ತುಮಕೂರು | ರಮಾಕುಮಾರಿ ರಾಜಕಾರಣಕ್ಕೆ ಬರಬೇಕು: ಮಲ್ಲಿಕಾ ಬಸವರಾಜು

Date:

Advertisements

ರಮಾಕುಮಾರಿ ಅವರು ತುಮಕೂರು ಜಿಲ್ಲಾ ಲೇಖಕಿಯರ ಸಂಘದ ಸಂಸ್ಥಾಪಕ ಅಧ್ಯಕ್ಷರಾಗಿ, ಕನ್ನಡ ಸಾಹಿತ್ಯ ಪರಿಷತ್ತಿನ ಮೊದಲ ಮಹಿಳಾ ಅಧ್ಯಕ್ಷರಾಗಿ ಸಾಕಷ್ಟು ಮೊದಲುಗಳಿಗೆ ಸಾಕ್ಷಿಯಾಗಿದ್ದಾರೆ. ಯಾವುದೇ ಪ್ರಶಸ್ತಿ ಸನ್ಮಾನಗಳಿಗೆ ಆಸೆ ಪಡದೆ ನಿಸ್ವಾರ್ಥವಾಗಿ ದುಡಿದ ರಮಾಕುಮಾರಿಯಂತಹವರು ರಾಜಕೀಯಕ್ಕೂ ಬಂದು ಮಹಿಳೆಯರ ಪರ ದನಿ ಎತ್ತಬೇಕು ಎಂದು ಕರ್ನಾಟಕ ಲೇಖಕಿಯರ ಸಂಘದ ಅಧ್ಯೆಕ್ಷೆ ಮಲ್ಲಿಕಾ ಬಸವರಾಜು ಆಶಯ ವ್ಯಕ್ತಪಡಿಸಿದರು.

ತುಮಕೂರು ನಗರದ ಸಾವಿತ್ರಿ ಓಶೋ ಧ್ಯಾನ ಕೇಂದ್ರದಲ್ಲಿ ಕರ್ನಾಟಕ ಲೇಖಕಿಯರ ಸಂಘದಿಂದ ಓದು ಲೇಖಕಿ ಬಳಗ, ವಿಚಾರ ಮಂಟಪ ಬಳಗ ಹಾಗೂ ಸಾಕ್ಷಿ ಪ್ರಕಾಶನ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪ್ರೊ. ಎಚ್ ಜಿ ಸಣ್ಣಗುಡ್ಡಯ್ಯ ಪ್ರಶಸ್ತಿ ಪುರಸ್ಕೃತರಾದ ನಿಮಿತ್ತ ಬಾ ಹ ರಮಾಕುಮಾರಿ ಅವರಿಗೆ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.

ಓದು ಬಳಗದ ಸಂಚಾಲಕಿ ಆಶಾರಾಣಿ ಬಗ್ಗನಡು ಪ್ರಸ್ತಾವಿಕ ನುಡಿಗಳನ್ನಾಡಿ, “ನಮ್ಮ ನಡುವಿನ ಅನನ್ಯ ವ್ಯಕ್ತಿತ್ವ ಬಾ ಹ ರಮಾಕುಮಾರಿಯವರದು. ಜನಪರ ಕಾಳಜಿಯ ಲೇಖಕಿಯಾಗಿ, ಸಾಮಾಜಿಕ ಬದ್ಧತೆಯನ್ನು ಉಸಿರಾಡುತ್ತಾ, ದನಿ ಇಲ್ಲದವರ ದನಿಯಾಗಿ ಈ ಹೊತ್ತಿಗೂ ದಣಿವರಿಯದೆ ದುಡಿಯುತ್ತಿರುವ ಈ ಜೀವ ಒಂದು ಸೋಜಿಗವೇ ಹೌದು. ಇಂತಹ ಮಾತೃ ಹೃದಯಿ ಅಂತಃಕರಣದ ರಮಾಕುಮಾರಿಯವರನ್ನು ಅಭಿನಂದಿಸುತ್ತಿರುವ ಈ ಕಾರ್ಯಕ್ರಮ ನಿಜಕ್ಕೂ ಅರ್ಥಪೂರ್ಣ” ಎಂದರು.

Advertisements

ಕಲೇಸಂ ತುಮಕೂರು ಶಾಖೆಯ ಉಪಾಧ್ಯಕ್ಷ ಸಿ ಎ ಇಂದಿರಾ ಅವರು ಅಭಿನಂದನಾ ನುಡಿಗಳನ್ನು ಆಡುತ್ತಾ, “ಸಾಹಿತಿಯಾಗಿ, ಸಮಾಜ ಸೇವಕಿಯಾಗಿ ಇವರು ಮಾಡಿರುವ ಸಾಧನೆಗಳು ಒಂದೆರಡಲ್ಲ. ತಮ್ಮ ನಿರಂತರ ಹೋರಾಟದ ಮೂಲಕ ಮಹಿಳೆಯರ ಹಕ್ಕುಗಳಿಗಾಗಿ ನಿಸ್ವಾರ್ಥವಾಗಿ ಹೋರಾಡಿದವರು ರಮಾಕುಮಾರಿಯವರು. ಇವರು ಜಿಲ್ಲಾ ಸಾಹಿತ್ಯ ಪರಿಷತ್‌ನ ಅಧ್ಯಕ್ಷರಾಗಿ ಮಾಡಿರುವ ಸೇವೆ ಅನನ್ಯವಾದದ್ದು. ಅಲ್ಲದೇ, ತುಮಕೂರಿನಲ್ಲಿ ಲೇಖಕಿಯರ ಸಂಘವನ್ನು ಸ್ಥಾಪಿಸಿ ತುಮಕೂರಿನ ಮಹಿಳಾ ಬರಹಗಾರರಿಗೆ ನಿರಂತರ ಪ್ರೋತ್ಸಾಹವನ್ನಿತ್ತಿದ್ದಾರೆ” ಎಂದು ಹೇಳಿದರು.

“ಅರಿವಿನ ಪಯಣದ ಮೂಲಕ ಜಿಲ್ಲಾದ್ಯಂತ ಮಹಿಳಾ ಹಕ್ಕುಗಳ ಕುರಿತು ಜಾಗೃತಿ ಮೂಡಿಸುವಲ್ಲಿಯೂ ಇವರು ಮುಂದಾಳತ್ವ ವಹಿಸಿದ್ದರು. ನಿವೃತ್ತ ನೌಕರರ ಸಂಘದ ಅಧ್ಯಕ್ಷರಾಗಿಯೂ ಕ್ರಿಯಾತ್ಮಕ ಕಾರ್ಯಕ್ರಮಗಳನ್ನು ಇವರು ನಿರ್ವಹಿಸುತ್ತಿದ್ದಾರೆ. ಸಮಾಜವು ಇವರ ನಿಸ್ವಾರ್ಥ ಸೇವೆಯನ್ನು ತಡವಾಗಿಯಾದರೂ ಗುರುತಿಸಿ ಗೌರವಿಸುತ್ತಿರುವುದು ಸಂತೋಷದ ವಿಷಯ” ಎಂದರು.

ಲೇಖಕಿ ಡಾ. ಶೈಲಾ ನಾಗರಾಜು ಮಾತನಾಡಿ, “ರಮಾಕುಮಾರಿಯವರು ಸಾಕಷ್ಟು ಮಂದಿ ಲೇಖಕಿಯರನ್ನು ಬೆಳೆಸಿದವರು. ಇವರ ಇಚ್ಛಾಶಕ್ತಿ ಮತ್ತು ಪ್ರಾಮಾಣಿಕತೆಗಳು ಎಲ್ಲರಿಗೂ ಮಾದರಿ. ಸಾಕಷ್ಟು ಹೋರಾಟಗಳಲ್ಲಿ ನಾವು ಜೊತೆಯಾಗಿ ಭಾಗವಹಿಸಿದ್ದೇವೆ. ಜನಮುಖಿಯಾಗಿ, ನೊಂದವರ ಪರವಾಗಿ ಹೋರಾಡುವುದನ್ನು ನಾನು ಅವರಿಂದ ಕಲಿತಿದ್ದೇನೆ. ತಮ್ಮ ಪ್ರೀತಿ ಹಾಗೂ ಕಾಳಜಿಯಿಂದಲೇ ಎಲ್ಲರನ್ನೂ ಜಯಿಸಿದವರು ರಮಾಕುಮಾರಿ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಸಾರ್ವಜನಿಕ ವಲಯದಲ್ಲಿ ʼಸಂವಿಧಾನ ಜಾಥಾʼಕ್ಕೆ ಉತ್ತಮ ಸ್ಪಂದನೆ: ಜಿಲ್ಲಾಧಿಕಾರಿ

“ಬಹುಮುಖಿ ಚಿಂತಕರು, ಪ್ರಗತಿಪರರು ಆಗಿರುವ ಇವರು ಸಾಕ್ಷರತಾ ಅಂದೋಲನದ ಮೂಲಕ ಜಿಲ್ಲಾದ್ಯಂತ ಕೆಲಸ ಮಾಡಿದವರು. ಸಾಹಿತ್ಯ ಮತ್ತು ಚಳುವಳಿ ಎರಡರಲ್ಲೂ ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ. ಹಲವಾರು ಕವನ ಸಂಕಲನಗಳನ್ನು, ಕೃತಿಗಳನ್ನು ರಚಿಸಿರುವ ಇವರು ಇಂದಿಗೂ ಅಷ್ಟೇ ಕ್ರಿಯಾಶೀಲರಾಗಿ ಕೆಲಸ ಮಾಡುತ್ತಾ, ನೂರಾರು ಬರಹಗಾರರಿಗೆ ಸ್ಪೂರ್ತಿಯಾಗಿದ್ದಾರೆ” ಎಂದರು.

ಕಾರ್ಯಕ್ರಮದಲ್ಲಿ ಜಲಜಾ ಜೈನ್, ಪಾರ್ವತಮ್ಮ ರಾಜಕುಮಾರ್, ಕಮಲನರಸಿಂಹ, ಸುನಂದಮ್ಮ, ಭಾರ್ಗವಿ, ಡಾ ಪ್ರಿಯಾಂಕ ಎಂ ಜಿ, ಉಮಾದೇವಿ ಗ್ಯಾರಳ್ಳ, ಡಾ. ಶ್ವೇತ ಮಹೇಂದ್ರ, ಮರಿಯಂಬೀ ಸೇರಿದಂತೆ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

Download Eedina App Android / iOS

X