ತುಮಕೂರು | ಮತಗಳ್ಳತನ ಕುರಿತಾಗಿ ರಾಹುಲ್ ಗಾಂಧಿ ಮಾಡಿರುವ ಆರೋಪದಲ್ಲಿ ಸತ್ಯಾಂಶವಿದೆ : ಎಂಎಲ್ ಸಿ ರಮೇಶ್ ಬಾಬು

Date:

Advertisements

ಇಂದಿನ ಚುನಾವಣೆ ವ್ಯವಸ್ಥೆ ನೋಡುತ್ತಿದ್ದರೆ ನಮ್ಮಂತಹವರು ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲ ಎಂದ ಅವರು ಮತಗಳ್ಳತನ ಕುರಿತಾಗಿ ರಾಹುಲ್ ಗಾಂಧಿ ಅವರು ಮಾಡಿರುವ ಆರೋಪದಲ್ಲಿ ಸತ್ಯಾಂಶವಿದೆ ಎಂದು ವಿಧಾನ ಪರಿಷತ್ ನೂತನ ಸದಸ್ಯ ರಮೇಶ್ ಬಾಬು ಹೇಳಿದರು 

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ವಿಧಾನ ಪರಿಷತ್ ನೂತನ ಸದಸ್ಯ ರಮೇಶ್ ಬಾಬು ಅವರೊಂದಿಗೆ ಸಂವಾದ ನಡೆಸಲಾಯಿತು. ಸಂವಾದ ಸಭೆಯಲ್ಲಿ ಮಾತನಾಡಿದ ರಮೇಶ್ ಬಾಬು ಅವರು, ಎಲ್ಲೋ ಕುಳಿತು ಮತದಾರರ ಪಟ್ಟಿಯಲ್ಲಿ ಪರಿಷ್ಕರಣೆ ಮಾಡಿ ಹೆಸರು ಡಿಲೀಟ್ ಹಾಗೂ ವರ್ಗಾವಣೆ ಮಾಡುತ್ತಾರೆಂದರೆ ಏನರ್ಥ. ಇದನ್ನು ಜವಾಬ್ದಾರಿ ಯುತ ಸ್ಥಾನದಲ್ಲಿದ್ದು ನಾವು ಪ್ರಶ್ನಿಸಬಾರದೇ? ಅಷ್ಟಕ್ಕೂ ಚುನಾವಣೆ ಆಯೋಗವನ್ನು ಪ್ರಶ್ನಿಸಿದರೆ ಬಿಜೆಪಿ ಯವರು ಏಕೆ ಸಿಡಿಮಿಡಿಗೊಳ್ಳುತ್ತಿದ್ದಾರೆ ಅರ್ಥವಾಗುತ್ತಿಲ್ಲ. ಇಂದು ಸಾಂವಿಧಾನಿಕ ಸಂಸ್ಥೆ ಗಳು ರಾಜಕೀಕರಣಗೊಳ್ಳುತ್ತಿರುವುದಕ್ಕೆ ಸ್ಪಷ್ಟ ನಿರ್ದರ್ಶನ ಎಂದರು. 

ಶೈಕ್ಷಣಿಕ ಸಾಮಾಜಿಕ ಸಮೀಕ್ಷೆ ಬಗ್ಗೆ ಅನಗತ್ಯ ಗುಲ್ಲೆಬ್ಬಿಸಲಾಗುತ್ತಿದೆ ಎಂದು ಪ್ರಶ್ನೆ ಯೊಂದಕ್ಕೆ ಪ್ರತಿಕ್ರಿಯಿಸಿದ ರಮೇಶ್ ಬಾಬು ಅವರು ಅರ್ಹ ಫಲಾನುಭವಿಗಳಿಗೆ ಯೋಜನೆ ಗಳನ್ನು ತಲುಪಿಸಲು ಗಣತಿ ಸಮೀಕ್ಷೆ ಅತ್ಯಾವಶ್ಯಕ ಎಂದು ಪ್ರತಿಪಾದಿಸಿದರು

 ಮೇಲ್ಮನೆಗೆ , ಎರಡನೇ ಬಾರಿಗೆ ಆಯ್ಕೆ ಯಾಗುವ ಅವಕಾಶ ದೊರೆತಿದ್ದು, ಚಿಂತಕರ ಚಾವಡಿಯಲ್ಲಿ ಜನಸಾಮಾನ್ಯರ ಧ್ವನಿ ಯಾಗಿ ಸಾಮಾಜಿಕ ನ್ಯಾಯ ಸಂವಿಧಾನದ ಪರವಾಗಿ ಕಾರ್ಯನಿರ್ವಹಿಸುವೆ. ನನ್ನ ಅವಧಿ ಹತ್ತು ತಿಂಗಳಾದರೂ ಸ್ಥಾನದ ಘನತೆ ಎತ್ತಿ ಹಿಡಿಯುವಂತೆ ಕಾರ್ಯನಿರ್ವಹಿಸುವೆ ಎಂದರು. 

 ಚಾರಿತ್ರಿಕ ಇತಿಹಾಸದ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಮೂಲ ನನ್ನದು ಎನ್ನುವುದಕ್ಕೆ ಹೆಮ್ಮೆಪಡುತ್ತೇನೆ. ಪಿಯುಸಿ ಅನುತ್ತೀರ್ಣ ನಾಗಿ ಪತ್ರಿಕೋದ್ಯಮ ಸರ್ಟಿಫಿಕೇಟ್ ಕೋರ್ಸ್ ನೊಂದಿಗೆ ಪತ್ರಿಕಾ ರಂಗ ಪ್ರವೇಶಿಸಿದೆ. ಸುಮಾರು ಹದಿನೆಂಟು ಪತ್ರಿಕೆ ಏಜೆಂಟರಾಗಿ ವರದಿಗಾರನಾಗಿ ಕಾರ್ಯನಿರ್ವಹಿಸಿದೆ. ಲಂಕೇಶ್ ಪತ್ರಿಕೆ ನನ್ನ ಮೇಲೆ ಬಹಳ ಪ್ರಭಾವ ಬೀರಿತು. ಈ ವೇಳೆ ಎಲ್‌ಎಲ್ ಬಿ ಪೂರೈಸಿ ವಕೀಲ ವೃತ್ತಿಯನ್ನು ಆಯ್ಕೆ ಮಾಡಿಕೊಂಡು 98-99ರಲ್ಲಿ ಬೆಂಗಳೂರಿಗೆ ಸ್ಥಳಾಂತರಗೊಂಡೆ. ಅಲ್ಲಿ ದೊಡ್ಡ ರಾಜಕೀಯ ನಾಯಕರ ಸಂಪರ್ಕ ದೊರೆತು ಜೆಡಿಎಸ್ ನಿಂದ ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಅಭ್ಯರ್ಥಿ ಯಾಗಿ ಸ್ಪರ್ಧಿಸಿ ಗೆಲವು ಸಾಧಿಸಿದೆ. ಆದರೆ ಪಕ್ಷದಿಂದ ಹೊರಹೋಗುವ ಸ್ಥಿತಿ ನಿರ್ಮಾಣವಾಯಿತು. ನಮ್ಮ ತತ್ವ ಸಿದ್ಧಾಂತಕ್ಕೆ ಒಪ್ಪಿ ಗೆ ಯಾಗುವ ಪಕ್ಷವೆಂದು ಕಾಂಗ್ರೆಸ್ ಸೇರ್ಪಡೆ ಗೊಂಡೆ. ಪಕ್ಷದ ವಕ್ತಾರನಾಗಿ ನನ್ನ ಸೇವೆ ಗುರುತಿಸಿ ಸಿಎಂ, ಡಿಸಿಎಂ ಹಾಗೂ ಪಕ್ಷದ ವರಿಷ್ಠರು ನನಗೆ ಮೇಲ್ಮನೆ ಗೆ ನಾಮ ನಿರ್ದೇಶನ ವಾಗುವ ಅವಕಾಶ ಕಲ್ಪಿಸಿದರು ಎಂದು ತಮ್ಮ ಜೀವನಯಾನದ ವೃತ್ತಾಂತ ವಿವರಿಸಿದರು. 

 ಯೂಟ್ಯೂಬ್ ವಾಹಿನಿಗಳಿಗೆ ಪರವಾನಗಿ ಅವಶ್ಯಕ ಎಂಬ ಸಿಎಂ ನಿಲುವನ್ನು ಸಮರ್ಥಿಸಿಕೊಂಡ ರಮೇಶ್ ಬಾಬು ಅವರು ಅಭಿವ್ಯಕ್ತಿ ಸ್ವಾತಂತ್ರ್ಯ ಎಲ್ಲರಿಗೂ ಇದೆ. ಮಾಧ್ಯಮಕ್ಕೆ ವಿಶೇಷವಿಲ್ಲ. ಇದರ ಹೆಸರಲ್ಲಿ ಚಾರಿತ್ರ್ಯ  ವಧೆಯಾಗಬಾರದು ಅಷ್ಟೇ ಎಂದರು. 

 ಜಿಲ್ಲೆಯಲ್ಲಿ ಮರಳಿ ಗಣಿಗಾರಿಕೆ ಚಟುವಟಿಕೆ ಗಳಿಗೆ ಆಸ್ಪದವಾಗಬಾರದು ಈ ಬಗ್ಗೆ ಸದನದಲ್ಲಿ ಧ್ವನಿ ಎತ್ತುವುದಾಗಿ ತಿಳಿಸಿದರು. 

 ಸಂಘದ ಅಧ್ಯಕ್ಷ  ಚಿ. ನಿ. ಪುರುಷೋತ್ತಮ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಮೇಶ್ ಬಾಬು ಅವರು ಜೀವನ ಸಾಧನೆ ಯನ್ನು ಸಂಕ್ಷಿಪ್ತ ವಾಗಿ ವಿವರಿಸಿ ಹಿಂದೆ ಅವರು ಪತ್ರಕರ್ತ ರಾಗಿ ಎರಡು ಬಾರಿ ಮೇಲ್ಮನೆ ಪ್ರವೇಶಿಸುವ ಅವಕಾಶ ಪಡೆದಿರುವುದು ನಾವೆಲ್ಲ ಹೆಮ್ಮೆ ಪಡುವ ಸಂಗತಿ ಎಂದರು. 

ಸಂಘದ ಪ್ರಧಾನ ಕಾರ್ಯದರ್ಶಿ ಟಿ. ಇ. ರಘುರಾಮ್ ಸ್ವಾಗತಿಸಿದರು. ಸಂಘದ ಪರವಾಗಿ ರಮೇಶ್ ಬಾಬು ಅವರನ್ನು ಅಭಿನಂದಿಸಲಾಯಿತು. ರಾಷ್ಟ್ರೀಯ ಮಂಡಳಿ ಸದಸ್ಯ ಟಿ. ಎನ್. ಮಧುಕರ್, ಸಂಘದ ನಿರ್ದೇಶಕ ರುಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

Download Eedina App Android / iOS

X