ತುಮಕೂರು | ವಿಶೇಷ ಚೇತನರ ಆತ್ಮಸ್ಥೈರ್ಯಕ್ಕೆ ಸಮಾಜದ ಬೆಂಬಲ ಅಗತ್ಯ : ಗೃಹ ಸಚಿವ ಪರಮೇಶ್ವರ

Date:

ವಿಕಲಚೇತನರ ಆತ್ಮಸ್ಥೈರ್ಯಕ್ಕೆ ಸಮಾಜದ ಬೆಂಬಲ ಅಗತ್ಯ. ಅವರನ್ನು ಕಡೆಗಣಿಸದೆ, ನಿಂದಿಸದೆ ಆತ್ಮಗೌರವದಿಂದ ಬದುಕಲು ಅವಕಾಶ ನೀಡಬೇಕು ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ್ ತಿಳಿಸಿದರು.

- Advertisement -

ಶನಿವಾರ ಮಹಾತ್ಮ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಹಾಗೂ ವಿಕಲಚೇತನರ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಎಡಿಐಪಿ ಯೋಜನೆಯಡಿ ಜಿಲ್ಲೆಯ ಕುಣಿಗಲ್, ಶಿರಾ, ಪಾವಗಡ ತಾಲೂಕಿನ ವಿಕಲಚೇತನರಿಗೆ ವಿವಿಧ ಸಾಧನ ಸಲಕರಣೆಗಳ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,   ನಮ್ಮ ದೇಶದ ಜನಸಂಖ್ಯೆಯಲ್ಲಿ ಶೇಕಡಾ 5ರಷ್ಟು ವಿಶೇಷ ಚೇತನರಿದ್ದು, ಸಾಮಾನ್ಯ ಜನರಿಗಿಂತ ಹೆಚ್ಚು ಪ್ರತಿಭೆ, ಬುದ್ದಿವಂತಿಕೆ ಹೊಂದಿದ್ದಾರೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...
1001203223

 ಇತ್ತೀಚಿನ ದಿನಗಳಲ್ಲಿ ವಿಕಲಚೇತನರು ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರೀಡೆ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ತಮ್ಮನ್ನು ತಾವು ಗುರುತಿಸಿಕೊಂಡು ಸಾಧನೆ ಮಾಡಿದ್ದಾರೆ. ಸ್ವಾವಲಂಬಿ ಬದುಕಿಗಾಗಿ ಅವರ ಉದ್ಯೋಗ ಕ್ಷೇತ್ರಗಳೂ ಬದಲಾಗುತ್ತಾ, ಹೊಸ ಅವಕಾಶಗಳೂ ದೊರೆಯುತ್ತಿವೆ. ಪ್ರಸ್ತುತ ದಿನಗಳಲ್ಲಿ ವಿಕಲಚೇತನರು ಆಧುನಿಕ ತಂತ್ರಜ್ಞಾನದ ಶಿಕ್ಷಣ ಪಡೆದು ಕಂಪ್ಯೂಟರ್ ಆಪರೇಟರ್, ಡೇಟಾ ಎಂಟ್ರಿ ಆಪರೇಟರ್ ನೌಕರಿ ಸೇರಿದಂತೆ ಸರ್ಕಾರದ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸುವ ಮೂಲಕ ತಮ್ಮ ಜೀವನ ರೂಪಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.

  ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಮಾತನಾಡಿ ವಿಕಲಚೇತನರಿಗಾಗಿ ಎಲ್ಲ ಇಲಾಖೆಗಳ ಅನುದಾನದಲ್ಲಿ ಶೇಕಡಾ 3ರಷ್ಟು ಮೀಸಲಾತಿ ನೀಡಲಾಗುತ್ತದೆ. ಈ ಅನುದಾನವನ್ನು ಬಳಸಿಕೊಂಡು ವಿಲಚೇತನರಿಗೆ ಸರ್ಕಾರಿ ಸೌಲಭ್ಯಗಳು ಸಿಗುವಂತೆ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕೆಂದು ತಿಳಿಸಿದರು. 

1001203242

ವಿಶೇಷ ಯೋಜನೆಯಡಿ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಯುಡಿಐಡಿ ಗುರುತಿನ ಚೀಟಿ ಹೊಂದಿರಬೇಕು. ಜಿಲ್ಲೆಯ ಪ್ರತಿ ತಾಲೂಕಿನಲ್ಲಿ ವಿಶೇಷ ಶಿಬಿರಗಳನ್ನು ನಡೆಸಿ ವಿಶೇಷ ಚೇತನರಿಗೆ ಗುರುತಿನ ಚೀಟಿ ನೀಡಲಾಗುತ್ತಿದ್ದು, ಜಿಲ್ಲೆಯಲ್ಲಿ ಈಗಾಗಲೇ ಶೇ.99ರಷ್ಟು ಯುಡಿಐಡಿ ಕಾರ್ಡುಗಳನ್ನು ನೀಡಲಾಗಿದೆ ಎಂದರು.

ವಿವಿಧ ವಸತಿ ಯೋಜನೆಯಡಿ ಈವರೆಗೆ ಜಿಲ್ಲೆಯಲ್ಲಿ 10,000 ನಿವೇಶನಗಳನ್ನು ಗುರುತಿಸಲಾಗಿದ್ದು, ಇದರಲ್ಲಿ ವಿಶೇಷಚೇತನರಿಗಾಗಿ ಶೇಕಡಾ 3ರಷ್ಟು ಮೀಸಲಾತಿ ನೀಡಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅಲ್ಲದೆ ವಿಶೇಷಚೇತನ ವಿದ್ಯಾರ್ಥಿಗಳಿಗೆ ವಿದ್ಯಾರ್ಹತೆಗನುಗುಣವಾಗಿ ಲ್ಯಾಪ್‌ಟಾಪ್‌ಗಳನ್ನು ನೀಡಲು ಸಿದ್ಧತೆಗಳು ನಡೆಯುತ್ತಿವೆ ಎಂದು ತಿಳಿಸಿದರು.

1001203225

  ನಗರ ಶಾಸಕ ಜಿ.ಬಿ. ಜ್ಯೋತಿ ಗಣೇಶ್ ಮಾತನಾಡಿ. ವಿಕಲಚೇತನರಿಗೂ ಸಮಾನ ಅವಕಾಶಗಳು ದೊರೆಯಬೇಕು. ವಿಕಲಚೇತನರಲ್ಲಿಯೂ ಬಹಳ ಪ್ರತಿಭಾವಂತವರಿದ್ದು, ಉತ್ತೇಜನ ನೀಡುವ ಕಾರ್ಯವನ್ನು ಸರ್ಕಾರದಿಂದ ಮಾಡಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶುಭಾಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ, ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ, ಹೆಚ್.ಎ.ಎಲ್ ಪ್ರತಿನಿಧಿ ಪ್ರಧಾನ ವ್ಯವಸ್ಥಾಪಕ ಕೃಷ್ಣಪ್ಪ, ವಿಕಲ ಚೇತನ ಕಲ್ಯಾಣಾಧಿಕಾರಿ ಚಿದಾನಂದಮೂರ್ತಿ, ಮತ್ತಿತರ ಅಧಿಕಾರಿಗಳು ಇದ್ದರು.

ಇದೇ ಸಂದರ್ಭದಲ್ಲಿ ಸುಮಾರು 600 ಫಲಾನುಭವಿಗಳಿಗೆ ಬ್ಯಾಟರಿ ಚಾಲಿತ ಮೊಪೆಡ್, ಕೈ ಚಾಲಿತ ಸೈಕಲ್, ಕ್ರಚಸ್, ವಾಕರ್, ಸ್ಮಾರ್ಟ್ ಫೋನ್, ವ್ಹೀಲ್ ಚೇರ್, ಎಂ.ಆರ್. ಕಿಟ್, ಮತ್ತಿತರ ಸಲಕರಣೆ ಹಾಗೂ ಪಾಲಿಕೆ ವ್ಯಾಪ್ತಿಯ 3 ವಾರ್ಡು ಮತ್ತು 38 ಗ್ರಾಮ ಪಂಚಾಯತಿಗಳಿಗೆ ಕ್ಷಯರೋಗ ಮುಕ್ತವೆಂದು ಘೋಷಿಸಿ ಸಾಂಕೇತಿಕವಾಗಿ ಪ್ರಮಾಣಪತ್ರಗಳನ್ನು ಸಚಿವರು ವಿತರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...