ತುಮಕೂರು | ಪಿ. ಚಂದ್ರಿಕಾ, ಗೋವಿಂದರಾಜು ಎಂ ಕಲ್ಲೂರಿಗೆ ವೀಚಿ ಸಾಹಿತ್ಯ ಪ್ರಶಸ್ತಿ

Date:

Advertisements

ವೀಚಿ (ವೀ. ಚಿಕ್ಕವೀರಯ್ಯ) ಸಾಹಿತ್ಯ ಪ್ರತಿಷ್ಠಾನವು ತುಮಕೂರು ಜಿಲ್ಲೆಯ ಮೊಟ್ಟಮೊದಲ ಸಾಹಿತ್ಯಿಕ ಪ್ರತಿಷ್ಠಾನ (ಸ್ಥಾಪನೆ:2000) ವಾಗಿದ್ದು, 2023ರಲ್ಲಿ ಪ್ರಕಟವಾದ ಸಾಹಿತ್ಯ ಕೃತಿಗಳನ್ನು ಪರಿಗಣಿಸಿ  2024 ನೇ ಸಾಲಿನ ಸಾಹಿತ್ಯ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ.

ಬೆಂಗಳೂರಿನ ಪಿ. ಚಂದ್ರಿಕಾ ಅವರ ‘ಮೂವರು ಮಹಮದರು’ ಕೃತಿಗೆ  25 ಸಾವಿರ ನಗದು ಮತ್ತು  ಸ್ಮರಣಿಕೆಯನ್ನು ಒಳಗೊಂಡ ‘ವೀಚಿ ಸಾಹಿತ್ಯ ಪ್ರಶಸ್ತಿ’ ಹಾಗೂ ಕೇರಳ ಕೇಂದ್ರೀಯ ವಿಶ್ವವಿದ್ಯಾಲಯದ  ಕನ್ನಡ ಸಹಾಯಕ ಪ್ರಾಧ್ಯಾಪಕ ಡಾ. ಗೋವಿಂದರಾಜು ಎಂ. ಕಲ್ಲೂರು ಇವರ ‘ನಕ್ಷತ್ರಕ್ಕಂಟಿದ ಮುಟ್ಟಿನ  ನೆತ್ತರು’ ಕಥಾಸಂಕಲನಕ್ಕೆ 5,000 ರೂ.ಗಳ ನಗದು ಪುರಸ್ಕಾರ ಮತ್ತು ಸ್ಮರಣಿಕೆಯನ್ನು ಒಳಗೊಂಡ ‘ವೀಚಿ  ಯುವ ಸಾಹಿತ್ಯ ಪ್ರಶಸ್ತಿ’ಗೆ ಆಯ್ಕೆ ಮಾಡಲಾಗಿದೆ.

ಕತೆಗಾರ ತುಂಬಾಡಿ ರಾಮಯ್ಯ, ರಂಗಕರ್ಮಿ ಬೇಲೂರು ರಘುನಂದನ್, ಕವಿ ಟಿ. ಯಲ್ಲಪ್ಪ ಅವರಿದ್ದ ತೀರ್ಪುಗಾರರ ಸಮಿತಿಯಿಂದ  ಸಲ್ಲಿಕೆಯಾಗಿದ್ದ 180 ಕೃತಿಗಳನ್ನು ಪರಿಶೀಲಿಸಿ, ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ.  ಪುರಸ್ಕೃತರನ್ನು ಪ್ರತಿಷ್ಠಾನದ ಗೌರವ ಸಲಹೆಗಾರರಾದ ಪ್ರೊ.ಎಸ್.ಜಿ. ಸಿದ್ದರಾಮಯ್ಯ ಅವರು ಅಭಿನಂದಿಸಿದ್ದಾರೆ.

Advertisements

ಪ್ರಶಸ್ತಿ ಪ್ರದಾನ ಸಮಾರಂಭವನ್ನು ಜೂನ್ ತಿಂಗಳಲ್ಲಿ ಆಯೋಜಿಸಲಾಗುವುದೆಂದು ವೀಚಿ ಸಾಹಿತ್ಸ ಪ್ರತಿಷ್ಠಾನದ ಗೌರವ ಕಾರ್ಯದರ್ಶಿ ಎಂ.ಎಚ್.‌ ನಾಗರಾಜ್‌ ತಿಳಿಸಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X