ತುಮಕೂರು | ಏ.1ರಿಂದ ಕೊಬ್ಬರಿ ಖರೀದಿ ಆರಂಭ

Date:

Advertisements

ಕನಿಷ್ಠ ಬೆಂಬಲ ಬೆಲೆಯಡಿ ಸೋಮವಾರದಿಂದ (ಏಪ್ರಿಲ್ 1) ಕೊಬ್ಬರಿ ಖರೀದಿ ಪ್ರಕ್ರಿಯೆ ಆರಂಭವಾಗಲಿದೆ.

ನೋಂದಣಿ ಕಾರ್ಯ ಮುಗಿದ 20 ದಿನಗಳ ಬಳಿಕ ಸರ್ಕಾರ ಕೊಬ್ಬರಿ ಖರೀದಿಗೆ ಮುಂದಾಗಿದೆ. ತುಮಕೂರು ಜಿಲ್ಲೆಯ 26 ಕೇಂದ್ರಗಳಲ್ಲಿ ಏಕಕಾಲಕ್ಕೆ ಖರೀದಿ ಶುರುವಾಗಲಿದೆ. ಖರೀದಿ ಕೇಂದ್ರಗಳಲ್ಲಿ ಅಧಿಕಾರಿಗಳು, ಗ್ರೇಡರ್‌ಗಳು, ತೂಕದ ಯಂತ್ರ, ಕೊಬ್ಬರಿ ತುಂಬಲು ಬೇಕಾದ ಚೀಲಗಳು, ಸಂಗ್ರಹಕ್ಕೆ ಗೋದಾಮು ಸೇರಿದಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ.

ತುಮಕೂರು ಜಿಲ್ಲೆಯಾದ್ಯಂತ 27,212 ಮಂದಿ ರೈತರು 3,17,917 ಕ್ವಿಂಟಲ್‌ ಕೊಬ್ಬರಿ ಮಾರಾಟಕ್ಕೆ ನೋಂದಣಿ ಮಾಡಿದ್ದಾರೆ. ಆರಂಭದಲ್ಲಿ ಒಂದು ಕೇಂದ್ರದಲ್ಲಿ ದಿನವೊಂದಕ್ಕೆ 100 ಕ್ವಿಂಟಲ್‌ನಿಂದ 150 ಕ್ವಿಂಟಲ್‌ ಕೊಬ್ಬರಿ ಖರೀದಿಸಲಾಗುತ್ತದೆ. ಪ್ರತಿದಿನ 10ರಿಂದ 15 ಮಂದಿ ರೈತರು ಕೊಬ್ಬರಿ ಮಾರಾಟ ಮಾಡಬಹುದು. ಈಗಾಗಲೇ, ನೋಂದಣಿ ಮಾಡಿಕೊಂಡಿರುವ ಕೇಂದ್ರಗಳಲ್ಲಿಯೇ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ.

Advertisements

ಎಲ್ಲ ಖರೀದಿ ಕೇಂದ್ರಗಳ ಬಳಿ ಏಪ್ರಿಲ್‌ 6ರವರೆಗೆ ಮಾರುಕಟ್ಟೆಗೆ ಕೊಬ್ಬರಿ ತರಬೇಕಿರುವ ರೈತರ ಪಟ್ಟಿ ಪ್ರಕಟಿಸಲಾಗಿದೆ. ಹೆಸರು ನೋಂದಣಿ ಮಾಡಿಕೊಂಡಿರುವ ಆಧಾರದ ಮೇಲೆ ಪಟ್ಟಿ ಹಾಕಲಾಗಿದೆ. ಎಲ್ಲ ರೈತರು ಒಂದೇ ದಿನ ಕೇಂದ್ರಗಳ ಹತ್ತಿರ ಬಂದು ಕಾಯುವುದನ್ನು ತಪ್ಪಿಸುವ ಉದ್ದೇಶದಿಂದ ಮುಂಚಿತವಾಗಿಯೇ ರೈತರಿಗೆ ಮಾಹಿತಿ ನೀಡಲಾಗಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ವಿವಿಧ ಸಮುದಾಯಗಳ ಮುಖಂಡರೊಂದಿಗೆ ಸಭೆ; ಮತಯಾಚನೆ ಮಾಡಿದ ಕೈ ಅಭ್ಯರ್ಥಿ

ಈ ವರ್ಷ ಕೊಬ್ಬರಿ ಖರೀದಿಗೆ ಎರಡು ಬಾರಿ ನೋಂದಣಿ ಪ್ರಕ್ರಿಯೆ ನಡೆದಿತ್ತು. ಮೊದಲ ಬಾರಿಗೆ ಜನವರಿಯಲ್ಲಿ ನೋಂದಣಿ ಆರಂಭಿಸಲಾಯಿತು. ನೋಂದಣಿಯಲ್ಲಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದ ನಂತರ ಇಡೀ ಪ್ರಕ್ರಿಯೆಯನ್ನು ರದ್ದುಪಡಿಸಿ, ಮರುನೋಂದಣಿಗೆ ಅವಕಾಶ ಮಾಡಿಕೊಡಲಾಯಿತು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X