ತುಮಕೂರು | ಬಡವರ ಅಭ್ಯುದಯ ಸಿದ್ದರಾಮಯ್ಯನವರ ಆಶಯ: ಸಚಿವ ಕೆ ಎನ್ ರಾಜಣ್ಣ

Date:

Advertisements

ಬಡವರ ಅಭ್ಯುದಯ ಆಗಬೇಕೆಂಬುದು ಸಿದ್ದರಾಮಯ್ಯ ಅವರ ಆಶಯ. ಅವರ ಅನ್ನಭಾಗ್ಯ ಯೋಜನೆ ಜನರಿಗೆ ಬದುಕು ನೀಡಿದೆ. ಜನರ ಸಮಸ್ಯೆಗಳಿಗೆ ಸ್ಪಂದನೆ ನೀಡುವ ಇಂಥವರು ಅಧಿಕಾರದಲ್ಲಿರಬೇಕು ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ ಅಭಿಪ್ರಾಯ ಪಟ್ಟರು.

ತುಮಕೂರು ಜಿಲ್ಲೆ ಮಧುಗಿರಿಯ ಕುರುಬರ ಸಮುದಾಯ ಭವನದಲ್ಲಿ ‘ಕನಕ ನೌಕರರ ಸಂಘʼದ ವತಿಯಿಂದ ಭಾನುವಾರ ಏರ್ಪಡಿಸಿಸಿದ್ದ ‘ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

“ಪ್ರಸ್ತುತದಲ್ಲಿ ಯಾವುದೇ ಭಿಕ್ಷುಕರೂ ಅನ್ನ ಬೇಡುತ್ತಿಲ್ಲ. ಅದಕ್ಕೆ ಕಾರಣ ಅನ್ನಭಾಗ್ಯ. ಬಡವರ ಕಾರ್ಯಕ್ರಮಗಳನ್ನು ತೆಗೆದುಕೊಂಡು ಹೋದರೆ ಸಿದ್ದರಾಮಯ್ಯ ಮೊದಲ ಆದ್ಯತೆ ನೀಡುತ್ತಾರೆ. ಅವರು ಎಂದಿಗೂ ನುಡಿದಂತೆ ನಡೆಯುವವರು. ಅವರು ಸುಳ್ಳು ಹೇಳುವವರಲ್ಲ. ಯಾರ ಬಗ್ಗೆಯೂ ಹೇಳಿಕೆ ಮಾತು ಕೇಳುವವರಲ್ಲ. ಎಲ್ಲರನ್ನೂ ಸಮಾನವಾಗಿ ಕೊಂಡೊಯ್ಯುತ್ತಾರೆ. ಆದ್ದರಿಂದ ನಮಗೆಲ್ಲ ಅವರು ಅಚ್ಚುಮೆಚ್ಚು” ಎಂದು ಹೇಳಿದರು.

Advertisements

“ಹೆಣ್ಣು-ಗಂಡು ಇಬ್ಬರಲ್ಲೂ ಸಮಾನವಾದ ಬುದ್ಧಿಶಕ್ತಿ ಇರುತ್ತದೆ. ಸೂಕ್ತ ಪರಿಸರ ಮತ್ತು ಮಾರ್ಗದರ್ಶನ ಇದ್ದಾಗ ಸಾಧನೆ ಮಾಡಲು ಸಾಧ್ಯ. ವಿದ್ಯೆಗೆ ಸರ್ವಸ್ವವನ್ನೂ ಗಳಿಸುವ ಶಕ್ತಿ ಇದೆ. ಯಾವುದೇ ಮಕ್ಕಳಲ್ಲೂ ಕೀಳರಿಮೆಯನ್ನು ಬೆಳೆಸಬಾರದು. ಇಬ್ಬರನ್ನೂ ಸಮಾನವಾಗಿ ಕಾಣುವುದರಿಂದ ಗುರಿ ಸಾಧಿಸಲು ಸಾಧ್ಯವಾಗುತ್ತದೆ” ಎಂದರು.

“1957ರಲ್ಲಿ ಶುಲ್ಕ ಪಾವತಿಸದ ಕಾರಣಕ್ಕೆ ಶಾಲೆಯಲ್ಲಿ ನನ್ನ ಸಹಪಾಠಿಯನ್ನು ಆಚೆಗೆ ಹಾಕಿದ್ದರು. ಅಸಹಾಯಕರಿಗೆ ನೆರವಾಗಬೇಕೆಂದು ಅಂದೇ ತೀರ್ಮಾನ ಮಾಡಿದ್ದೆ. ಇಂದು ವಿದ್ಯಾಭ್ಯಾಸಕ್ಕೆ ತೊಂದರೆಯಾಗಿದೆ ಎಂದು ಯಾರೇ ಬಂದರೂ ಫೀಸ್ ಎಷ್ಟೇ ಆಗಿದ್ದರೂ ಕೂಡ ಮೊದಲು ಅವರಿಗೆ ಸ್ಪಂದಿಸುತ್ತೇನೆ. ಮೂರನೇ ತಲೆಮಾರಿಗೆ ಭೂಮಿ ಕಡಿಮೆಯಾಗುತ್ತಾ ಹೋಗುತ್ತದೆ. ಆದ್ದರಿಂದ ವಿದ್ಯೆಯನ್ನು ಹೆಚ್ಚು ಮಾಡಿಕೊಳ್ಳಬೇಕು. ಸಹಕಾರ ಸ್ಮರಣೆ ಇರಬೇಕು” ಎಂದರು.

“ಅಸಹಾಯಕರಿಗೆ ಮತ್ತು ಧ್ವನಿ ಇಲ್ಲದವರ ಪರ ಧ್ವನಿ ಎತ್ತಿದಾಗ ಅದೇ ನಮಗೆ ದೇವರ ಆಶೀರ್ವಾದ. ನಮ್ಮ ನಡವಳಿಕೆಗಳು ದುರ್ಬಲ ವರ್ಗದವರ ಪರವಾಗಿ ಇರಬೇಕು. ಹೆಣ್ಣು ಮಕ್ಕಳಿಗೆ ಅವಕಾಶ ನೀಡಿದಾಗ ಪ್ರತಿಭಾವಂತಿಕೆ ತಿಳಿಯುತ್ತಿದೆ. ವಿದ್ಯೆ ಪಡೆದ ಹೆಣ್ಣು ಮಕ್ಕಳು ಸಮಾಜದ ಆಸ್ತಿ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ತಾಂತ್ರಿಕ ಸಮಸ್ಯೆಗಳಿಂದ ಹೊರಬರದ ಶಾಖೋತ್ಪನ್ನ ಕೇಂದ್ರಗಳು; ವಿದ್ಯುತ್ ಉತ್ಪಾದನೆ ಕುಸಿತ

“ದೊಡ್ಡೇರಿ ಹೋಬಳಿಯಲ್ಲೇ ನಾಲ್ಕೂವರೆ ಸಾವಿರ ಲೀಡ್. ಕುಂಚಿಟಿಗ ಸಮುದಾಯದ ವಿದ್ಯಾವಂತರೂ ನನಗೆ ಬೆಂಬಲ ನೀಡಿದರು. 96 ಸಾವಿರ ಮತಗಳು ಮಧುಗಿರಿ ಇತಿಹಾಸದಲ್ಲಿ ಯಾವ ಅಭ್ಯರ್ಥಿಗಳಿಗೂ ಬಿದ್ದಿಲ್ಲ. ಎಲ್ಲ ಸಮುದಾಯಗಳ ಋಣ ತೀರಿಸುತ್ತೇನೆ” ಎಂದು ಕೃತಜ್ಞತೆ ವ್ಯಕ್ತಪಡಿಸಿದರು.

ಈ ವೇಳೆ ಕೆಪಿಸಿಸಿ ವಕ್ತಾರ ನಿಕೇತ್ ರಾಜ್ ಮೌರ್ಯ ಹಾಗೂ ಕುರುಬ ಸಂಘದ ಮುಖಂಡ ಗೇಟ್ ಶಿವಣ್ಣ, ಸಂಪಾದಕ ಎಸ್ ನಾಗಣ್ಣ, ಕಾಂಗ್ರೆಸ್ ಮುಖಂಡ ತಂಗೋಟಿ ರಾಮಣ್ಣ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X