ಗುಬ್ಬಿ | ತೋಟದಲ್ಲಿ ಮೇವಿನ ಮಧ್ಯೆ ಗಾಂಜಾ : ಮಾಲು ಸಮೇತ ಆರೋಪಿ ಬಂಧನ

Date:

 ತೋಟದಲ್ಲಿ ಗಾಂಜಾ ಗಿಡಗಳನ್ನು ಬೆಳೆದ ಆರೋಪಿ ಬಗ್ಗೆ ಖಚಿತ ಮಾಹಿತಿ ಆಧರಿಸಿದ ಪೊಲೀಸರು ತಾಲ್ಲೂಕಿನ ಸುರಿಗೇನಹಳ್ಳಿ ಗ್ರಾಮದಲ್ಲಿ ಹತ್ತು ಗಾಂಜಾ ಗಿಡಗಳು ಹಾಗೂ 400 ಗ್ರಾಂ ಗಾಂಜಾ ಮಾಲು ಸಮೇತ ಬಂಧಿಸಿದ ಘಟನೆ ಸೋಮವಾರ ಸಂಜೆ ನಡೆದಿದೆ.

- Advertisement -

ಆರೋಪಿ ನಲ್ಲೂರಯ್ಯ (40) ಸುರಿಗೇನಹಳ್ಳಿ ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ. ತೋಟದಲ್ಲಿ ಬೆಳೆದ ಮೇವು ಜೋಳದ ಗಿಡಗಳ ಮಧ್ಯೆ ಸೊಂಪಾಗಿ ಗಾಂಜಾ ಗಿಡಗಳು ಬೆಳೆದ ಆರೋಪಿ ಬಹಳ ದಿನಗಳಿಂದ ಈ ಕೃತ್ಯ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಗಾಂಜಾ ಗಿಡಗಳು ಬೆಳೆದು 400 ಗ್ರಾಂ ಗಾಂಜಾ ಸೊಪ್ಪನ್ನು ಸಿದ್ಧಪಡಿಸಿ ಮಾರಾಟಕ್ಕೆ ಸಜ್ಜಾಗಿಸಿದ್ದ ಖಚಿತ ಮಾಹಿತಿ ಪಡೆದ ಗುಬ್ಬಿ ಪೊಲೀಸರು ಡಿವೈಎಸ್ಪಿ ಶೇಖರ್ ಅವರ ನೇತೃತ್ವದಲ್ಲಿ ಸಿಪಿಐ ರಾಘವೇಂದ್ರ, ಪಿಎಸ್ಐ ಸುನೀಲ್ ಕುಮಾರ್ ಅವರ ತಂಡ ದಾಳಿ ಮಾಡಿ ಆರೋಪಿಯನ್ನು ಮಾಲು ಸಮೇತ ಬಂಧಿಸಿದ್ದಾರೆ.

ವಿಷಯ ತಿಳಿದ ತಹಶೀಲ್ದಾರ್ ಆರತಿ.ಬಿ ಸ್ಥಳ ಮಹಜರು ನಡೆಸಿ ಆರೋಪಿಯ ವಿರುದ್ಧ ಕಾನೂನು ಕ್ರಮಕ್ಕೆ ಸೂಚಿಸಿದರು. ದಾಳಿ ಮಾಡಿದ ಪೊಲೀಸರ ತಂಡದಲ್ಲಿ ನವೀನ್, ಶಶಿಧರ್, ಹನುಮಂತ, ವಿಶ್ವನಾಥ್, ನಟರಾಜ್ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಪ್ರಜಾ ಸೇವಾ ಅಭಿಯಾನ ಕಾರ್ಯಕ್ರಮದ ಬಳಿ ಹೇಮಾವತಿ ಹೋರಾಟಗಾರರ ದಿಢೀರ್ ಪ್ರತಿಭಟನೆ

ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರಿಗೆ ಹೇಮಾವತಿ ಲಿಂಕ್ ಕೆನಾಲ್ ಹಾಗೂ ಪೈಪ್‌ಲೈನ್...

ಗುಬ್ಬಿ | ವಿರೋಧ ಪಕ್ಷ ಎಂದರೆ ಸಲ್ಲದ ಆರೋಪಗಳಿಗೆ ಸೀಮಿತವಲ್ಲ: ಶಾಸಕ ಶ್ರೀನಿವಾಸ್

ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ತಲೆಬುಡವಿಲ್ಲದ ಆರೋಪಗಳನ್ನು ಮಾಡುವುದಕ್ಕೆ...

ಗುಬ್ಬಿ | ಪ್ರಜಾ ಸೇವಾ ಆಂದೋಲನ ಯಶಸ್ವಿಗೆ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

 ಸಾರ್ವಜನಿಕರ ಅರ್ಜಿ ಹಾಗೂ ಅಹವಾಲುಗಳಿಗೆ ಒಂದೇ ಸೂರಿನಡಿ ಸ್ಥಳದಲ್ಲೇ ಪರಿಹಾರ ಒದಗಿಸುವ...

ಗುಬ್ಬಿ | ಕತ್ತಲಲ್ಲಿ ಕಳೆದುಹೋಗುತ್ತಿದೆ ಆರೋಗ್ಯದ ಹಾದಿ!

ಆರೋಗ್ಯ ಕಾಪಾಡಿಕೊಳ್ಳಲು ಪ್ರತಿದಿನ ಬೆಳಗ್ಗೆ-ಸಂಜೆ ವಾಕಿಂಗ್, ಜಾಗಿಂಗ್‌ಗಾಗಿ ಸರ್ಕಾರಿ ಜೂನಿಯರ್ ಕಾಲೇಜು...