ತುಮಕೂರು | ಸ್ವಾಮೀಜಿ ಖಾಸಗಿ ವಿಡಿಯೋ ಹರಿಬಿಡುವುದಾಗಿ ಬೆದರಿಕೆ; 6 ಮಂದಿ ವಿರುದ್ಧ ಎಫ್‌ಐಆರ್

Date:

Advertisements

ಸಾಮಾಜಿಕ ಜಾಲತಾಣದಲ್ಲಿ ಖಾಸಗಿ ವಿಡಿಯೋ ಹರಿಬಿಡುವುದಾಗಿ ಮಠಾಧೀಶರಿಗೆ ಹೆದರಿಸಿ, ಹಣಕ್ಕೆ ಬೇಡಿಕೆ ಇಟ್ಟ ಆರೋಪದ ಮೇಲೆ ಆರು ಮಂದಿ ವಿರುದ್ಧ ತುಮಕೂರು ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

“ಚರ್ಮ ವ್ಯಾದಿ ವಾಸಿಯಾಗದ ಬಗ್ಗೆ ಸ್ವಾಮೀಜಿಯು ಯುವತಿಯ ಬಳಿ ದೂರವಾಣಿಯಲ್ಲಿ ಹೇಳಿಕೊಂಡಿದ್ದಾರೆ. ಯುವತಿ ಸಲಹೆ ಮೇರೆಗೆ ವೀಡಿಯೊ ಕರೆ ಮಾಡಿ ಚರ್ಮರೋಗ ಕಾಣಿಸಿಕೊಂಡ ಜಾಗ ತೋರಿಸಿದ್ದಾರೆ. ಇದೇ ವಿಡಿಯೊ ಇಟ್ಟುಕೊಂಡು ಈಗ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ನಾವು ಕೇಳಿದಷ್ಟು ಹಣ ಕೊಡದಿದ್ದರೆ ವಿಡಿಯೋವನ್ನು ಫೇಸ್ ಬುಕ್, ಯ್ಯೂಟೂಬ್‌ನಲ್ಲಿ ಹಂಚಿಕೊಳ್ಳಲಾಗುವುದೆಂದು ಬೆದರಿಕೆ ಹಾಕುತ್ತಿದ್ದಾರೆ” ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಕುಣಿಗಲ್ ತಾಲೂಕಿನ ಹೊಸಕೆರೆ ಗ್ರಾಮದ ಎಚ್ ಎಸ್ ಅಭಿಷೇಕ್, ಬೆಂಗಳೂರಿನ 30 ವರ್ಷದ ಯುವತಿ, ಪಾಂಡುಪುರ ಬಳಿಯ ವಿಜಯಕಾಳಿ ದೇವಸ್ಥಾನದ ರಾಜೇಶ್, ಶ್ರೀನಿವಾಸ್, ರಾಮನಗರ ಜಿಲ್ಲೆಯ ಕನಕಪುರ ಗ್ರಾಮದ ಚೇತನ್, ಕುಣಿಗಲ್‌ನ ನಂದೀಶ್ ಎಂಬುವರ ವಿರುದ್ಧ ಪ್ರಕರಣ ದಾಖಲಾಗಿದೆ.

Advertisements

“ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಹೋಬಳಿಯ ಹಂಗರಹಳ್ಳಿಯ ಶ್ರೀವಿದ್ಯಾ ಚೌಡೇಶ್ವರಿ ದೇವಾಲಯದ ಬಾಲ ಮಂಜುನಾಥ ಸ್ವಾಮೀಜಿಯ ಖಾಸಗಿ ವೀಡಿಯೊ ನಮ್ಮ ಬಳಿ ಇದ್ದು, ಅದನ್ನು ಸಾಮಾಜಿಕ ಜಾಲತಾಣಕ್ಕೆ ಹಾಕುವುದಾಗಿ ಬೆದರಿಸಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ” ಎಂದು ದೇವಸ್ಥಾನದ ಟ್ರಸ್ಟಿ ಕೆ ಅಭಿಲಾಷ್ ಎಂಬುವರು ದೂರು ನೀಡಿದ್ದರು.

“ಸ್ವಾಮೀಜಿಗೆ ಖಾಸಗಿ ಜಾಗದಲ್ಲಿ ಚರ್ಮ ಸಮಸ್ಯೆ ಶುರುವಾಗಿತ್ತು. ಇದನ್ನು ಸ್ವಾಮೀಜಿ ತನ್ನ ಅಪ್ತಸಹಾಯಕನಿಗೆ ತಿಳಿಸಿದ್ದರು. ತನ್ನ ಸಂಬಂಧಿ ಚರ್ಮರೋಗ ತಜ್ಞೆಯಾಗಿದ್ದು, ಆಕೆಗೆ ತೋರಿಸಿಸುವುದು ಒಳ್ಳೆಯದೆಂದು ಆತ ಸಲಹೆ ಮಾಡಿದ್ದ. ಇದಕ್ಕೆ ಸ್ವಾಮೀಜಿ ಒಪ್ಪಲಿಲ್ಲ. ನಂತರ ಚರ್ಮರೋಗ ಕಾಣಿಸಿಕೊಂಡ ಜಾಗದ ಚಿತ್ರ ತೆಗೆದು ಯುವತಿಗೆ ಕಳಿಸಲಾಗಿತ್ತು. ಅವರು ಒಂದಷ್ಟು ಔಷಧಿ ಮುಲಾಮು ತೆಗೆದುಕೊಳ್ಳುವಂತೆ ತಿಳಿಸಿದ್ದರು” ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಉಡುಪಿ | ಮಾ.8ರಂದು ರಾಜ್ಯ ಮಟ್ಟದ ‘ಮಹಿಳಾ ಚೈತನ್ಯ ದಿನ’

“ಸ್ವಾಮೀಜಿಯ ಆಪ್ತ ಸಹಾಯಕರಾಗಿದ್ದ ಎಚ್ ಎಸ್ ಅಭಿಷೇಕ್ ಮೂಲಕ ಸ್ವಾಮೀಜಿಗೆ ಯುವತಿಯ ಪರಿಚಯವಾಗಿತ್ತು. ಆಕೆಯನ್ನು ತನ್ನ ಸಂಬಂಧಿ ಮತ್ತು ವೈದ್ಯೆ ಎಂದು ಅಭಿಷೇಕ್ ಪರಿಚಯಿಸಿದ್ದ” ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X