ತುಮಕೂರು | ಹಾಲಪ್ಪ ಯಾರು? ಮುದ್ದಹನುಮೇಗೌಡರಿಗೆ ಟಿಕೆಟ್ ಸಿಗುವ ಸಾಧ್ಯತೆ ಇದೆ: ಸಚಿವ ರಾಜಣ್ಣ

Date:

Advertisements

ಮಾಜಿ ಸಂಸದ ಮುದ್ದಹನುಮೇಗೌಡ ಅವರು ಯಾವುದೇ ಷರತ್ತಿಲ್ಲದೆ ಪಕ್ಷಕ್ಕೆ ಮರು ಸೇರ್ಪಡೆಯಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ಅವರಿಗೆ ಟಿಕೆಟ್ ಸಿಗುವ ಸಾಧ್ಯತೆ ಇದೆ ಎಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ಹೇಳಿದರು.

ತುಮಕೂರು ನಗರದ ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದರು.

“ಮುದ್ದಹನುಮೇಗೌಡರನ್ನು ನಾನೊಬ್ಬನೇ ಪಕ್ಷಕ್ಕೆ ಸೇರಿಸಿಕೊಂಡಿಲ್ಲ. ಜಿಲ್ಲೆಯ ಮುಖಂಡರೆಲ್ಲರೂ ಸೇರಿ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗಿದೆ. ಅವರೂ ಕೂಡ ಯಾವುದೇ ಷರತ್ತಿಲ್ಲದೆ ಪಕ್ಷಕ್ಕೆ ಬಂದಿದ್ದಾರೆ. ಮುದ್ದಹನುಮೇಗೌಡರನ್ನು ಯಾರು ಪಕ್ಷಕ್ಕೆ ಸೇರಿಸಿಕೊಂಡಿದ್ದಾರೋ ಅವರೇ ಲೋಕಸಭಾ ಚುನಾವಣೆಗೆ ಟಿಕೆಟ್ ಕೊಡಿಸುತ್ತಾರೆ” ಎಂದು ಹೇಳುವ ಮೂಲಕ ಲೋಕಸಭಾ ಚುನಾವಣೆಯ ಟಿಕೆಟ್ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದರು.

Advertisements

“ಲೋಕಸಭಾ ಚುನಾವಣೆಗೆ ಟಿಕೆಟ್ ಕೇಳುವ ಹಕ್ಕು ಎಲ್ಲರಿಗೂ ಇದೆ. ಆದರೆ ಯಾರಿಗೆ ಟಿಕೆಟ್ ಕೊಡಬೇಕು ಎಂಬ ಬಗ್ಗೆ ಅಂತಿಮವಾಗಿ ಪಕ್ಷದ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ” ಎಂದರು.

ಬಿಜೆಪಿಯಿಂದ ಮಾಜಿ ಸಚಿವ ವಿ ಸೋಮಣ್ಣನವರು ಸ್ಪರ್ಧೆ ಮಾಡುತ್ತಾರಂತೆ ಎಂಬ ಪತ್ರಕರ್ತರ ಪ್ರಶ್ನೆಗೆ ಸಚಿವ ರಾಜಣ್ಣನವರು ಪ್ರತಿಕ್ರಿಯಿಸಿದ್ದು, “ಆಕಾಶ ನೋಡೋಕೆ ನೂಕು ನುಗ್ಗಲಾ. ಸೋಮಣ್ಣ ಸ್ಪರ್ಧೆ ಮಾಡಲಿ ಬಿಡಿ. ನಾನು ಸೋಮಣ್ಣ ಒಳ್ಳೆಯ ಸ್ನೇಹಿತರು. ಅವರ ಸ್ಪರ್ಧೆಗೂ ನಮಗೂ ಯಾವುದೇ ಸಂಬಂಧ ಇಲ್ಲ” ಎಂದರು.

ಈ ಸುದ್ದಿ ಓದಿದ್ದೀರಾ? ಡಿವೈಎಫ್ಐ ಸಮ್ಮೇಳನ | ಕೋಮುವಾದ, ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಿ: ನ್ಯಾ. ನಾಗಮೋಹನ್ ದಾಸ್

ತುಮಕೂರು ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಮುರುಳೀಧರ ಹಾಲಪ್ಪ ಟಿಕೆಟ್ ರೇಸ್‌ನಲ್ಲಿದ್ದಾರಲ್ಲಾ ಎಂಬ ಪ್ರಶ್ನೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, “ಹಾಲಪ್ಪ ಯಾರು? ಈವರೆಗೂ ಯಾರಿಗೆ ಎಷ್ಟು ಮತ ಹಾಕಿಸಿದ್ದಾರೆ” ಎಂದು ಪ್ರಶ್ನಿಸಿದರು.

“ನನ್ನ ಕ್ಷೇತ್ರದಲ್ಲಿ ಈವರೆಗೂ ಕಾಂಗ್ರೆಸ್ ಪಕ್ಷಕ್ಕೆ ಎಷ್ಟು ಮತ ಹಾಕಿಸಿದ್ದಾರೆ ಎಂಬುದನ್ನು ಹೇಳಲಿ, ಮಾಧ್ಯಮದವರೇ ಅವರನ್ನು ಟಿಕೆಟ್ ರೇಸ್‌ಗೆ ತರುತ್ತೀರಾ ಎಂದ ಅವರು, ಮಾರ್ಚ್‌ 10ರೊಳಗೆ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಫೈನಲ್ ಆಗುವ ಸಾಧ್ಯತೆ ಇದೆ” ಎಂದು ತಿಳಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X