ತುಮಕೂರು | ಶೋಷಣೆಯನ್ನು ವಿರೋಧಿಸುವ ಪುರುಷರೂ ಸ್ತ್ರೀವಾದಿಗಳು: ಸಾಹಿತಿ ಎಲ್‌ ಜಿ ಮೀರಾ

Date:

Advertisements

ಸ್ತ್ರೀವಾದ ಪಶ್ಚಿಮಕ್ಕಷ್ಟೇ ಸೀಮಿತವಾಗಿಲ್ಲ. ಇದರ ಅನೇಕ ಬೇರುಗಳನ್ನು ವಚನ ಸಾಹಿತ್ಯದಲ್ಲಿ, ಬುದ್ಧ, ಗಾಂಧಿ, ಅಂಬೇಡ್ಕರ್ ಚಿಂತನೆಗಳಲ್ಲಿ ಕಾಣಬಹುದು. ಭಾರತಕ್ಕೇ ವಿಶಿಷ್ಟವಾದ ಸ್ತ್ರೀವಾದವನ್ನು ರೂಪಿಸುವಲ್ಲಿ ಅನೇಕ ಚಿಂತಕಿಯರು ಶ್ರಮಿಸಿದ್ದಾರೆ. ಎಲ್ಲ ಬಗೆಯ ಶೋಷಣೆಗಳನ್ನು ವಿರೋಧಿಸುವ ಗಂಡಸರೂ ಸ್ತ್ರೀವಾದಿಗಳೇ ಎಂದು ಸಾಹಿತಿ ಎಲ್ ಜಿ ಮೀರಾ ಅಭಿಪ್ರಾಯಪಟ್ಟರು.

ತುಮಕೂರು ವಿಶ್ವವಿದ್ಯಾನಿಲಯದ ಡಾ. ಡಿ ವಿ ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರ ಆಯೋಜಿಸಿದ್ದ ‘ಸ್ತ್ರೀ ವಾದಿ ಸಾಹಿತ್ಯ ವಿಮರ್ಶೆಯ ನೂತನ ಹೊಳಹುಗಳು’ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಇವರು ಪಶ್ಚಿಮದಲ್ಲಿ ಸ್ತ್ರೀವಾದ ಹಾದುಬಂದ ಘಟ್ಟಗಳನ್ನು ಪರಿಚಯಿಸುತ್ತ, ಕನ್ನಡದಲ್ಲಿ ಮಹಿಳಾ ಸಾಹಿತ್ಯ ಮತ್ತು ವಿಮರ್ಶೆಯ ಚರಿತ್ರೆಯ ಮೇಲೆ ಬೆಳಕು ಚೆಲ್ಲಿದರು. ಅಲಕ್ಷ್ಯಕ್ಕೊಳಗಾಗಿದ್ದ ಲೇಖಕಿಯರ ಬರಹಗಳನ್ನು ಎನ್ ಗಾಯತ್ರಿ, ವಿಜಯಾ ದಬ್ಬೆ ಮುಂತಾದ ವಿಮರ್ಶಕಿಯರು ಮರುಶೋಧಿಸಿ, ಚರ್ಚಿಸಿದ್ದಾರಲ್ಲದೆ, ಕನ್ನಡ ಸಾಹಿತ್ಯವನ್ನು ಸ್ತ್ರೀವಾದಿ ಓದಿಗೆ ಒಳಪಡಿಸಿ, ಸ್ತ್ರೀವಾದಿ ದೃಷ್ಟಿಯ ಹೊಸ ಸಾಹಿತ್ಯ ಸೃಷ್ಟಿಗೂ ಪ್ರೇರಣೆ ನೀಡಿದರು” ಎಂದು ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ಬೀದರ್‌ ಲೋಕಸಭಾ | ಪ್ರಜಾಪ್ರಭುತ್ವ ಹಬ್ಬದಲ್ಲಿ ಗಣ್ಯರು, ವೃದ್ಧರು, ಮಹಿಳೆಯರು ಮತದಾನ

ಕಾರ್ಯಕ್ರಮದಲ್ಲಿ ವಿವಿ ಡಾ ಡಿ ವಿ ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರದ ಅಧ್ಯಕ್ಷ ಪ್ರೊ. ನಿತ್ಯಾನಂದ ಬಿ ಶೆಟ್ಟಿ, ಸಾಹಿತಿಗಳಾದ ಡಾ. ರವಿಕುಮಾರ್ ನೀಹ, ಗುರುಪ್ರಸಾದ್ ಕಂಟಲಗೆರೆ, ಸಹಪ್ರಾಧ್ಯಾಪಕಿ ಡಾ. ಗೀತಾ ವಸಂತ, ಪ್ರಾಧ್ಯಾಪಕರಾದ ಪ್ರೊ. ಅಣ್ಣಮ್ಮ, ಡಾ. ಪಿ ಎಂ ಗಂಗಾಧರಯ್ಯ ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X