ತುಮಕೂರು | ರಾಜಣ್ಣ ನೇರ ನುಡಿ ಸ್ವಾಭಿಮಾನದ ನಾಯಕ : ಡಿಸಿಎಂ ಡಿ ಕೆ ಶಿವಕುಮಾರ್

Date:

Advertisements

ಬೆಂಗಳೂರಿನಂತೆ ತುಮಕೂರು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದ್ದು, ಅನೇಕ ಯೋಜನೆ ರೂಪಿಸುತ್ತಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

ತುಮಕೂರಿನ ಜೂನಿಯರ್ ಕಾಲೇಜು ಮೈದಾನದಲ್ಲಿ ಶನಿವಾರ ನಡೆದ ಸಚಿವ ಕೆ ಎನ್ ರಾಜಣ್ಣ ಅವರ 75ನೇ ಜನ್ಮದಿನ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಭಾಗವಹಿಸಿ ಮಾತನಾಡಿದರು.

“ತುಮಕೂರಿಗೆ ಹೆಚ್ಚಿನ ಶಕ್ತಿ ತುಂಬಲು, ಸ್ಯಾಟಲೈಟ್ ಟೌನ್ ಜತೆಗೆ, ಅಂತರನಗರ ರೈಲು ಹಾಗೂ ಮೆಟ್ರೋ ರೈಲು ನೀಡಲು ಡಿಪಿಆರ್ ಸಿದ್ಧಪಡಿಸಲಾಗುತ್ತಿದೆ. ಕಲ್ಪತರು ನಾಡು ತುಮಕೂರು ಜಿಲ್ಲೆಗೆ ತನ್ನದೇ ಆದ ಇತಿಹಾಸವಿದೆ. ಧಾರ್ಮಿಕವಾಗಿ, ಶೈಕ್ಷಣಿಕವಾಗಿ ದೊಡ್ಡ ಪರಂಪರೆ ಇದೆ” ಎಂದರು.

Advertisements

“ನೀವೆಲ್ಲರೂ ಒಗ್ಗಟ್ಟಾಗಿ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬಿ, ಅತಿ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲಿಸಿ, ನಿಮ್ಮೆಲ್ಲರ ಸೇವೆ ಮುಂದುವರಿಸಲು ಆಶೀರ್ವಾದ ಮಾಡಬೇಕು” ಎಂದು ಮನವಿ ಮಾಡಿದರು.

“ಇದು ಐತಿಹಾಸಿಕ ಜನ್ಮದಿನ ಕಾರ್ಯಕ್ರಮ. ನೇರ ನುಡಿ ಸ್ವಾಭಿಮಾನದ ನಾಯಕ ರೈತಾಪಿ ಜನರ ಬದುಕು ಸುಧಾರಣೆಯ ಗುರಿ ಹೊಂದಿರುವ, ಆತ್ಮೀಯ ಸ್ನೇಹಿತನ ಜನ್ಮದಿನವನ್ನು ಬಹಳ ಸಂಭ್ರಮದಿಂದ ಆಚರಿಸುತ್ತಿದ್ದೇವೆ. ರಾಜಣ್ಣ ಅವರಿಗೆ ಹಾಗೂ ಅವರ ಕುಟುಂಬಕ್ಕೆ ಜನರ ಸೇವೆ ಮಾಡಲು ಹೆಚ್ಚಿನ ಶಕ್ತಿ ನೀಡಲೆಂದು ಭಗವಂತನಲ್ಲಿ ಪ್ರಾರ್ಥನೆ ಮಾಡುತ್ತೇನೆ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

“ರೈತನಿಗೆ ಲಂಚ, ಬಡ್ತಿ, ನಿವೃತ್ತಿ, ಪಿಂಚಣಿ ಇಲ್ಲ. ರೈತರ ಹಿತಕ್ಕಾಗಿ ಸಹಕಾರ ಕ್ಷೇತ್ರಕ್ಕೆ ಹೆಚ್ಚು ಶಕ್ತಿ ನೀಡುತ್ತಿದ್ದೇವೆ. ರಾಜಣ್ಣ ಅವರು ಬಹಳ ಆಸಕ್ತಿಯಿಂದ ಈ ಸರ್ಕಾರದಲ್ಲಿ ಸಹಕಾರ ಸಚಿವರಾಗಿದ್ದಾರೆ. ನಾನು ಕೂಡ ಎಸ್ ಎಂ ಕೃಷ್ಣ ಅವರ ಅವಧಿಯಲ್ಲಿ ಸಹಕಾರ ಸಚಿವನಾಗಿದ್ದಾಗ, ರಾಜಣ್ಣ ಅವರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರನ್ನಾಗಿ ಹಾಗೂ ಷಡಕ್ಷರಿ ಅವರನ್ನು ಎಸ್ ಎಲ್ ಡಿ ಬ್ಯಾಂಕ್ ಅಧ್ಯಕ್ಷರನ್ನಾಗಿ ಮಾಡುವ ಅವಕಾಶ ನನಗೆ ಸಿಕ್ಕಿತ್ತು” ಎಂದು ಸ್ಮರಿಸಿದರು.

“ತುಳಿತಕ್ಕೆ ಒಳಗಾದ ಸಮಾಜದ ಧೀಮಂತ ನಾಯಕನಿಗೆ ಶುಭ ಹಾರೈಸಲು ನಾವು ಇಲ್ಲಿ ಸೇರಿದ್ದೇವೆ. ನಾನು ಹಾಗೂ ರಾಜಣ್ಣ ಅವರು ಸಿಯೋಲ್, ಜಪಾನ್ ಹಾಗೂ ದಕ್ಷಿಣ ಕೊರಿಯಾ ಇತರೆ ದೇಶಗಳಲ್ಲಿ ನಡೆದ ಅಂತಾರಾಷ್ಟ್ರೀಯ ಸಹಕಾರ ಸಹಭಾಗಿತ್ವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆವು. ಆ ಮೂಲಕ ಸಹಕಾರ ಕ್ಷೇತ್ರದ ಬಗ್ಗೆ ಹೆಚ್ಚು ಅಧ್ಯಯನ ಮಾಡಿದ್ದೆವು. ಈಗ ನಾವು ಸರ್ಕಾರದಲ್ಲಿ ಒಟ್ಟಿಗೆ ಕೆಲಸ ಮಾಡುತ್ತಿದ್ದೇವೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಅಸಮಾನತೆ ತೊಲಗಿಸುವುದೆ ನಿಜವಾದ ರಾಜಕೀಯದ ಗುರಿ : ಸಿ ಎಂ ಸಿದ್ದರಾಮಯ್ಯ

“ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಈ ಮಟ್ಟಕ್ಕೆ ಬೆಳೆದಿದ್ದಾರೆ. ಪಕ್ಷದ ಬೆಳವಣಿಗೆಗೆ ಶ್ರಮಿಸಿದ್ದಾರೆ. ಅವರು ತಮ್ಮ ಕೆಲಸವನ್ನು ಹೀಗೆ ಮುಂದುವರಿಸಿಕೊಂಡು ಹೋಗಲಿ. ದೇವರು ಅವರಿಗೆ ಹೆಚ್ಚಿನ ಶಕ್ತಿ ನೀಡಲಿ” ಎಂದು ಶುಭ ಕೋರಿದರು.

“ಸರ್ವರಿಗೂ ಸಮಬಾಳು, ಸಮಪಾಲು ಎಂಬ ತತ್ವದ ಮೇಲೆ ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಹೋಗಬೇಕು.
ನಾವು ಯಾವುದೇ ಜಾತಿ, ಧರ್ಮದಲ್ಲಿ ಹುಟ್ಟಿದ್ದರೂ ಎಲ್ಲರೂ ಒಟ್ಟಾಗಿ ಕೆಲಸ ಮಾಡಿಕೊಂಡು ಹೋಗಬೇಕು. ಮೇಲ್ಜಾತಿ, ಕೆಳ ಜಾತಿ ಎಂಬ ತಾರತಮ್ಯ ಬೇಡ. ಎಲ್ಲ ವರ್ಗಕ್ಕೆ ನಾವು ಶಕ್ತಿಯಾಗಿ ನಿಲ್ಲಬೇಕು. ಇದೇ ಕಾಂಗ್ರೆಸ್ ಪಕ್ಷದ ಸಿದ್ಧಾಂತ. ಅದರಂತೆ ರಾಜಣ್ಣ ಅವರ ಕುಟುಂಬ ಕೆಲಸ ಮಾಡುತ್ತಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X