ತುಮಕೂರು | 1.80 ಲಕ್ಷ ರೂ. ಮೌಲ್ಯದ ಈರುಳ್ಳಿ ಕಳವು

Date:

Advertisements

ತುಮಕೂರು ನಗರದ ಶಿರಾ ಗೇಟ್ ಬಳಿ ಬುಧವಾರ ತಡರಾತ್ರಿ ಸುಮಾರು 1.80 ಲಕ್ಷ ರೂ. ಮೌಲ್ಯದ 24 ಚೀಲ ಈರುಳ್ಳಿ ಕಳುವಾಗಿದೆ. ತುಮಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈರುಳ್ಳಿ ವ್ಯಾಪಾರಿ ಮಹ್ಮದ್‌ ನೂರಲ್ಲ ಅವರು ಅ.30ರಂದು ಈರುಳ್ಳಿಯನ್ನು ಖರೀದಿಸಿ ತಂದಿದ್ದರು. ಅದರಲ್ಲಿ 61 ಚೀಲದಷ್ಟು ಮಾರಾಟ ಮಾಡಿದ್ದು, ಉಳಿದ 49 ಚೀಲ ಈರುಳ್ಳಿಯನ್ನು ತಮ್ಮ ಗೋಡೌನ್‌ನಲ್ಲಿಟ್ಟಿದ್ದರು. ಆದರೆ, ಮಾರನೆಯ ದಿನ ಗೋಡೌನ್‌ಗೆ ಬಂದು ನೋಡಿದಾಗ 24 ಚೀಲದಷ್ಟು ಈರುಳ್ಳಿ ಕಳ್ಳತನ ಆಗಿರುವುದು ಗೋತ್ತಾಗಿದೆ.

ಮಹ್ಮದ್‌ ನೂರಲ್ಲ ಅವರು ತಳ್ಳುವ ಗಾಡಿಯಲ್ಲಿ ಈರುಳ್ಳಿಯನ್ನು ನಗರದ ನಾನಾಕಡೆ ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದರು. ಶಿರಾ ಗೇಟ್‌ನ ಪುಟ್ಟಸ್ವಾಮಯ್ಯನಪಾಳ್ಯದ ಹತ್ತಿರ ಗೋಡೌನ್‌ ರೀತಿಯ ಶೆಡ್ ನಿರ್ಮಿಸಿ ಈರುಳ್ಳಿ ಸಂಗ್ರಹ ಮಾಡಿದ್ದರು. ಈರುಳ್ಳಿ ಬೆಲೆ ಗಗನಕ್ಕೇರುತ್ತಿರುವ ಬೆನ್ನಲ್ಲೇ ಅವರು ಸಂಗ್ರಹಿಸಿಟ್ಟಿದ್ದ ಈರುಳ್ಳಿ ಕಳುವಾಗಿದೆ.

Advertisements

ಈ ಹಿಂದೆ ಟೊಮೆಟೊ ದರ ಹೆಚ್ಚಳವಾದಾಗ ಟೊಮೊಟೊ ಕಳ್ಳತನ ಪ್ರಕರಣ ಹೆಚ್ಚಾಗಿದ್ದವು. ಈಗ ಈರುಳ್ಳಿ ಕಳ್ಳತನ ಆಗುತ್ತಿವೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X