ತುಮಕೂರು | ಕೆರೆಯಲ್ಲಿ ನವ ವಿವಾಹಿತೆ ಶವವಾಗಿ ಪತ್ತೆ; ಕೊಲೆ ಆರೋಪ

Date:

Advertisements

ಕಳೆದ ಒಂಭತ್ತು ತಿಂಗಳ ಹಿಂದೆ ವಿವಾಹವಾಗಿದ್ದ ಯುವತಿಯೋರ್ವಳು ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ಕೊಲೆಗೈದಿರುವುದಾಗಿ ಯುವತಿಯ ಕುಟುಂಬಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ.

ಗುಬ್ಬಿ ತಾಲೂಕಿನ ಬೊಮ್ಮೇನಹಳ್ಳಿ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ವರದಕ್ಷಿಣೆ ಕಿರುಕುಳ ನೀಡಿ ಕೊಲೆ ಮಾಡಿ, ಆ ಬಳಿಕ ಕೆರೆಯಲ್ಲಿ ಬಿಸಾಡಿರುವ ಶಂಕೆ ವ್ಯಕ್ತಪಡಿಸಿ ಮೃತ ಯುವತಿಯ ಕುಟುಂಬಸ್ಥರು ನೀಡಿದ ದೂರಿನ ಹಿನ್ನೆಲೆಯಲ್ಲಿ ಚೇಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕಸಬ ಹೋಬಳಿ ದೊಡ್ಡ ಕಟ್ಟಿಗೇನಹಳ್ಳಿ ಗ್ರಾಮದ ಕಲಾವತಿ ಪಂಚಾಕ್ಷರಯ್ಯ ದಂಪತಿಯ ಪುತ್ರಿ ವಿನುತ(23) ಮೃತಪಟ್ಟ ನವ ವಧು.

Advertisements

“ಕಳೆದ ಒಂಬತ್ತು ತಿಂಗಳ ಹಿಂದೆ ಅಂದರೆ 2023ರ ಜನವರಿಯಲ್ಲಿ ನಿಟ್ಟೂರು ಹೋಬಳಿ ಬೊಮ್ಮೇನಹಳ್ಳಿ ರವೀಶ್ ಎಂಬಾತನ ಜೊತೆ ವಿವಾಹ ಮಾಡಲಾಗಿತ್ತು. ಮನೆ ಕಟ್ಟಬೇಕೆಂದು ಎರಡು ಲಕ್ಷ ಹಣ ತರುವಂತೆ ರವೀಶ್ ಹಾಗೂ ಕುಟುಂಬದವರು ಕಿರುಕುಳ ನೀಡಿ ಕೊಲೆ ಮಾಡಿ ಕೆರೆಯಲ್ಲಿ ಬಿಸಾಡಿದ್ದಾರೆ” ಎಂದು ಆರೋಪಿಸಿ ಮೃತರ ತಾಯಿ ಕಲಾವತಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ.

“90 ಗ್ರಾಂ ಚಿನ್ನದ ಒಡವೆಗಳು ನೀಡಿ ಮದುವೆ ಮಾಡಿಕೊಡಲಾಗಿತ್ತು. ಆರಂಭದಲ್ಲಿ ಗಂಡ ಹೆಂಡತಿ ಅನ್ಯೋನ್ಯವಾಗಿದ್ದರು. ಕೆಲ ದಿನದಲ್ಲೇ ನಿತ್ಯ ಹಣಕ್ಕಾಗಿ ಪೀಡಿಸಿ ಕಿರುಕುಳ ನೀಡುತ್ತಿದ್ದರು. ಕುಡುಗೋಲು ಬಳಸಿ ಮುಖದ ಮೇಲೆ ಗಾಯ ಮಾಡಿದ್ದು, ಜಗಳ ಮಾಡುತ್ತಿದ್ದ ಬಗ್ಗೆ ಮಗಳು ಫೋನ್ ಮಾಡಿ ತಿಳಿಸಿದ್ದಳು” ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ದಲಿತ ಯುವಕನನ್ನು ಮರಕ್ಕೆ ಕಟ್ಟಿ ಹಲ್ಲೆ; ಓರ್ವ ಆರೋಪಿ ಬಂಧನ

ಎರಡು ಲಕ್ಷ ಹಣಕ್ಕೆ ಪೀಡಿಸಿ ಆರೋಪಿ ರವೀಶ್ ಸೇರಿದಂತೆ ಒಟ್ಟು ಆರು ಮಂದಿ ಕುಟುಂಬಸ್ಥರು ಒಗ್ಗೂಡಿ ಕೊಲೆ ಮಾಡಿ ಕೆರೆಗೆ ಬಿಸಾಡಿದ್ದು, ಸೊಪ್ಪು ತರಲು ಹೋದವಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ವದಂತಿ ಹಬ್ಬಿಸಿದ್ದಾರೆ ಎಂದು ದೂರಿನಲ್ಲಿ ವಿವರಿಸಿದ್ದಾರೆ.

ಕೊಲೆ ಪ್ರಕರಣ ದಾಖಲಿಸಿರುವ ಪೊಲೀಸರು, ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

Download Eedina App Android / iOS

X