ತುಮಕೂರು | ದಲಿತ ಕುಟುಂಬಗಳ ವಸತಿಗೆ ಭೂಮಿ ನೀಡುವಂತೆ ಉಪ ವಿಭಾಗಾಧಿಕಾರಿಗಳಿಗೆ ಮನವಿ

Date:

Advertisements

ದಲಿತ ಕುಟುಂಬ ವಾಸವಿರುವ ಸರ್ವೇ ನಂ.28ರಲ್ಲಿ ನಾಲ್ಕು ಎಕರೆ ಆಶ್ರಯ ಯೋಜನೆಯಡಿ ದಲಿತ ಕುಟುಂಬಗಳಿಗೆ ಮಂಜೂರು ಮಾಡಬೇಕಾಗಿ ಸ್ಥಳೀಯ ದಲಿತ ಕುಟುಂಬಸ್ಥರು ಉಪ ವಿಭಾಗಾಧಿಕಾರಿ ಗೌರವಕುಮಾರ್ ಶೆಟ್ಟಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ತುಮಕೂರು ಜಿಲ್ಲೆ ಗುಬ್ಬಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಉಪ ವಿಭಾಗಾಧಿಕಾರಿಗಳನ್ನು ಭೇಟಿ ಮಾಡಿದ ತೊರೇಹಳ್ಳಿ ಗ್ರಾಮಸ್ಥರು ಹಾಗೂ ದಲಿತ ಮುಖಂಡರು, “ಸರ್ವೇ ನಂ.39 ರಲ್ಲಿನ ಒಟ್ಟು 22 ಎಕರೆ ಜಮೀನಿನಲ್ಲಿ ಎರಡು ಎಕರೆ ಸ್ಮಶಾನಕ್ಕೆ ಹಲವು ಬಾರಿ ಮನವಿ ಸಲ್ಲಿಸಲಾಗಿತ್ತು. ಈಗ ಆ ಸ್ಥಳವನ್ನು ನಿವೇಶನಕ್ಕೆ ಒದಗಿಸುವುದು ಸೂಕ್ತವಲ್ಲ” ಎಂದು ವಾಸ್ತವ ಸ್ಥಿತಿ ಗತಿ ವಿವರಿಸಿದರು.

“ಆಶ್ರಯ ಯೋಜನೆಗೆ ಮೀಸಲಿಡಲು ತೊರೇಹಳ್ಳಿ ಗ್ರಾಮದಲ್ಲಿ ಈಗಾಗಲೇ ಸರ್ವೇ ನಂ.39ರಲ್ಲಿ ಎರಡು ಎಕರೆ ಜಮೀನು ಆಯ್ಕೆ ಮಾಡಿ ಅಳತೆ ಪ್ರಕ್ರಿಯೆ ನಡೆಸಲಾಗುತ್ತಿದೆ. ಆದರೆ ವಾಸಕ್ಕೆ ಯೋಗ್ಯವಲ್ಲದ ಈ ಜಾಗವನ್ನು ನಾವುಗಳು ಸ್ಮಶಾನಕ್ಕೆ ನೀಡುವಂತೆ ಮನವಿ ಮಾಡಿದ್ದೆವು” ಎಂದು ಹೇಳಿದರು.

Advertisements

“ವಾಸಕ್ಕೆ ಯೋಗ್ಯವಲ್ಲದ ಸ್ಥಳ ಕೈಬಿಟ್ಟು ಹಾಲಿ ಎ.ಕೆ ಕಾಲೋನಿ ಇರುವ ಸರ್ವೇ ನಂ.28ರಲ್ಲಿ ನಾಲ್ಕು ಎಕರೆ ಜಮೀನಿನಲ್ಲಿ ವಸತಿ ಯೋಜನೆಯಡಿ ದಲಿತ ಕುಟುಂಬಕ್ಕೆ ಮಾತ್ರ ಒದಗಿಸಿಕೊಡಬೇಕು. ಕಂದಾಯ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದು, ಒಕ್ಕಲೆಬ್ಬಿಸುವ ಕೆಲಸ ಮಾಡದೆ ಸರ್ವೇ ನಂ.28ರಲ್ಲಿ ನಾಲ್ಕು ಎಕರೆ ನಿವೇಶನಕ್ಕೆ ಹಾಗೂ ಸರ್ವೇ ನಂ.39ರಲ್ಲಿ ಎರಡು ಎಕರೆ ಸ್ಮಶಾನಕ್ಕೆ ಮಂಜೂರು ಮಾಡಬೇಕು” ಎಂದು ಮನವಿ ಸಲ್ಲಿಸಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಮಗ-ಸೊಸೆಯಿಂದಲೇ ಗೃಹ ಬಂಧನದಲ್ಲಿದ್ದ ವೃದ್ಧೆ ರಕ್ಷಣೆ

ಈ ಸಂದರ್ಭದಲ್ಲಿ ದಲಿತ ಮುಖಂಡರುಗಳಾದ ಕಿಟ್ಟದಕುಪ್ಪೆ ನಾಗರಾಜ್, ಚಂದ್ರು, ರಘು, ರಾಮಕೃಷ್ಣ, ನಾಗಣ್ಣ, ಚಂದ್ರಯ್ಯ, ಲಕ್ಷ್ಮೀಪತಿ, ರಂಗನಾಥ್, ರಾಮಸ್ವಾಮಿ, ಬೇವಿನಗುಡ್ಡಯ್ಯ, ನಾಗರಾಜು, ಮಂಜುನಾಥ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X