ತುಮಕೂರು | ರೈಲ್ವೆ ಕಾಮಗಾರಿ ಅನುಷ್ಠಾನಕ್ಕೆ ಶೀಘ್ರ ಭೂಮಿ ಹಸ್ತಾಂತರ ಮಾಡಲು ಕೇಂದ್ರ ಸಚಿವ ವಿ. ಸೋಮಣ್ಣ ಸೂಚನೆ

Date:

Advertisements

ತುಮಕೂರು ಜಿಲ್ಲೆಯಲ್ಲಿ ಶೇ.90ಕ್ಕಿಂತ ಕಡಿಮೆ ಭೂಸ್ವಾಧೀನ ಪಡಿಸಿಕೊಂಡಿರುವ ಪ್ರದೇಶಗಳಲ್ಲಿ ರೈಲ್ವೆ ಕಾಮಗಾರಿಗಳು ವಿಳಂಬಗೊಳ್ಳುತ್ತಿದ್ದು, ಶೀಘ್ರವಾಗಿ ಭೂ-ಸ್ವಾಧೀನ ಪಡಿಸಿಕೊಂಡು ರೈಲ್ವೆ ಇಲಾಖೆಗೆ ಹಸ್ತಾಂತರಿಸುವಂತೆ ವಿಶೇಷ ಭೂ ಸ್ವಾಧೀನ ಅಧಿಕಾರಿಗೆ ಕೇಂದ್ರ ಸಚಿವ ವಿ. ಸೋಮಣ್ಣ ಸೂಚನೆ ನೀಡಿದರು.

ತುಮಕೂರಿನಲ್ಲಿ ರೈಲ್ವೆ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮಾರ್ಚ್-2027ಕ್ಕೆ ಲೋಕಾರ್ಪಣೆ ಮಾಡಲು ಉದ್ದೇಶಿಸಿರುವ ರಾಜ್ಯದ ಮಹತ್ವ ಯೋಜನೆಗಳಾದ ತುಮಕೂರು-ದಾವಣಗೆರೆ, ಮತ್ತು ತುಮಕೂರು- ರಾಯದುರ್ಗ ರೈಲ್ವೇ ಮಾರ್ಗಗಳ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ತಿಳಿಸಿದರು. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿರುವುದರಿಂದ ಅಗತ್ಯ ಸೂಚನಾ ಫಲಕಗಳನ್ನು ಅಳವಡಿಸಬೇಕು. ಅಪಘಾತ ವಲಯಗಳನ್ನು ಗುರುತಿಸಿ ಅಪಘಾತಗಳು ಸಂಭವಿಸದಂತೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಈ ಸಂದರ್ಭ ನವಹದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ, ಶಾಸಕರಾದ ಜಿ. ಬಿ. ಜ್ಯೋತಿಗಣೇಶ್, ಬಿ. ಸುರೇಶ್ ಗೌಡ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ ವಿ.ಪಿ. ಬ್ರಹ್ಮಂಕರ್, ರೈಲ್ವೆ ಇಲಾಖೆಯ ಮುಖ್ಯ ಇಂಜಿನಿಯರ್ ಕೆ.ಜೆ.ಜಗದೀಶ್, ಸರ್ಕಾರದ ಕಾರ್ಯದರ್ಶಿ ಮಂಜುಳ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಶಿವಶಂಕರ್, ಚಿತ್ರದುರ್ಗ ಜಿಲ್ಲಾಧಿಕಾರಿ ವೆಂಕಟೇಶ್, ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಪೆÇಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಅರಣ್ಯ ಉಪ ಸಂರಕ್ಷಣಾಧಿಕಾರಿ ಅನುಪಮ, ಜಿಲ್ಲಾ ಮಟ್ಟದ ಪದಾಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Advertisements
WhatsApp Image 2024 08 09 at 10.52.48 1578a566
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X