ತುಮಕೂರು | ಸ್ಲಂ ನಿವಾಸಿಗಳ ಬೇಡಿಕೆ ಈಡೇರಿಕೆಗೆ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ ಆಗ್ರಹ 

Date:

Advertisements

ಸ್ಲಂ ನಿವಾಸಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸ್ಲಂ ಜನಾಂದೋಲನ-ಕರ್ನಾಟಕ ಮತ್ತು ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

“ನಿವೇಶನ ರಹಿತ ಕುಟುಂಬಗಳಿಗೆ 4 ಎಕರೆ ಮೀಸಲಿಟ್ಟಿರುವ ಭೂಮಿಯನ್ನು ಸ್ವಾಧಿನಕ್ಕೆ ಪಡೆದುಕೊಂಡು ಮಂಡಳಿಯಿಂದ ವಸತಿ ನಿರ್ಮಿಸಲು ದಿಬ್ಬೂರು ದೇವರಾಜ್ ಅರಸು ಬಡಾವಣೆಯ ಸ್ಲಂ ನಿವಾಸಿಗಳಿಗೆ ಹಂಚಿಕೆ ಪತ್ರ ಮತ್ತು ನಗರ ಪಾಲಿಕೆಗೆ ಹಸ್ತಾಂತರಿಸಿಕೊಂಡು ಮೂಲಸೌಲಭ್ಯಗಳನ್ನು ಕಲ್ಪಿಸಬೇಕು” ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

“ಎನ್ ಆರ್ ಕಾಲೋನಿ ಭಾಗ-2 ಮತ್ತು ಭಾರತಿ ನಗರ ಭಾಗ-2ವನ್ನು ಕೊಳಚೆ ಪ್ರದೇಶವೆಂದು ಘೋಷಿಸಿ ಮಾರಿಯಮ್ಮ ನಗರದ ಸರ್ವೇ ನಂ. 120ರಲ್ಲಿ ದೇವಸ್ಥಾನ ಮತ್ತು ಹೆಚ್ಚುವರಿ ಕುಟುಂಬಗಳಿಗೆ ಪುನರ್‌ ವಸತಿ ಕಲ್ಪಿಸಬೇಕು. ಎಸ್ ಎನ್ ಪಾಳ್ಯ ಮತ್ತು ಅರಳೀಮರದ ಪಾಳ್ಯ, ಕೊಳಚೆ ಪ್ರದೇಶಗಳಿಗೆ ಹಕ್ಕುಪತ್ರ ನೀಡಬೇಕು. ಕೋಡಿಗಳ್ಳ, ಇಸ್ಮಾಯಿಲ್ ನಗರದ ಹಂದಿ ಜೋಗಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು. ಬೇಡಿಕೆಗಳ ಪರಿಹಾರಕ್ಕೆ ಜಿಲ್ಲಾಧಿಕಾರಿಯವರು ಸ್ಲಂ ಜನರ ಕುಂದುಕೊರತೆ ಸಭೆ ಕರೆಯಬೇಕು” ಎಂದು ಒತ್ತಾಯಿಸಿದರು.

Advertisements

ಸ್ಲಂ ಜನಾಂದೋಲನ ಕರ್ನಾಟಕದ ರಾಜ್ಯ ಸಂಚಾಲಕ ಎ ನರಸಿಂಹಮೂರ್ತಿ ಮಾತನಾಡಿ, “ನಮ್ಮ ನಿರಂತರ ಹೋರಾಟದಿಂದ 2022ರ ಸಾಲಿನಲ್ಲಿ 17ಎಕರೆ ಸರ್ಕಾರಿ ಭೂಮಿಯನ್ನು ಗುರುತಿಸಿ ನಗರ ಪಾಲಿಕೆಗೆ ನಿವೇಶನ ರಹಿತರಿಗೆ ನಿವೇಶನ ನೀಡಲು ಹಸ್ತಾಂತರಿಸಿದೆ. ಇದರಲ್ಲಿ 400 ಮಂದಿ ಮಹಿಳೆಯರಿಗೆ ವಿಶೇಷ ಪ್ರಕರಣವೆಂದು ಪರಿಗಣಿಸಿ, ಹಿಂದಿನ ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್ 4 ಎಕರೆ ಭೂಮಿಯನ್ನು ಕಾಯ್ದಿರಿಸಿದ್ದಾರೆ. ಆದರೆ ಈವರೆಗೆ ನಗರಪಾಲಿಕೆ ಫಲಾನುಭವಿಗಳ ಪಟ್ಟಿಯನ್ನು ಸಮೀಕ್ಷೆ ಮಾಡದೇ ಭೂಮಿಯನ್ನು ಗುರುತಿಸಿ ಸ್ವಾಧೀನಕ್ಕೆ ನೀಡದೆ ನಿರ್ಲಕ್ಷ್ಯ ಮಾಡಿದೆ” ಎಂದು ಆರೋಪಿಸಿದರು.

“2017ರಲ್ಲಿ ನಗರದ ಹಲವು ಕೊಳಚೆ ಪ್ರದೇಶಗಳ 1200 ಕುಟುಂಬಗಳನ್ನು ಸ್ಥಳಾಂತರಿಸಿದ್ದು, ಫಲಾನುಭವಿಗಳಿಗೆ ಹಂಚಿಕೆ ಪತ್ರಗಳನ್ನೂ ನೀಡಿಲ್ಲ. ಅಗತ್ಯ ಮೂಲಸೌಲಭ್ಯಗಳನ್ನು ನೀಡಲು ನಗರಸಭೆಗೆ ಹಸ್ತಾಂತರ ಮಾಡಿಕೊಂಡಿಲ್ಲ. ಸರ್ವೇ ನಂ. 120 ಸರ್ಕಾರಿ ಕಂದಾಯ ಭೂಮಿಯಾಗಿದ್ದು, ಈ ಪ್ರದೇಶದಲ್ಲಿ 38 ಗುಂಟೆ ಮಾರಿಯಮ್ಮ ನಗರ ಪ್ರದೇಶವಿದೆ. ಈ ಪ್ರದೇಶದಲ್ಲಿ ದೇವಸ್ಥಾನ ಮತ್ತು ಹೆಚ್ಚುವರಿ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಿ 2024-25ನೇ ಸಾಲಿನ ನಗರಪಾಲಿಕೆ ಸಾಲಿನಲ್ಲಿ ಕೊಳಚೆ ಪ್ರದೇಶಗಳಲ್ಲಿ ಅಭಿವೃದ್ಧಿ ಕೈಗೊಳ್ಳಲು ಪ್ರತ್ಯೇಕ ಅನುದಾನವನ್ನು ಮೀಸಲಿಡಬೇಕು. ಈ ಎಲ್ಲ ಒತ್ತಾಯಗಳನ್ನು ಈಡೇರಿಸಲು ಜಿಲ್ಲಾಧಿಕಾರಿಯವರು ತುರ್ತಾಗಿ ಕುಂದುಕೊರತೆ ಸಭೆ ಕರೆಯಬೇಕು. ಕಾರಣ ಈ ಎಲ್ಲ ಬೇಡಿಕೆಗಳನ್ನು ಉಸ್ತುವಾರಿ ಸಚಿವ ಡಾ ಜಿ ಪರಮೇಶ್ವರ್‌ ಅವರ ಜನತಾದರ್ಶನದಲ್ಲಿ ನೀಡಿ 3 ತಿಂಗಳು ಕಳೆದರೂ ಜಿಲ್ಲಾಡಳಿತ ಒಂದೇ ಒಂದು ಸಮಸ್ಯೆಯನ್ನೂ ಪರಿಹರಿಸಿಲ್ಲ” ಎಂದರು.

ಜಿಲ್ಲಾಧಿಕಾರಿ ಶುಭಕಲ್ಯಾಣ್ ಮನವಿ ಸ್ವೀಕರಿಸಿ ಮಾತನಾಡಿ, ಸ್ಲಂ ಜನರ ಸಮಸ್ಯೆಗಳ ಮಾಹಿತಿಯನ್ನು ಅಧಿಕಾರಿಗಳು ನನ್ನ ಗಮನಕ್ಕೆ ತಂದಿಲ್ಲ. ನಿವೇಶನ ರಹಿತರಿಗೆ ವಿಶೇಷ ವರ್ಗದ ಮಹಿಳೆಯರಿಗೆ 4ಎಕರೆ ಭೂಮಿಯನ್ನು ಕಳೆದ ಆಗಸ್ಟ್‌ನಲ್ಲಿ ನೀಡಲು ತೀರ್ಮಾನಿಸಲಾಗಿದೆ. ಹಾಗಾಗಿ ನಿವೇಶನ ರಹಿತರಿಗೆ ಭೂಮಿ ಮತ್ತು ವಸತಿಯನ್ನು ತ್ವರಿತವಾಗಿ ನೀಡಲು ಕ್ರಮವಹಿಸುವ ಜತೆಗೆ ಸ್ಲಂ ಸಂಘಟನೆ ನೀಡಿರುವ 10 ಸಮಸ್ಯೆಗಳಿಗೆ ಜಿಲ್ಲಾಡಳಿದಿಂದ ಪರಿಹಾರ ನೀಡಲು ತುರ್ತಾಗಿ ಸಂಬಂಧಪಟ್ಟ ಇಲಾಖೆಗಳು ಮತ್ತು ಸಂಘಟನೆ ಮುಖಂಡರೊಂದಿಗೆ ಕುಂದುಕೊರತೆ ಸಭೆ ಕರೆಯಲಾಗುವುದು” ಎಂದು ಭರವಸೆ ನೀಡಿದ್ದು, ಪ್ರತಿಭಟನಾ ಧರಣಿ ಕೈಬಿಡುವಂತೆ ಕೋರಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ರಾಜ್ಯ ಹೆದ್ದಾರಿಯಲ್ಲಿ ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಆಗ್ರಹ

ನಗರಾಭಿವೃದ್ಧಿ ಯೋಜನಾ ನಿರ್ದೇಶಕ ಆಂಜಿನಪ್ಪ, ಪ್ರತಿಭಟನಾ ನೇತೃತ್ವ ವಹಿಸಿಸಿದ್ದ ಕೊಳಗೇರಿ ಸಮಿತಿಯ ಪದಾಧಿಕಾರಿಗಳಾದ ಕಣ್ಣನ್, ಶಂಕ್ರಯ್ಯ, ಅರುಣ್, ತಿರುಮಲಯ್ಯ, ಜಾಬೀರ್‌ಖಾನ್, ಶಾರದಮ್ಮ, ಚಕ್ರಪಾಣಿ, ಮಂಗಳಮ್ಮ, ಮುರುಗ, ಕೃಷ್ಣಮೂರ್ತಿ, ಅನುಪಮಾ, ಪೂರ್ಣಿಮಾ, ಮಹಾದೇವಮ್ಮ, ಲಕ್ಷ್ಮೀಪತಿ, ಸಿದ್ದಪ್ಪ, ರಾಜು, ಶಾಬುದ್ದೀನ್, ಹನುಮಕ್ಕ, ಗುಲ್ನಾಜ್, ಗಣೇಶ್, ಮಂಜುನಾಥ್, ಶಿವಕುಮಾರ್, ಧನಂಜಯ್, ಮುಬಾರಕ್, ರಾಜ, ಮಾಧವನ್, ಕಾಶಿರಾಜ್, ಮಾರಿ, ಶಬಾನ, ಗೀತಾ, ನಂಜಮ್ಮ, ಮಹಾದೇವಮ್ಮ ಸೇರಿದಂತೆ ನೂರಾರು ಮಹಿಳೆಯರು ಮತ್ತು ಸ್ಲಂ ನಿವಾಸಿಗಳು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X