ತುಮಕೂರು | ಸೋಲಾರ್ ಪಾರ್ಕ್ ಎರಡನೇ ಹಂತದ ವಿಸ್ತರಣೆ ಕಾರ್ಯ ಚುರುಕು

Date:

Advertisements

ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ತಿರುಮಣಿ ಗ್ರಾಮದ ಬಳಿ ಆರಂಭವಾಗಿರುವ ಸೋಲಾರ್ ಪಾರ್ಕ್ ಎರಡನೇ ಹಂತದ ವಿಸ್ತರಣೆ ಕಾರ್ಯ ಎರಡು ವರ್ಷಗಳಲ್ಲಿ ಪೂರ್ಣಗೊಳ್ಳಲಿದ್ದು, ವಿಶ್ವದ ಅತಿ ದೊಡ್ಡ ಸೋಲಾರ್ ಪಾರ್ಕ್ ಎಂಬ ಹಿರಿಮೆಗೆ ಪಾತ್ರವಾಗಲಿದೆ ಎಂದು ಕರ್ನಾಟಕ ಸೌರಶಕ್ತಿ ಅಭಿವೃದ್ಧಿ ನಿಗಮದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್ ಅಮರನಾಥ್ ತಿಳಿಸಿದರು.

ಸುದ್ದಿಗಾರರೊಂದಿ ಮಾತನಡಿದ ಅವರು, “ಎರಡನೇ ಹಂತದ ವಿಸ್ತರಣೆ 2025ರ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆ ಇದ್ದು, ಇಲ್ಲಿ 300 ಮೆಗಾ ವ್ಯಾಟ್‌ ಸೌರ ವಿದ್ಯುತ್‌ ಉತ್ಪಾದನೆಯಾಗಲಿದೆ. 2019ರಲ್ಲಿ ಕಾರ್ಯಾರಂಭ ಮಾಡಿದ ಮೊದಲ ಹಂತದ ಯೋಜನೆಯಲ್ಲಿ ಈಗಾಗಲೇ 2,050 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಆಗುತ್ತಿದೆ. ಎರಡೂ ಸೇರಿದರೆ ಒಟ್ಟು 2,350 ಮೆ.ವ್ಯಾ ವಿದ್ಯುತ್‌ ಉತ್ಪಾದನೆಯಾಗಲಿದೆ” ಎಂದು ತಿಳಿಸಿದರು.

“ಈ ಯೋಜನೆಗೆ ಒಟ್ಟು 13 ಸಾವಿರ ಎಕರೆ ಜಮೀನನ್ನು ರೈತರಿಂದ ಬಾಡಿಗೆ ಪಡೆಯಲಾಗಿತ್ತು. ಅದರಲ್ಲಿ ಖಾಲಿ ಉಳಿದಿದ್ದ 1,200 ಎಕರೆಯಲ್ಲಿ ಎರಡನೇ ಹಂತದ ಯೋಜನೆ ತಲೆ ಎತ್ತಲಿದೆ. ಖಾಸಗಿ ಕಂಪನಿಗಳಿಂದ ಟೆಂಡರ್‌ ಕರೆಯುವ ಪ್ರಕ್ರಿಯೆ ಶೀಘ್ರ ಆರಂಭವಾಗಲಿದೆ” ಎಂದು ಹೇಳಿದರು.

Advertisements

“ಮೂರನೇ ಹಂತದಲ್ಲಿ ರಾಪ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 2,500 ಮೆ.ವ್ಯಾ ಮತ್ತು ನಾಲ್ಕನೇ ಹಂತದಲ್ಲಿ ತಿರುಮಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 500 ಮೆ ವ್ಯಾ ವಿದ್ಯುತ್ ಉತ್ಪಾದನೆಗೆ ಪಾರ್ಕ್‌ ವಿಸ್ತರಣೆ ಯೋಜನೆ ರೂಪಿಸಲಾಗಿದೆ. ಈಗಾಗಲೇ ರೂಪುರೇಷೆ ಸಿದ್ಧವಾಗಿದ್ದು, ಅಧಿಸೂಚನೆ ಹೊರಡಿಸಲಾಗಿದೆ. ಹಂತ, ಹಂತವಾಗಿ ಈ ಯೋಜನೆಗಳನ್ನು ಜಾರಿಗೊಳಿಸಲಾಗುವುದು” ಎಂದರು.

“ಒಟ್ಟಾರೆಯಾಗಿ ನಾಲ್ಕು ಹಂತದ ವಿಸ್ತರಣೆ ಮತ್ತು ಅಭಿವೃದ್ಧಿ ಯೋಜನೆ ಪೂರ್ಣಗೊಂಡರೆ ಪಾವಗಡ ಸೋಲಾರ್ ಪಾರ್ಕ್‌ನಲ್ಲಿ ಒಟ್ಟು 5,350 ಮೆ‌ ವ್ಯಾ ಸೌರ ವಿದ್ಯುತ್ ಉತ್ಪಾದನೆಯಾಗಲಿದೆ. ಅಲ್ಲಿಗೆ ಪಾವಗಡ ಸೋಲಾರ ಪಾರ್ಕ್ ಜಗತ್ತಿನ ಅತಿದೊಡ್ಡ ಸೋಲಾರ್ ಪಾರ್ಕ್ ಎಂಬ ಹಿರಿಮೆಗೆ ಪಾತ್ರವಾಗಲಿದೆ” ಎಂದು ಹೇಳಿದರು.

“ಉತ್ತರ ಕರ್ನಾಟಕದ ಬೀದರ್ ಕಲಬುರಗಿ ಹಾವೇರಿ ಗದಗ ಸೇರಿದಂತೆ ಇತರ ಭಾಗಗಳಲ್ಲಿ ಸೋಲಾರ್ ಪಾರ್ಕ್ ಆರಂಭಿಸಲು ಸಿದ್ಧತೆ ನಡೆಯುತ್ತಿದೆ. ಕಟ್ಟಡಗಳ ಮೇಲೆ ಸೋಲಾರ್ ಫಲಕ ಅಳವಡಿಸುವ ಪ್ರಕ್ರಿಯೆಯೂ ಪ್ರಾರಂಭವಾಗಿದೆ. ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ, ಚಿನ್ನಸ್ವಾಮಿ ಕ್ರೀಡಾಂಗಣ ಸೇರಿದಂತೆ ಬೆಂಗಳೂರಿನ ಹಲವೆಡೆ ಸೌರಫಲಕ (ಸೋಲಾರ್ ಪ್ಯಾನೆಲ್‌) ಅಳವಡಿಸಿ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಕೇಂದ್ರ ಬರ ಅಧ್ಯಯನ ತಂಡದಿಂದ ಬೆಳೆ ಪರಿಶೀಲನೆ

“ತುಮಕೂರು, ಬೆಂಗಳೂರು, ಮೈಸೂರು, ಹಿರಿಯೂರು, ಗುತ್ತಿ, ಬಳ್ಳಾರಿ ಸೇರಿದಂತೆ ಹಲವು ಕಡೆ ಪಾವಗಡ ಗ್ರಿಡ್‌ನಿಂದ ಸೌರ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ. ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಇಲ್ಲಿಂದಲೇ ವಿದ್ಯುತ್‌ ಪೂರೈಸಲಾಗುತ್ತಿದೆ. ಸದ್ಯ ಪಾವಗಡದಲ್ಲಿ ಉತ್ಪಾದನೆಯಾಗುತ್ತಿರುವ 2050 ಮೆ ವ್ಯಾ ಪೈಕಿ 1850 ಮೆ ವ್ಯಾ ಸೌರ ವಿದ್ಯುತ್‌ ಅನ್ನು ರಾಜ್ಯದ ಬೇರೆ ವಿದ್ಯುತ್ ವಿತರಣಾ ಕಂಪನಿಗಳು ಖರೀದಿಸುತ್ತಿವೆ. ಉಳಿದ 200 ಮೆ.ವ್ಯಾ ವಿದ್ಯುತ್ ಅನ್ನು ಉತ್ತರಪ್ರದೇಶ ಖರೀದಿಸುತ್ತಿದೆ” ಎಂದು ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಮುಖ್ಯ ವ್ಯವಸ್ಥಾಪಕ ಎಸ್ ರೆಡ್ಡಿ ಮಾಹಿತಿ ನೀಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X