ತುಮಕೂರು | ತಲ್ವಾರ್ ಹಿಡಿದು ಹುಟ್ಟುಹಬ್ಬ ಆಚರಿಸಿಕೊಂಡ ಯುವಕ: ವಿಡಿಯೋ ವೈರಲ್

Date:

Advertisements

ತಲ್ವಾರ್ ಹಿಡಿದು ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬ ಆಚರಿಸಿಕೊಂಡ ಯುವಕನೋರ್ವನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ನಡೆದಿದೆ. ವಿಡಿಯೋ ವೈರಲಾಗುತ್ತಿದ್ದಂತೆಯೇ ಎಲ್ಲೆಡೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ಗುಬ್ಬಿ ಪಟ್ಟಣದಲ್ಲಿ ಯುವಕರಿಬ್ಬರು ಮಾರ್ಕೆಟ್ ರಸ್ತೆಯಲ್ಲಿ ಸ್ನೇಹಿತರೊಂದಿಗೆ ತನ್ನ ಹುಟ್ಟು ಹಬ್ಬವನ್ನು ತಲ್ವಾರ್ ಎಂಬ ಹಿಡಿದು ಕೇಕ್ ಕತ್ತರಿಸುವ ಮೂಲಕ ಆಚರಿಸಿಕೊಂಡಿದ್ದು, ಗುಬ್ಬಿ ಪಟ್ಟಣದ ಜನತೆಯಲ್ಲಿ ಭಯ ಹುಟ್ಟಿಸಿದೆ.

ತುಮಕೂರು ಜಿಲ್ಲೆಯಲ್ಲಿ ಸಮಾಜಘಾತುಕ ಕೃತ್ಯಗಳು ನಡೆಯುತ್ತಿವೆ ಎಂಬ ಸುದ್ದಿ ಕೆಲ ದಿನಗಳಿಂದ ಸದ್ದು ಮಾಡುತ್ತಿರುವುದು ಒಂದೆಡೆಯಾದರೆ, ಗುಬ್ಬಿ ಪಟ್ಟಣದಲ್ಲಿ ಯಾವುದೇ ಕಾನೂನಿನ ಭಯವಿಲ್ಲದೆ ಯುವಕನೊಬ್ಬ ರೌಡಿಯ ರೀತಿ ತಲ್ವಾರ್ ಹಿಡಿದು ಬಾಸ್ ಎಂಬ ಕೇಕ್ ಕತ್ತರಿಸುವ ದೃಶ್ಯವನ್ನು ವಿಡಿಯೋ ಮಾಡಿ ಆತನ ಸ್ನೇಹಿತರು ತಮ್ಮ ಸ್ಟೇಟಸ್ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿಕೊಂಡು ಭಯದ ವಾತಾವರಣ ಸೃಷ್ಟಿಸಿರುವುದು ಮತ್ತೊಂದೆಡೆಯಾಗಿದೆ.

Advertisements
WhatsApp Image 2024 10 17 at 10.56.41 AM

ಗುಬ್ಬಿಯಲ್ಲಿ ಎಂದೂ ಈ ಮಟ್ಟದ ಹುಟ್ಟುಹಬ್ಬ ಆಚರಣೆ ಮಾಡಿದ್ದು ಕಂಡಿಲ್ಲ ಎನ್ನುವ ಜನ ಈ ಆಚರಣೆ ಬಗ್ಗೆ ಖಂಡಿಸುತ್ತಿದ್ದಾರೆ. ಬಾಸ್ ಎಂಬ ಅಕ್ಷರದ ಕೇಕ್ ಕತ್ತರಿಸಲು ತಲ್ವಾರ್ ಬಳಸಿದ ಬಗ್ಗೆ ಪೊಲೀಸರು ಜಾಣ ಮೌನ ತಾಳಿದ್ದಾರೆ. ವಿಷಯ ತಿಳಿದು ಯುವಕರ ವಿಚಾರಣೆ ಮಾಡಿ ಪ್ರಭಾವಿಗಳ ಶಿಫಾರಸ್ಸಿಗೆ ಹಾಗೆಯೇ ಮರಳಿಸಿರುವ ಆರೋಪ ಕೂಡ ಕೇಳಿ ಬಂದಿದೆ.

ಮಾರ್ಕೆಟ್ ರಸ್ತೆಯಲ್ಲಿ ಹುಟ್ಟು ಹಬ್ಬ ಆಯೋಜನೆ ಮಾಡಿದ ಯುವಕರು ಬಾಸ್ ಎಂಬ ಕೇಕ್ ತಂದು ಸ್ನೇಹಿತರಾದ ಶಾರುಖ್ ಹಾಗೂ ಮುಗಲ್ ಪಾಷ ಎಂಬ ಇಬ್ಬರು ಯುವ ಮುಖಂಡರ ಜನುಮ ದಿನ ಆಚರಣೆಯನ್ನು ಮಾಡಿದ್ದು, ಈ ಪೈಕಿ ಓರ್ವ ತಲ್ವಾರ್ ಬಳಸಿ ಕೇಕ್ ಕತ್ತರಿಸಿದ್ದು, ಅದರ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ. ಆತಂಕ ಮೂಡಿಸಿದ ಈ ಘಟನೆ ಬಗ್ಗೆ ಜಿಲ್ಲಾಡಳಿತ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ಗಮನ ಹರಿಸಬೇಕಿದೆ ಎಂದು ಸಾರ್ವಜನಿಕರ ಒತ್ತಾಯವಾಗಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X