಮಗೆ ಗೊತ್ತಿಲ್ಲದ ಹಾಗೆ 150 ಕೋಟಿ ರೂಪಾಯಿ ಅನುದಾನ ತಂದಿದ್ದಾರೆ. ಮಧುಗಿರಿ ಉಪವಿಭಾಗ ಶಾಶ್ವತ ಬರಪೀಡಿತ ಪ್ರದೇಶವಾಗಿದೆ. ಮುಖ್ಯಮಂತ್ರಿಗಳಲ್ಲಿ ನಾನು ಮನವಿ ಮಾಡಿಕೊಳ್ಳುತ್ತೇನೆ. ನಮ್ಮ ಮಧುಗಿರಯನ್ನು ಜಿಲ್ಲೆಯನ್ನಾಗಿ ಮಾಡಬೇಕೆಂದು ಕೇಳಿಕೊಳ್ಳುತ್ತೇನೆ. ಇಡೀ ಏಷ್ಯಾ ಖಂಡದಲ್ಲೆ ಎರಡನೇ ಏಕಶಿಲಾ ಬೆಟ್ಟ ಇಲ್ಲಿದೆ. ಇದಕ್ಕೆ ರೂಪ್ ವೇ ಹಾಕಿಸಿಕೊಡಬೇಕೆಂದು ಕೇಳಿಕೊಳ್ಳುತ್ತೇನೆ” ಎಂದು ಹೇಳಿದರು.

ಸಹಕಾರ ಸಚಿವ ಕೆ.ಎನ್ ರಾಜಣ್ಣ ಮಾತನಾಡಿ, “ನನಗೆ ಪ್ರಿಯವಾದ ಕಾರ್ಯಕ್ರಮ ಅನ್ನಭಾಗ್ಯ. ಯಾವುದೇ ಜಾತಿ ಧರ್ಮದ ಬೇದಬಾವ ನೋಡದೆ ಹಸಿವು ನೀಗಿಸುವ ಈ ಯೋಜನೆಯಿಂದ ಕೋವಿಡ್ ಸಮಯದಲ್ಲಿ ಎಷ್ಟು ಸಂಕಷ್ಟಗಳ ಕಡಿಮೆಯಾಗಿವೆ. ಪರಮೇಶ್ವರ್ರವರು ಹೇಳಿದ ನಮ್ಮ ಭಾಗದ ಬೇಡಿಕೆಗಳನ್ನು ಈಡೇರಿಸಬೇಕೆಂದು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಳ್ಳುತ್ತೇನೆ” ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಕೆ.ಎಂ.ಎಫ್ ಅಧ್ಯಕ್ಷರಾದ ಬೀಮಾನಾಯ್ಕ್, ಪಶುಸಂಗೋಪನ ಸಚಿವ ಕೆ.ವೆಂಕಟೇಶ್, ಶಾಸಕರಾದ ಟಿ.ಬಿ. ಜಯಚಂದ್ರ ,ಕೆ.ಷಡಕ್ಷರಿ, ಡಾ. ರಂಗನಾಥ್, ಹೆಚ್.ವಿ.ವೆಂಕಟೇಶ್ , ಎಸ್.ಆರ್.ಶ್ರೀನಿವಾಸ್, ನಂಜೇಗೌಡ ವಿಧಾನ ಪರಿಷತ್ ಸದಸ್ಯ ರಾಜೇಂದ್ರ ಜಿಲ್ಲಾಧಿಕಾರಿ ಶ್ರೀನಿವಾಸ್, ಜಿಪಂ ಸಿಇಒ ಜೆ.ಪ್ರಭು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...