ತುಮಕೂರು | ವಿವಿಧ ರೈಲ್ವೆ ಕಾಮಗಾರಿಗಳಿಗೆ ಕೇಂದ್ರ ಸಚಿವ ವಿ. ಸೋಮಣ್ಣ ಶಿಲಾನ್ಯಾಸ

Date:

Advertisements

ತುಮಕೂರು ನಗರದ ಶೆಟ್ಟಿಹಳ್ಳಿ ಹಳೆಯ ರೈಲ್ವೆ ಗೇಟ್ ಬಳಿ ಪಾದಚಾರಿ ಸುರಂಗ ಮಾರ್ಗ ಕಾಮಗಾರಿಗೆ ಹಾಗೂ ಭೀಮಸಂದ್ರದ ರೈಲ್ವೆ ಕೆಳ ಸೇತುವೆ ಕಾಮಗಾರಿಗಳಿಗೆ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಅವರು ಇಂದು ಶಿಲಾನ್ಯಾಸ ನೆರವೇರಿಸಿದರು.

ತುಮಕೂರು ನಗರದ ಶೆಟ್ಟಿಹಳ್ಳಿ ರೈಲ್ವೆ ಗೇಟ್‌ನಲ್ಲಿ ಈಗಾಗಲೇ ರಸ್ತೆ ಕೆಳ ಸೇತುವೆಯನ್ನು ನಿರ್ಮಿಸಲಾಗಿದ್ದು, ಈ ಕೆಳ ಸೇತುವೆ ಮೂಲಕ ವಾಹನಗಳ ಸಂಚರಿಸುತ್ತಿವೆ. ಆದರೆ ವಾಹನ ದಟ್ಟಣೆ ಇರುವ ಕಾರಣ ಅಂಡರ್‌ಪಾಸ್‌ನಲ್ಲಿ ಪಾದಚಾರಿಗಳು ಸಂಚರಿಸುವುದು ಕಷ್ಟಕರವಾಗಿರುವುದರಿಂದ  2.49 ಕೋಟಿ ರೂ. ವೆಚ್ಚದಲ್ಲಿ ಪಾದಚಾರಿ ಸುರಂಗ ಮಾರ್ಗ ಕಾಮಗಾರಿಗೆ  ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಸೋಮಣ್ಣ ಹೇಳಿದರು.

1001174387

 ರಾಜ್ಯದಲ್ಲಿರುವ ರೈಲ್ವೆ ಲೆವೆಲ್ ಕ್ರಾಸಿಂಗ್ ಕಾಮಗಾರಿಗಳಿಗೆ ಈ ಹಿಂದೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಎರಡೂ ಹಣ ನೀಡುತ್ತಿದ್ದವು. ಆದರೆ ಇತ್ತೀಚೆಗೆ ರಾಜ್ಯ ಸರ್ಕಾರಗಳು ಹಣ ಬಿಡುಗಡೆ ಮಾಡದಿರುವುದನ್ನು ಗಮನಿಸಿದ ಕೇಂದ್ರ ಸರ್ಕಾರ ಲೆವೆಲ್ ಕ್ರಾಸಿಂಗ್ ಮೇಲ್ಸೇತುವೆ ಮತ್ತು ಕೆಳ ಸೇತುವೆ ಕಾಮಗಾರಿಗಳಿಗೆ ಸಂಪೂರ್ಣ ಹಣವನ್ನು ಬಿಡುಗಡೆ ಮಾಡುತ್ತಿದೆ ಎಂದು ಕೇಂದ್ರ ಸಚಿವ ಸೋಮಣ್ಣ ತಿಳಿಸಿದರು.

Advertisements

ದೇಶಾದ್ಯಂತ ಎಲ್ಲ ಕಡೆಗಳಲ್ಲಿ ಲೆವೆಲ್ ಕ್ರಾಸಿಂಗ್ ಕಾಮಗಾರಿಗಳನ್ನು ಕೇಂದ್ರ ಸರ್ಕಾರವೇ ಮಾಡುತ್ತಿದೆ. ಏಪ್ರಿಲ್ 30 ರೊಳಗೆ ಸುಮಾರು 700 ಕೋಟಿ ರೂ. ವೆಚ್ಚದಲ್ಲಿ ತುಮಕೂರು ಹಾಗೂ ಹಾಸನ ಜಿಲ್ಲೆಯ ಲೆವೆಲ್ ಕ್ರಾಸಿಂಗ್ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು. ಈ ಕಾಮಗಾರಿಗಳನ್ನು ಮುಂಬರುವ 2027 ರೊಳಗೆ ಪೂರ್ಣಗೊಳಿಸಿ ಲೋಕಾರ್ಪಣೆ ಮಾಡಲಾಗುವುದು ಎಂದು  ಹೇಳಿದರು

ನಾನು ಕೇಂದ್ರ ಸಚಿವನಾದ 9 ತಿಂಗಳಲ್ಲಿ ಜಿಲ್ಲೆಯ ಬಹುತೇಕ ರೈಲ್ವೆ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡಿಸಿದ್ದೇನೆ. ಕೇವಲ ಕರ್ನಾಟಕವಲ್ಲದೆ ದೇಶದ ಇತರೆ ರಾಜ್ಯಗಳ ರೈಲ್ವೆ ಕಾಮಗಾರಿಗಳಿಗೂ ಪ್ರಧಾನಿ ನರೇಂದ್ರ ಮೋದಿಯವರು ಅನುದಾನ ನೀಡಿದ್ದಾರೆ ಎಂದರು.

1001174385

ರೈಲ್ವೆ ಇಲಾಖೆ ರಕ್ಷಣಾ ಇಲಾಖೆಯ ಮತ್ತೊಂದು ಮುಖವಾಗಿ ಕೆಲಸ ಮಾಡುತ್ತಿದೆ. ಹಾಗಾಗಿ ಇಂದು ಶಿಲಾನ್ಯಾಸ ನೆರವೇರಿಸಿರುವ ಪಾದಚಾರಿ ಸುರಂಗ ಮಾರ್ಗ ಹಾಗೂ ಭೀಮಸಂದ್ರದ ಬಳಿ ರೈಲ್ವೆ ಕೆಳ ಸೇತುವೆ ಕಾಮಗಾರಿಗಳನ್ನು ಮುಂದಿನ 7 ತಿಂಗಳೊಳಗೆ ಪೂರ್ಣಗೊಳಿಸಿ ಲೋಕಾರ್ಪಣೆ ಮಾಡಲಾಗುವುದು ಎಂದು ಅವರು ತಿಳಿಸಿದರು.

ಇದೇ ಸಂದರ್ಭದಲ್ಲಿ ಶಾಸಕರಾದ ಜ್ಯೋತಿಗಣೇಶ್, ಸುರೇಶ್‌ಗೌಡ, ಮಾಜಿ ಸಂಸದ ಜಿ.ಎಸ್. ಬಸವರಾಜು, ಮಹಾನಗರ ಪಾಲಿಕೆ ಆಯುಕ್ತ ಅಶ್ವಿಜ, ರೈಲ್ವೆ ಇಲಾಖೆಯ ಬೆಂಗಳೂರು ವಿಭಾಗೀಯ ವ್ಯವಸ್ಥಾಪಕ ಅಮಿತೇಶ್‌ಕುಮಾರ್ ಸಿನ್ಹಾ, ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಪರೀಕ್ಷಿತ್ ಮೋಹನ್ಪೂರಿಯಾ, ಕೃಷ್ಣಚೈತನ್ಯ, ಮಂಜುನಾಥ ಕನಮಡಿ, ರಾಜೀವ್ ಶರ್ಮಾ, ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿಶಂಕರ್ ಹೆಬ್ಬಾಕ, ವೈ.ಹೆಚ್. ಹುಚ್ಚಯ್ಯ, ಪಾಲಿಕೆ ಮಾಜಿ ಸದಸ್ಯ ಮಲ್ಲಿಕಾರ್ಜುನಯ್ಯ, ವೇದಮೂರ್ತಿ, ರುದ್ರೇಶ್, ಹನುಮಂತರಾಜು ಮತ್ತಿತರರು ಉಪಸ್ಥಿತರಿದ್ದರು. 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X