ತುಮಕೂರು | ಮಹರ್ಷಿ ವಾಲ್ಮೀಕಿ ನಾಯಕ ಮಹಿಳಾ ಸಂಘದ ತಾಲೂಕು ಅಧ್ಯಕ್ಷರಾಗಿ ಸೌಭಾಗ್ಯಮ್ಮ ಆಯ್ಕೆ

Date:

Advertisements

ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನಲ್ಲಿ ಮಹರ್ಷಿ ವಾಲ್ಮೀಕಿ ನಾಯಕ ಸಂಘದ ಮಹಿಳಾ ಘಟಕದ ತಾಲೂಕು ಅಧ್ಯಕ್ಷರಾಗಿ ಸೌಭಾಗ್ಯಮ್ಮ ಆಯ್ಕೆಯಾಗಿದ್ದಾರೆ.

ಗುಬ್ಬಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ಮಹಿಳಾ ಘಟಕದಲ್ಲಿ ನಡೆದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ತಾಲೂಕು ಅಧ್ಯಕ್ಷರಾಗಿ ಸೌಭಾಗ್ಯಮ್ಮ, ಉಪಾಧ್ಯಕ್ಷರಾಗಿ ಸಾಕಸಂದ್ರ ಶಂಕರಮ್ಮ, ಹಾಗಲವಾಡಿ ಲತಾಮಣಿ, ಪುರ ಮಂಜುಳಾ ಹಾಗೂ ತೊಗರಿಗುಂಟೆ ಲಲಿತಮ್ಮ ಆಯ್ಕೆಯಾದರು. ಕಾರ್ಯದರ್ಶಿಯಾಗಿ ಮಾರಶೆಟ್ಟಿಹಳ್ಳಿ ರಾಧಾ ಮತ್ತು ಸಂಘಟನಾ ಕಾರ್ಯದರ್ಶಿಯಾಗಿ ಮಂಚಲದೊರೆ ನರಸಮ್ಮ ಇವರುಗಳನ್ನು ಆಯ್ಕೆ ಮಾಡಿ ಅಧಿಕೃತ ಘೋಷಣೆ ಮಾಡಲಾಗಿದೆ.

ಮಹರ್ಷಿ ವಾಲ್ಮೀಕಿ ನಾಯಕ ಮಹಿಳಾ ಸಂಘದ ನೂತನ ಅಧ್ಯಕ್ಷರಾದ ಸೌಭಾಗ್ಯಮ್ಮ ಈ ವೇಳೆ ಮಾತನಾಡಿ, ಕಳೆದ ಹತ್ತಾರು ವರ್ಷದಿಂದ ಸಮಾಜದ ಸಂಘಟನೆ ಕೆಲಸ ಮಾಡಿದ್ದೇನೆ. ಜವಾಬ್ದಾರಿ ಹೆಚ್ಚಾದ ಈ ಸಮಯದಲ್ಲಿ ನಮ್ಮದು ಹಿಂದುಳಿದ ಸಮುದಾಯವಾಗಿದೆ, ಶೈಕ್ಷಣಿಕ ಪ್ರಗತಿಗೆ ಮೊದಲ ಆದ್ಯತೆ ನೀಡಿ ತಾಲೂಕಿನ ನಮ್ಮ ಸಮಾಜದ ಬಡ ವಿದ್ಯಾರ್ಥಿಗಳಿಗೆ ಸಹಕಾರ ನೀಡುವ ಕೆಲಸ ಮಹಿಳಾ ಘಟಕ ಮಾಡಲಿದೆ. ಈ ನಿಟ್ಟಿನಲ್ಲಿ ಪದಾಧಿಕಾರಿಗಳ ಆಯ್ಕೆಯಾಗಿ ಹೋಬಳಿವಾರು ನಿರ್ದೇಶಕರ ಆಯ್ಕೆ ಸದ್ಯದಲ್ಲೇ ನಡೆಸಲಾಗುವುದು ಎಂದರು.

Advertisements

ಈ ಸಂದರ್ಭದಲ್ಲಿ ವಾಲ್ಮೀಕಿ ನಾಯಕ ಸಂಘದ ಎ.ನರಸಿಂಹಮೂರ್ತಿ, ಜಿ.ಎನ್.ಅಡವೀಶ್, ರಾಮಚಂದ್ರಪ್ಪ, ಡಿ.ದೇವರಾಜ್, ಹೇರೂರು ನಾಗರಾಜ್, ರಾಘವೇಂದ್ರ, ಜಿ.ಎಲ್.ರಂಗನಾಥ್, ಲಕ್ಷ್ಮಣ್ಣಪ್ಪ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X