ಮಧುಗಿರಿ | ಪರಂಪರೆ ಮತ್ತು ಐತಿಹಾಸಿಕ ಮಹತ್ವ ಅರಿಯುವುದು ಯುವಜನರ ಜವಾಬ್ದಾರಿ : ಡಾ. ಎಸ್.ವಿ. ವೆಂಕಟೇಶಯ್ಯ

Date:

ಐತಿಹಾಸಿಕ ಪರಂಪರೆ ನಮ್ಮ ಗತಕಾಲದ ಸಾಧನೆ, ಸಂಸ್ಕೃತಿ ಮತ್ತು ಅನನ್ಯತೆಯನ್ನು ಪ್ರತಿಬಿಂಬಿಸುವ ಜೀವಂತ ಸಾಕ್ಷಿಯಾಗಿದೆ. ಪ್ರಾಚೀನ ಶಾಸನಗಳು, ಹಸ್ತಪ್ರತಿಗಳು, ವಾಸ್ತುಶಿಲ್ಪ, ಸ್ಮಾರಕಗಳು ಹಾಗೂ ಸಾಂಪ್ರದಾಯಿಕ ಕಲೆಗಳನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಹಸ್ತಾಂತರಿಸುವುದು ಯುವಜನರ ಜವಾಬ್ದಾರಿ ಎಂದು ಭಾರತೀಯ ಪುರಾತತ್ವ ಇಲಾಖೆಯ ನಿವೃತ್ತ ನಿರ್ದೇಶಕ ಡಾ. ಎಸ್.ವಿ. ವೆಂಕಟೇಶಯ್ಯ ಹೇಳಿದರು.

- Advertisement -

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐಕ್ಯೂಎಸಿ, ಇತಿಹಾಸ ವಿಭಾಗ, ತುಮಕೂರು ಸಂಶೋಧಕರ ತಂಡ, ಇತಿಹಾಸ ಸಂಕಲನ ಸಮಿತಿ, ಹಳೆ ವಿದ್ಯಾರ್ಥಿಗಳ ಸಂಘ ಹಾಗೂ ಕರ್ನಾಟಕ ಇತಿಹಾಸ ಅಕಾಡೆಮಿ, ಬೆಂಗಳೂರು ಇವರ ಸಹಯೋಗದಲ್ಲಿ ಆಯೋಜಿಸಿದ್ದ ‘ಐತಿಹಾಸಿಕ ಪರಂಪರೆ ಉಳಿಸಿ–ಇತಿಹಾಸ ದಿನ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸಾಕ್ಷ್ಯ ಚಿತ್ರಗಳಿರದ ದೇಶವು ಚರಿತ್ರೆ ಇರದ ರಾಷ್ಟ್ರದಂತೆ ಎಂದಿದ್ದ...

ಚಿಲಿ ದೇಶದ ಜನರ ಸಾಮಾಜಿಕ ಬದುಕು ಹಾಗೂ ರಾಜಕೀಯ ಬೆಳವಣಿಗೆಗಳು ಹೆಣೆದುಕೊಂಡ ಘನವಾದ ಚರಿತ್ರೆಯ ಸಂಪುಟವಾಗಿ ಕಟ್ಟಿದ ಧೀಮಂತ ಸಿನೆಮಾ ಕಲಾವಿದ ಪ್ಯಾಟ್ರಿಷಿಯೊ ಗುಜ್ಮಾನ್, ಇತ್ತೀಚಿಗೆ ಇಲ್ಲವಾದರು. ಅವರ ಸೃಜನಶೀಲತೆ, ತುಡಿತ ಮತ್ತು...

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ನಮ್ಮ ಹಿರಿಯರ ಜೀವನಪದ್ಧತಿ, ಕಲೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಬೇರುಗಳನ್ನು ಅರಿಯಲು ಐತಿಹಾಸಿಕ ಪರಂಪರೆಯ ಸಂರಕ್ಷಣೆ ಅಗತ್ಯವಾಗಿದೆ ಎಂದರು.

1004016570

ಇತಿಹಾಸ ವಿಭಾಗದ ಮುಖ್ಯಸ್ಥೆ ಪ್ರೊ. ವೇದಲಕ್ಷ್ಮಿ ಜಿ. ಮಾತನಾಡಿ, ಪ್ರಾಚೀನ ಹಸ್ತಪ್ರತಿಗಳು, ಶಾಸನಗಳು ಹಾಗೂ ನಾಣ್ಯಗಳು ಗತಕಾಲದ ರಾಜಕೀಯ, ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿಗತಿಗಳ ಕುರಿತು ಮಹತ್ವದ ಮಾಹಿತಿಯನ್ನು ಒದಗಿಸುತ್ತವೆ ಎಂದರು.

Advertisements

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಕೆ.ಎಸ್. ಕುಮಾರ್ ಮಾತನಾಡಿ, ಪ್ರಾಚೀನ ದೇವಾಲಯಗಳು, ಕೋಟೆಗಳು ಹಾಗೂ ಸ್ಮಾರಕಗಳನ್ನು ಅವುಗಳ ಮೂಲ ಸ್ವರೂಪಕ್ಕೆ ಧಕ್ಕೆಯಾಗದಂತೆ ಸಂರಕ್ಷಿಸುವುದು ಅಗತ್ಯ ಎಂದು ಹೇಳಿದರು.

ಕನ್ನಡ ವಿಭಾಗದ ಮುಖ್ಯಸ್ಥ ಡಾ. ಗೋವಿಂದರಾಯ ಮಾತನಾಡಿ, ತಾಳೆಗರಿ, ಹಸ್ತಪ್ರತಿಗಳು ಹಾಗೂ ಅಪರೂಪದ ಗ್ರಂಥಗಳನ್ನು ಸಂರಕ್ಷಿಸುವುದು ನಮ್ಮ ಅಸ್ಮಿತೆ ಮತ್ತು ಜ್ಞಾನಪರಂಪರೆಯನ್ನು ಭವಿಷ್ಯಕ್ಕೆ ತಲುಪಿಸುವ ಕಾರ್ಯವಾಗಿದೆ ಎಂದರು.

ತುಮಕೂರು ಸಂಶೋಧಕರ ತಂಡದ ಸಂಶೋಧನಾರ್ಥಿ ಬಿ.ಆರ್. ರಂಗನಾಥ್ ಅವರು ಮಧುಗಿರಿ ತಾಲೂಕಿನ ಇತಿಹಾಸ, ಶಾಸನಗಳು, ಶಿಲಾಯುಗದ ಉಪಕರಣಗಳು ಹಾಗೂ ನಾಣ್ಯಗಳ ಕುರಿತ ಬಿತ್ತಿಚಿತ್ರ ಪ್ರದರ್ಶನ ನಡೆಸಿದರು.

ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಮಂಜುನಾಥ್ ಬಿ., ಪ್ರಾಧ್ಯಾಪಕರಾದ ಡಾ. ಎಂ.ಎಸ್. ನಾಗರಾಜು, ಡಾ. ಮಂಜುನಾಥ್ ಬುಡಸನಹಳ್ಳಿ, ಪತ್ರಾಂಕಿತ ವ್ಯವಸ್ಥಾಪಕಿ ಚಂದ್ರಕಲಾ, ಉಪನ್ಯಾಸಕರಾದ ರಘುನಾಥ್, ಎಚ್.ಡಿ. ನಾಗಭೂಷಣ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಯಾರಿಗೆ?: ಹೈಕಮಾಂಡ್ ಮುಂದೆ ಬಣ, ಸಾಮಾಜಿಕ ಸಮೀಕರಣದ ಸವಾಲು

ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್‌ನ ಸಂಘಟನಾ ಭವಿಷ್ಯ, ಸಾಮಾಜಿಕ ಸಮೀಕರಣ, ಮಹಿಳಾ ಪ್ರಾತಿನಿಧ್ಯ...

ಮಧುಗಿರಿ | ಪಿಎಚ್‌ಡಿ ಪದವಿ ಪಡೆದ ಕೃಷ್ಣಮೂರ್ತಿಗೆ ಅಭಿನಂದನೆ

ಮೈಸೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಹಾಗೂ ಮಂಡ್ಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶಿವಚಿತ್ತಪ್ಪ...

ಗುಬ್ಬಿ | ಚೇಳೂರು ಪ್ರಜಾಸೇವಾ ಅಭಿಯಾನದಲ್ಲಿ ವಿಕಲಚೇತನರು, ಹಿರಿಯ ನಾಗರಿಕರ ಪರದಾಟ :ಅರ್ಜಿ ನೀಡಲು ಮೆಟ್ಟಿಲು ಹತ್ತಲಾಗದೆ ವಾಪಸ್‌

 ಗ್ರಾಮೀಣ ಜನರ ಸಮಸ್ಯೆಗಳನ್ನು ಸ್ಥಳದಲ್ಲೇ ಆಲಿಸಿ, ವಿವಿಧ ಸರ್ಕಾರಿ ಸೇವೆಗಳನ್ನು ತ್ವರಿತವಾಗಿ...