ತುಮಕೂರು | ಬುದ್ಧರ ತತ್ವ ಸಿದ್ಧಾಂತಗಳನ್ನು ಅಳವಡಿಸಿಕೊಂಡಾಗ ನಮ್ಮ ಜೀವನ ಸಾರ್ಥಕ : ಗೃಹ ಸಚಿವ ಡಾ. ಜಿ. ಪರಮೇಶ್ವರ್

Date:

Advertisements

 ಭಗವಾನ್ ಬುದ್ಧರ ತತ್ವ ಸಿದ್ಧಾಂತಗಳನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ನಮ್ಮ ಜೀವನವು ಸಾರ್ಥಕವಾಗುತ್ತದೆ ಎಂದು ರಾಜ್ಯದ ಗೃಹ ಸಚಿವ ಹಾಗೂ ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ. ಜಿ ಪರಮೇಶ್ವರ್ ತಿಳಿಸಿದರು. 

ತುಮಕೂರು ನಗರದ ಹೊರವಲಯದಲ್ಲಿರುವ ಸಿದ್ಧಾರ್ಥ ನಗರದಲ್ಲಿ ಶ್ರಿ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯವತಿಯಿAದ ಆಯೋಜಿಸಿದ್ಧಂತಹ ಬುದ್ಧ ಪೌರ್ಣಮಿಯ ಕಾರ್ಯಕ್ರಮದಲ್ಲಿ ಬುದ್ಧನ ವಿಗ್ರಹಕ್ಕೆ ಪುಷ್ಪಾರ್ಚನೆಯನ್ನು ಮಾಡಿ ಮಾತನಾಡಿದ ಅವರು,  ಭಗವಾನ್ ಬುದ್ಧರು ಮನುಷ್ಯ ಕುಲಕ್ಕೆ ನೀಡಿದ ವಿಚಾರಗಳು, ತತ್ವ ಸಿದ್ಧಾಂತಗಳು ಸಾವಿರಾರು ವರ್ಷಗಳು ಕಳೆದರೂ ಇನ್ನೂ ಜೀವಂತವಾಗಿದೆ ಹಾಗೂ ಮುಂದೆಯೂ ಇರುತ್ತದೆ ಎಂದರೆ ಅವರ ವಿಚಾರಗಳು ಎಷ್ಟು ಮಹತ್ವದ್ದು ಎಂದು ಯೋಚಿಸಬೇಕು. ಮನುಷ್ಯ ಪ್ರತಿನಿತ್ಯ ಅನುಭವಿಸುವ ದುಃಖ ದುಮ್ಮಾನಗಳಿಗೆ, ಕಷ್ಟಗಳಿಗೆ ಮುಕ್ತಿದೊರೆಯುವ ಮಾರ್ಗವನ್ನು ಮಾನವ ಕುಲಕ್ಕೆ ತೋರಿಸಿಕೊಟ್ಟವರು ಭಗವಾನ್ ಬುದ್ಧರು. ಭಗವಾನ್ ಬುದ್ಧ ಹಾಗೂ ಅವರ ವಿಚಾರಗಳು ಯಾವಕಾಲಕ್ಕೂ ಪ್ರಸ್ತುತವೆನಿಸುತ್ತದೆ. ಇಂತಹ ವಿಚಾರಗಳನ್ನು ತತ್ವ ಸಿದ್ಧಾಂತಗಳನ್ನು ಸಾಕಷ್ಟು ರಾಷ್ಟçಗಳು ಅಳವಡಿಸಿಕೊಂಡು ಮುಂದುವರೆಯುತ್ತಿದೆ ಎಂದು ಹೇಳಿದರು

.ಸಿಬಿಐ ನ್ಯಾಯಲಯದ ನ್ಯಾಯಾಧೀಶರಾದ ಎಚ್ ಎ ಮೋಹನ್ ಮಾತನಾಡಿ ಮಾನವ ಕುಲಕ್ಕೆ ಶಾಂತಿಯನ್ನು ಭೋದಿಸಿದ ಮಾನವನ ಕಷ್ಟ ದುಃಖಗಳಿಗೆ ಸೂಕ್ತ ಮಾರ್ಗವನ್ನು ಸೂಚಿಸಿದವರು ಮಹಾನ್ ಚೇತನ ಗೌತಮ ಬುದ್ಧ. ಇವರ ತತ್ವಗಳನ್ನು ನಾವು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. 

Advertisements

ಸಾಹೇ ವಿವಿಯ ಉಪಕುಲಪತಿಗಳಾದ ಡಾ. ಕೆ.ಬಿ. ಲಿಂಗೇಗೌಡ ಮಾತನಾಡಿ ಭಗವಾನ್ ಬುದ್ಧರ ತತ್ವ ಸಿದ್ಧಾಂತಗಳನ್ನು ಅಂಬೇಡ್ಕರ್ ಅವರ ವಿಚಾರಗಳನ್ನು ಮೈಗೂಡಿಸಿಕೊಂಡಿದ್ದವರು ಡಾ.ಎಚ್.ಎಂ. ಗಂಗಾಧರಯ್ಯನವರು, ಹಾಗಾಗಿಯೇ ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯನ್ನು ಕಟ್ಟಿ ಸಾಕಷ್ಟು ಬಡ ವಿದ್ಯಾರ್ಥಿಗಳಿಗೆ ವಿದ್ಯಾದಾನವನ್ನು ಮಾಡಿದ್ದಾರೆ. ಇವರ ಹಾದಿಯಲ್ಲೇ ಡಾ. ಜಿ ಪರಮೇಶ್ವರ ರವರೂ ಕೂಡ ನಡೆಯುತ್ತಿದ್ದಾರೆ. ಈ ಸಂಸ್ಥೆ ಇನ್ನು ಎತ್ತರಕ್ಕೆ ಬೆಳೆಯಲಿ ಇದಕ್ಕೆ ನಮ್ಮೆಲ್ಲರ ಬೆಂಬಲ ಇದೆ ಎಂದು ಆಶಯ ವ್ಯಕ್ತಪಡಿಸಿದರು. 

ಇನ್ನು ಈ ಕಾರ್ಯಕ್ರಮದಲ್ಲಿ ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ನಂಜುಂಡಪ್ಪ, ಬೀದರ್ ಬೌದ್ಧ ವಿಹಾರದ ಭಿಕ್ಷಷು ಪೂಜ್ಯ ಬಂತೇಜಿರವರು, ಸಾಹೇ ವಿವಿಯ ಕುಲಸಚಿವರಾದ ಡಾ. ಅಶೋಕ್ ಮೆಹತ, ಪರಿಕ್ಷಾಂಗ ನಿಯಂತ್ರಕ ಡಾ. ಗುರುಶಂಕರ್, ಶ್ರೀ ಸಿದ್ಧಾರ್ಥ ದಂತ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ. ಪ್ರವೀಣ್ ಕುಡುವ, ಕುಲಪತಿಗಳ ಆಪ್ತ ಸಲಹೆಗಾರರಾದ ಡಾ. ವಿವೇಕ್ ವೀರಯ್ಯ, ವೈದ್ಯಕೀಯ ಅಧೀಕ್ಷಕರಾದ ಡಾ. ವೆಂಕಟೇಶ್, ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಎಂ.ಎಸ್ ರವಿಪ್ರಕಾಶ್ ಹಾಗೂ ಸಂಸ್ಥೆಯ ವಿವಿಧ ಕಾಲೇಜಿನ ಪ್ರಾಂಶುಪಾಲರು ಹಾಗೂ ಸಿಬ್ಬಂದಿಗಳು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು. 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X