ಒಪಿಡಿ ಬಂದ್ : ತುಮಕೂರಿನಲ್ಲಿ ವೖದ್ಯರಿಂದ ಮೌನ ಪ್ರತಿಭಟನೆ

Date:

Advertisements

ಕೋಲ್ಕತ್ತಾದ ವೈದ್ಯಕೀಯ ಕಾಲೇಜಿನ ಸ್ನಾತಕೋತ್ತರ ವಿದ್ಯಾರ್ಥಿನಿಯ ಅಮಾನುಷ ಹತ್ಯೆ ಮತ್ತು ಮುಂದುವರೆದು ಪ್ರತಿಭಟನೆ ನಿರತ ವೈದ್ಯರನ್ನು ಗುರಿಯಾಗಿಸಿಕೊಂಡು ಗುಂಪೊಂದು ಹಲ್ಲೆ ಮಾಡಿ ಅರಾಜಕತೆ ಮೆರೆದಿರುವುದನ್ನು ಖಂಡಿಸಿ ತುರ್ತು ಸೇವೆ ವಿಭಾಗವನ್ನು ಹೊರತುಪಡಿಸಿ ಎಲ್ಲ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ಹೊರರೋಗಿ (ಒಪಿಡಿ) ವೈದ್ಯಕೀಯ ಸೇವೆ ಬಂದ್ ಮಾಡಿ ತುಮಕೂರು ಜಿಲ್ಲೆಯಲ್ಲಿ ವೖದ್ಯರು ಮೌನ ಪ್ರತಿಭಟನೆ ನಡೆಸಿದ್ದಾರೆ.

ಇಂದು ಬೆಳಿಗ್ಗೆ 6 ಗಂಟೆಯಿಂದಲೇ ಎಲ್ಲ ಸರ್ಕಾರಿ ಮತ್ತು ಖಾಸಗಿ ಕ್ಲಿನಿಕ್‌ಗಳು ಓಪಿಡಿ ಬಂದ್ ಮಾಡಿದ್ದು, ನಾಳೆ ಬೆಳಿಗ್ಗೆ 6 ಗಂಟೆಯವರೆಗೆ ಯಾವುದೇ ರೀತಿಯ ಓಪಿಡಿ ಸೇವೆಗಳು ಜಿಲ್ಲೆಯಾದ್ಯಂತ ಲಭ್ಯ ಇರುವುದಿಲ್ಲ.

ನಗರದ ಸಿದ್ದಗಂಗಾ ಆಸ್ಪತ್ರೆ, ಸಿದ್ದಾರ್ಥ ಆಸ್ಪತ್ರೆ, ಶ್ರೀದೇವಿ ಆಸ್ಪತ್ರೆ ಸೇರಿದಂತೆ ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳು, ಕ್ಲಿನಿಕ್‌ಗಳು, ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಬಂದ್ ಆಗಿರುವುದರಿಂದ ಜ್ವರ, ನೆಗಡಿ, ಕೆಮ್ಮು ಸೇರಿದಂತೆ ಇನ್ನಿತರೆ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯಲು ರೋಗಿಗಳು ಪರದಾಡುವಂತಾಗಿದೆ.

Advertisements

ವೈದ್ಯಕೀಯ ಸಂಸ್ಥೆಗಳು ಮತ್ತು ವೈದ್ಯಕೀಯ ಸಿಬ್ಬಂದಿ ಅತಿ ಸೂಕ್ಷ್ಮ ಪರಿಸ್ಥಿತಿಯಲ್ಲಿ ಆತಂಕದಿಂದ ತಮ್ಮ ಸೇವಾಕ್ಷೇತ್ರದಲ್ಲಿ ಅಭದ್ರತೆಯೊಂದಿಗೆ ಕರ್ತವ್ಯ ನಿರ್ವಹಿಸುವ ಸನ್ನಿವೇಶಗಳನ್ನು ಸೃಷ್ಠಿಸಲಾಗುತ್ತಿದೆ. ಆದ್ದರಿಂದ ಮಾನವೀಯ ಕಾಳಜಿಯ ಸೇವಾಕ್ಷೇತ್ರವನ್ನು ಕಲುಷಿತಗೊಳಿಸುವ ಈ ಪ್ರಯತ್ನಗಳನ್ನು ಮೊಳೆಕೆಯಲ್ಲೆ ನಿಷ್ಕ್ರೀಯಗೊಳಿಸದಿದ್ದಲ್ಲಿ ಮುಂದೆ ಭಾರೀ ಬೆಲೆ ತೆರಬೇಕಾಗುತ್ತದೆ ಐಎಂಎ ಜಿಲ್ಲಾಧ್ಯಕ್ಷ ಡಾ. ಹೆಚ್.ವಿ. ರಂಗಸ್ವಾಮಿ ಹೇಳಿದರು.

ಈ ನಿಟ್ಟಿನಲ್ಲಿ ಅಗತ್ಯ ಎಲ್ಲಾ ಕ್ರಮಗಳನ್ನು ಸರ್ಕಾರದ ಮಟ್ಟದಲ್ಲಿ ಕೈಗೊಳ್ಳಲು ನಮ್ಮ ಹಕ್ಕೊತ್ತಾಯವನ್ನು ದಾಖಲಿಸಲು ಸರ್ಕಾರ ಮತ್ತು ಸಾರ್ವಜನಿಕರ ಗಮನ ಸೆಳೆಯುವ ಸಲುವಾಗಿ ಇಂದು ಬೆಳಿಗ್ಗೆ 6 ಗಂಟೆಯಿಂದ ನಾಳೆ ಬೆಳಿಗ್ಗೆ 6 ಗಂಟೆವರೆಗೆ ಎಲ್ಲ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಈ ಅವಧಿಯಲ್ಲಿ ತುರ್ತು ಮತ್ತು ಅಗತ್ಯ ಸೇವೆಗಳ ಲಭ್ಯ ಇರುತ್ತವೆ ಎಂದು ಅವರು ತಿಳಿಸಿದ್ದಾರೆ.

ಎಂದಿನಂತೆ ತುರ್ತುಸೇವೆಗಳ ಲಭ್ಯವಿದ್ದು, ದೇಶಾದ್ಯಂತ ನಡೆಯುತ್ತಿರುವ ವೈದ್ಯರ ಮುಷ್ಕರವನ್ನು ಬೆಂಬಲಿಸಲು ಸಹಕರಿಸುವಂತೆ ಆಸ್ಪತ್ರೆಯ ವೈದ್ಯರು ಮನವಿ ಮಾಡಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X