ತುಮಕೂರು | ತಲ್ವಾರ್ ಹಿಡಿದು ಹುಟ್ಟುಹಬ್ಬ ಆಚರಿಸಿಕೊಂಡ ಯುವಕ: ವಿಡಿಯೋ ವೈರಲ್

Date:

Advertisements

ತಲ್ವಾರ್ ಹಿಡಿದು ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬ ಆಚರಿಸಿಕೊಂಡ ಯುವಕನೋರ್ವನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ನಡೆದಿದೆ. ವಿಡಿಯೋ ವೈರಲಾಗುತ್ತಿದ್ದಂತೆಯೇ ಎಲ್ಲೆಡೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ಗುಬ್ಬಿ ಪಟ್ಟಣದಲ್ಲಿ ಯುವಕರಿಬ್ಬರು ಮಾರ್ಕೆಟ್ ರಸ್ತೆಯಲ್ಲಿ ಸ್ನೇಹಿತರೊಂದಿಗೆ ತನ್ನ ಹುಟ್ಟು ಹಬ್ಬವನ್ನು ತಲ್ವಾರ್ ಎಂಬ ಹಿಡಿದು ಕೇಕ್ ಕತ್ತರಿಸುವ ಮೂಲಕ ಆಚರಿಸಿಕೊಂಡಿದ್ದು, ಗುಬ್ಬಿ ಪಟ್ಟಣದ ಜನತೆಯಲ್ಲಿ ಭಯ ಹುಟ್ಟಿಸಿದೆ.

ತುಮಕೂರು ಜಿಲ್ಲೆಯಲ್ಲಿ ಸಮಾಜಘಾತುಕ ಕೃತ್ಯಗಳು ನಡೆಯುತ್ತಿವೆ ಎಂಬ ಸುದ್ದಿ ಕೆಲ ದಿನಗಳಿಂದ ಸದ್ದು ಮಾಡುತ್ತಿರುವುದು ಒಂದೆಡೆಯಾದರೆ, ಗುಬ್ಬಿ ಪಟ್ಟಣದಲ್ಲಿ ಯಾವುದೇ ಕಾನೂನಿನ ಭಯವಿಲ್ಲದೆ ಯುವಕನೊಬ್ಬ ರೌಡಿಯ ರೀತಿ ತಲ್ವಾರ್ ಹಿಡಿದು ಬಾಸ್ ಎಂಬ ಕೇಕ್ ಕತ್ತರಿಸುವ ದೃಶ್ಯವನ್ನು ವಿಡಿಯೋ ಮಾಡಿ ಆತನ ಸ್ನೇಹಿತರು ತಮ್ಮ ಸ್ಟೇಟಸ್ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿಕೊಂಡು ಭಯದ ವಾತಾವರಣ ಸೃಷ್ಟಿಸಿರುವುದು ಮತ್ತೊಂದೆಡೆಯಾಗಿದೆ.

Advertisements
WhatsApp Image 2024 10 17 at 10.56.41 AM

ಗುಬ್ಬಿಯಲ್ಲಿ ಎಂದೂ ಈ ಮಟ್ಟದ ಹುಟ್ಟುಹಬ್ಬ ಆಚರಣೆ ಮಾಡಿದ್ದು ಕಂಡಿಲ್ಲ ಎನ್ನುವ ಜನ ಈ ಆಚರಣೆ ಬಗ್ಗೆ ಖಂಡಿಸುತ್ತಿದ್ದಾರೆ. ಬಾಸ್ ಎಂಬ ಅಕ್ಷರದ ಕೇಕ್ ಕತ್ತರಿಸಲು ತಲ್ವಾರ್ ಬಳಸಿದ ಬಗ್ಗೆ ಪೊಲೀಸರು ಜಾಣ ಮೌನ ತಾಳಿದ್ದಾರೆ. ವಿಷಯ ತಿಳಿದು ಯುವಕರ ವಿಚಾರಣೆ ಮಾಡಿ ಪ್ರಭಾವಿಗಳ ಶಿಫಾರಸ್ಸಿಗೆ ಹಾಗೆಯೇ ಮರಳಿಸಿರುವ ಆರೋಪ ಕೂಡ ಕೇಳಿ ಬಂದಿದೆ.

ಮಾರ್ಕೆಟ್ ರಸ್ತೆಯಲ್ಲಿ ಹುಟ್ಟು ಹಬ್ಬ ಆಯೋಜನೆ ಮಾಡಿದ ಯುವಕರು ಬಾಸ್ ಎಂಬ ಕೇಕ್ ತಂದು ಸ್ನೇಹಿತರಾದ ಶಾರುಖ್ ಹಾಗೂ ಮುಗಲ್ ಪಾಷ ಎಂಬ ಇಬ್ಬರು ಯುವ ಮುಖಂಡರ ಜನುಮ ದಿನ ಆಚರಣೆಯನ್ನು ಮಾಡಿದ್ದು, ಈ ಪೈಕಿ ಓರ್ವ ತಲ್ವಾರ್ ಬಳಸಿ ಕೇಕ್ ಕತ್ತರಿಸಿದ್ದು, ಅದರ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ. ಆತಂಕ ಮೂಡಿಸಿದ ಈ ಘಟನೆ ಬಗ್ಗೆ ಜಿಲ್ಲಾಡಳಿತ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ಗಮನ ಹರಿಸಬೇಕಿದೆ ಎಂದು ಸಾರ್ವಜನಿಕರ ಒತ್ತಾಯವಾಗಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X