ತುಮಕೂರು | ಪ್ರಧಾನಿ ಆಗಲು ಯೋಗ್ಯರಾದ ಸಾಕಷ್ಟು ಮುಖಂಡರು ಕಾಂಗ್ರೆಸ್‌ನಲ್ಲಿ ಇದ್ದಾರೆ: ಸಿಎಂ ಸಿದ್ದರಾಮಯ್ಯ

Date:

Advertisements

ಕಾಂಗ್ರೆಸ್‌ನಲ್ಲಿ ಪ್ರಧಾನಿಯಾಗಲು ಯಾರಿದ್ದಾರೆ? ನರೇಂದ್ರಮೋದಿ ಬಿಟ್ಟರೆ ಪ್ರಧಾನಿ ಆಗುವ ಅರ್ಹತೆ ಯಾರಿಗೂ ಇಲ್ಲ ಎಂದು ಎಚ್.ಡಿ. ದೇವೇಗೌಡರು ಹೇಳಿದ್ದಾರೆ. ಮೋದಿ ಮೆಚ್ಚಿಸಲು ಸ್ವಾರ್ಥಕ್ಕಾಗಿ ಇಂತಹ ಮಾತುಗಳನ್ನು ಆಡಿದ್ದಾರೆ. ಪ್ರಧಾನಿ ಆಗಲು ಯೋಗ್ಯರಾದ ಸಾಕಷ್ಟು ಮುಖಂಡರು ಕಾಂಗ್ರೆಸ್‌ನಲ್ಲಿ ಇದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ತುಮಕೂರು ನಗರದ ಹೊರಹೊಲ ಯಲ್ಲಪುರದಲ್ಲಿ ಮಂಗಳವಾರ (ಏ.23) ರಾತ್ರಿ ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ. ಮುದ್ದಹನುಮೇಗೌಡರ ಪರ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್ ಪಕ್ಷದಲ್ಲಿ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಅವರಿಗೆ ಪ್ರಧಾನಿಯಾಗುವ ಅರ್ಹತೆ ಇದೆ ಎಂದರು.

ಸುಳ್ಳು ಹೇಳಲು ಹಾಲಿ ಪ್ರಧಾನಿ, ಮಾಜಿ ಪ್ರಧಾನಿ ಪೖಪೋಟಿ ನಡೆಸುತಿದ್ದಾರೆ. ಮೋದಿ ಸುಳ್ಳು ಹೇಳಿದರೆ, ಗೌಡರು ಅದಕ್ಕಿಂತ ಹೆಚ್ಚು ಸುಳ್ಳು ಹೇಳುತ್ತಿದ್ದಾರೆ. ಸುಳ್ಳು ಹೇಳಿ ಇಬ್ಬರು ಮಾನ, ಮರ್ಯಾದೆ ಇಲ್ಲದಂತೆ ಮಾಡಿಕೊಂಡಿದ್ದಾರೆ. ಗೌಡರು ಯೋಗ್ಯತೆಗೆ ತಕ್ಕಂತೆ ಮಾತನಾಡುತ್ತಿಲ್ಲ ಎಂದು ಆರೋಪಿಸಿದರು.

Advertisements
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಕಾಡುಗೊಲ್ಲರು ಶ್ರೀ ಕೃಷ್ಣನ ಆರಾಧಕರಲ್ಲ : ಬಿ.ದೊಡ್ಡಯ್ಯ

ವಿಶಿಷ್ಟ ಆಚರಣೆ ಸಂಸ್ಕೃತಿಯಲ್ಲಿ ಬುಡಕಟ್ಟು ಎಂದು ಗುರುತಿಸಿಕೊಂಡ ಕಾಡು ಗೊಲ್ಲರು...

ತುಮಕೂರು | ನೂತನ ವಿದ್ಯಾರ್ಥಿನಿಲಯ ನಿರ್ಮಾಣ : ಸಚಿವರಿಂದ ಶಂಕುಸ್ಥಾಪನೆ

ತುಮಕೂರು ನಗರದ ರೈಲ್ವೆ ನಿಲ್ದಾಣ ರಸ್ತೆಯಲ್ಲಿ ಶ್ರೀ ಡಿ. ದೇವರಾಜ ಅರಸು...

ಗದಗ | ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ( ಕಭೀ) ಕಾರ್ಯಕ್ರಮದಡಿಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ...

ಉಡುಪಿ‌ | ಹುಡುಗಿಯ ವಿಚಾರಕ್ಕೆ ಜಗಳ, ಕೊಲೆಯಲ್ಲಿ ಅಂತ್ಯ, ಆರೋಪಿಯ ಬಂಧನ

ಉಡುಪಿ‌ ಜಿಲ್ಲೆಯ ಕಾರ್ಕಳದ ಕುಂಟಲ್ಪಾಡಿಯಲ್ಲಿ ಮದ್ಯರಾತ್ರಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ...

Download Eedina App Android / iOS

X