ತುಮಕೂರು | ನಿರುದ್ಯೋಗ ಭತ್ಯೆ ನೀಡುವಂತೆ ಮನರೇಗಾ ಕಾರ್ಮಿಕರ ಆಗ್ರಹ

Date:

Advertisements

ಮನರೇಗಾದಲ್ಲಿ ಉದ್ಯೋಗ ಖಾತ್ರಿಪಡಿಸಬೇಕು, ಇಲ್ಲದಿದ್ದಲ್ಲಿ ನಿರುದ್ಯೋಗ ಭತ್ಯೆ ನೀಡಬೇಕೆಂದು ಆಗ್ರಹಿಸಿ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಕೋಡಗದಾಲ ಗ್ರಾಮ ಪಂಚಾಯಿತಿ ಪಿಡಿಒ ಸೌಮ್ಯವತಿಗೆ ಮನರೇಗಾ ಕೂಲಿ ಕಾರ್ಮಿಕರ ಸಂಘಟನೆಯ ಕೂಲಿಕಾರರು ಮನವಿ ಸಲ್ಲಿಸಿದರು.

“ಕೋಡಗದಾಲ ಗ್ರಾಮ ಪಂಚಾಯಿತಿಯಲ್ಲಿ ಕಂಪ್ಯೂಟರ್ ಆಪರೇಟರ್ ಅವರದ್ದೇ ದರ್ಬಾರ್ ಆಗಿದೆ. ಗ್ರಾ.ಪಂ ವ್ಯಾಪ್ತಿಯಲ್ಲಿ ಐಇಸಿ ಚುಟುವಟಿಕೆ ನಿಷ್ಕ್ರಿಯಗೊಂಡು ಜನರಿಗೆ ಮನರೇಗಾ ಬಗ್ಗೆ ಮಾಹಿತಿ ಇಲ್ಲವಾಗಿದೆ. ಇದರ ಪರಿಣಾಮ ಮನರೇಗಾ ಕೂಲಿ ಹಣ ಪ್ರಭಾವಿಗಳ ಪಾಲಾಗುತ್ತಿದೆ. ಕೂಲಿ ಕೆಲಸ ಕೇಳಲು ಹೋದರೆ ಪಿಡಿಒ ಜೋರಾಗಿ ಮಾತನಾಡುತ್ತಾರೆ. ಯಾವುದೇ ಮಾಹಿತಿ ನೀಡದೆ ಸಬೂಬು ನೀಡಿ ಸಾಗಾಕುತ್ತಾರೆ” ಎಂದು ಮನರೇಗಾ ಕೂಲಿ ಕಾರ್ಮಿಕರ ಸಂಘಟನೆಯ ಮುಖಂಡ ಎಸ್ ಎ ಮುಕ್ಕಾಬಿ ಆರೋಪಿಸಿದರು.

“ಫಾರಂ ನಂಬರ್ 6 ರಲ್ಲಿ ಅರ್ಜಿ ಸಲ್ಲಿಸಿದ ಕೂಡಲೇ ಕೂಲಿ ಕೆಲಸ ನೀಡಬೇಕು. ಕೃಷಿ ಕಾರ್ಮಿಕರಿಗೆ ನೂರು ದಿನ ಉದ್ಯೋಗ ಖಾತ್ರಿ ಮಾಡಬೇಕು. ಆದರೆ ಕೋಡಗದಾಲ ಗ್ರಾ.ಪಂನಲ್ಲಿ 200 ಮಂದಿ ಅರ್ಜಿ ಸಲ್ಲಿಸಿದರೆ 70 ಜನರಿಗೆ ಮಾತ್ರ ಕೂಲಿ ಕೆಲಸ ಕೊಟ್ಟಿದ್ದಾರೆ. ಹಾಗಾಗಿ ಉಳಿದ 130 ಜನರಿಗೆ ನಿರುದ್ಯೋಗ ಭತ್ಯೆ ನೀಡಬೇಕು” ಎಂದು ಆಗ್ರಹಿಸಿದರು.

Advertisements

“ಮುಖ ತೋರಿಕೆಗೆ ಕೂಲಿ ಕಾರ್ಮಿಕರನ್ನು ಕರೆದುಕೊಂಡು ಹೋಗಿ ಫೋಟೋ ತೆಗೆಸಿ, ಮನರೇಗಾ ಕಾಮಗಾರಿ ಮಾಡಿಸಿ, ವಂಚಿಸುತ್ತಿದ್ದಾರೆ” ಎಂದು ಆರೋಪಿಸಿದರು.

“ಕಾರ್ಮಿಕರಿಗೆ ಉದ್ಯೋಗ ಖಾತ್ರಿ ಯೋಜನೆ ಬಗ್ಗೆ ಸರಿಯಾದ ಮಾಹಿತಿ ನೀಡುತ್ತಿಲ್ಲ. ಉದ್ಯೋಗ ಖಾತ್ರಿಯನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರದ ಗ್ರಾಮ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು” ಒತ್ತಾಯಿಸಿದರು‌.

“ಕೋಡಗದಾಲ, ಬ್ಯಾಲ್ಯ, ಪುರವಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಐಇಸಿ ಚುಟುವಟಿಕೆಗಳು ನಿಷ್ಕ್ರಿಯವಾಗಿದ್ದು, ಜನರಿಗೆ ಉದ್ಯೋಗ ಖಾತ್ರಿ ಬಗ್ಗೆ ಮಾಹಿತಿಯೇ ಇಲ್ಲದಂತಾಗಿದೆ. ಇಲ್ಲಿಯ ಐಇಸಿ ಕೋಆರ್ಡಿನೇಟರ್ ಯಾರೆಂಬುದೇ ತಿಳಿಯುತ್ತಿಲ್ಲ. ಹಾಗಾಗಿ ಮನರೇಗಾ ಕೆಲಸ ಪ್ರಭಾವಿಗಳ ಪಾಲಾಗುತ್ತಿದೆ. ಬಡ ಕೂಲಿ ಕಾರ್ಮಿಕರು ಫೋಟೋಕ್ಕೆ ಸೀಮಿತವಾಗಿ, ಉದ್ಯೋಗ ಖಾತ್ರಿ ಹಣ ಪ್ರಭಾವಿಗಳ ಜೇಬಿಗೆ ಸೇರುತ್ತಿದೆ. ಮಧುಗಿರಿ ಮನರೇಗಾ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಕೂಲಿಕಾರರ ಕೈಯಲ್ಲಿ ಮೂಲ ಜಾಬ್ ಕಾರ್ಡ್‌ಗಳೂ ಇಲ್ಲ” ಎಂದು ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಬರ ಪರಿಹಾರ ವಿಚಾರದಲ್ಲಿ ರೈತರಿಗೆ ಮಲತಾಯಿ ಧೋರಣೆ: ಎಐಕೆಕೆಎಸ್

ಪ್ರತಿಭಟನೆಯಲ್ಲಿ ಮನರೇಗಾ ಕಾರ್ಮಿಕರುಗಳಾದ ರಂಗಸ್ವಾಮಯ್ಯ, ರಾಮಕ್ಕ, ಆದಿಲಕ್ಷ್ಮಮ್ಮ, ಪಾಪಕ್ಕ, ಜಬೀನ್ ತಾಜ್, ಚಿಕ್ಕರಂಗಮ್ಮ, ಲಕ್ಕಮ್ಮ, ಗುರುಮೂರ್ತಿ, ಪರಮೇಶ್ವರ್, ಕದರಪ್ಪ, ಹನುಮಕ್ಕ, ಗಂಗಮ್ಮ, ಯಲ್ಲಮ್ಮ, ರಾಜಣ್ಣ, ಶಕುಂತ, ಸುನಂದಮ್ಮ, ರಾಜಮ್ಮ, ಶಾಂತಮ್ಮ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X