ಶಿರಾ | ಮಾನಂಗಿಗೆ ಕುಡಿಯುವ ನೀರು ಸರಬರಾಜಿಗೆ ಡಿ.ಸಿ. ಸೂಚನೆ

Date:

ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್  ಶುಕ್ರವಾರ ಬೆಳಿಗ್ಗೆ ಶಿರಾ ತಾಲೂಕು ಭುವನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾನಂಗಿ ಗ್ರಾಮಕ್ಕೆ ಭೇಟಿ ನೀಡಿ ತುರ್ತಾಗಿ ಕುಡಿಯುವ ನೀರು ಸರಬರಾಜು ಮಾಡಲು ಸೂಕ್ತ ಕ್ರಮವಹಿಸುವಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ಸೂಚಿಸಿದರು

- Advertisement -

 ಜಿಲ್ಲಾಧಿಕಾರಿಗಳ ಭೇಟಿ ಸಮಯದಲ್ಲಿ ಪ್ರಸ್ತುತ ಮಾನಂಗಿ ಗ್ರಾಮದ ಕುಡಿಯುವ ನೀರು ಸರಬರಾಜು ಕೊಳವೆ ಬಾವಿ ವಿಫಲವಾಗಿದ್ದು, ಖಾಸಗಿ ಕೊಳವೆಬಾವಿ ಮೂಲಕ ನೀರು ಸರಬರಾಜು ಮಾಡುತ್ತಿರುವುದಾಗಿ ಗ್ರಾಮಸ್ಥರು ಮಾಹಿತಿ ನೀಡಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಗ್ರಾಮದ ಮನೆಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಗ್ರಾಮ ನೈರ್ಮಲ್ಯ ಕುಡಿಯವ ನೀರು ಕುರಿತು ಚರ್ಚಿಸಿದರು ಹಾಗೂ ಗ್ರಾಮದ ಶಾಲೆಗೆ ಭೇಟಿ ನೀಡಿ ಮಕ್ಕಳಿಗೆ ನೀಡುತ್ತಿರುವ ಬೆಳಗಿನ ಸಾಯಿ ಶೂರ್ ಮಾಲ್ಟನ್ನು ತಾವು ಖುದ್ದು ಕುಡಿದು ಗುಣಮಟ್ಟ ಪರಿಶೀಲಿಸಿದರು. 

ಗ್ರಾಮಸ್ಥರು ತಮ್ಮ ಗ್ರಾಮಕ್ಕೆ ಕುಡಿಯುವ ನೀರಿನ ಘಟಕ ಮಂಜೂರು ಮಾಡಲು ಮನವಿ ಮಾಡಿದರು ಹಾಗೂ ಆಹಾರ ಇಲಾಖೆಯಿಂದ ತಮ್ಮ ಗ್ರಾಮದಲ್ಲಿರುವ ಆಹಾರ ವಿತರಣೆಗೆ ಅನುಕೂಲ ಮಾಡಿಕೊಡಲು ಕೋರಿದರು. ಈ ಕುರಿತು ತ್ವರಿತವಾಗಿ ಸೂಕ್ತ ಕ್ರಮವಹಿಸುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದರು. 

ಈ ಸಂದರ್ಭದಲ್ಲಿ ಮಧುಗಿರಿ ವಿಭಾಗದ ಉಪ ವಿಭಾಗಾಧಿಕಾರಿ ಗೋಟೂರು ಶಿವಪ್ಪ, ತಹಶೀಲ್ದಾರ್, ಶಿರಾ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಕಾರ್ಯ ಪಾಲಕ ಅಭಿಯಂತರರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಸಿಬ್ಬಂದಿ, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮಸ್ಥರುಗಳು ಹಾಜರಿದ್ದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿರಾ | ರಹಮತ್ ತರೀಕೆರೆಗೆ ‘ಗಣೆ ಗೌರವ’ : ಹುಲ್ಲು ನೀರಿಗಾಗಿ ಪ್ರಾರ್ಥಿಸಿ, ಅಹೋರಾತ್ರಿ ಸಾಂಸ್ಕೃತಿಕ ಜಾಗರಣೆ

ಜಗತ್ತಿನಲ್ಲಿ ಪ್ರಸ್ತುತ ಹುಲ್ಲು ನೀರಿನ ಕೊರತೆಗಿಂತ ಹೆಚ್ಚಾಗಿ ಪ್ರೀತಿ ಮತ್ತು ವಿಶ್ವಾಸದ...

ಶಿರಾ | ರಹಮತ್ ತರೀಕೆರೆಗೆ ಶಿವೋತ್ಸವದ ʼಗಣೆ ಗೌರವʼ

ಕನ್ನಡ ನಾಡಿನ ದಾರ್ಶನಿಕ ಪರಂಪರೆಯ ವಿದ್ವಾಂಸ ಡಾ. ರಹಮತ್ ತರೀಕೆರೆ ಅವರಿಗೆ...

ಶಿರಾ | ಮಕ್ಕಳಿಗಾದರೂ ಮಾಲಿನ್ಯಮುಕ್ತ ಪರಿಸರವನ್ನು ಉಳಿಸಿ : ಮಂಜುನಾಥ್ ಅಮಲಗೊಂದಿ

ಸಿರಾ ತಾಲ್ಲೂಕಿನ ಅಮಲಗೊಂದಿಯ ಚಿಗುರು ಯುವಜನ ಸಂಘ ದಿಂದ ಶ್ರೀಬೊಮ್ಮಲಿಂಗೇಶ್ವರ ಗ್ರಾಮಾಂತರ...

ತುಮಕೂರು | ರಾಜಣ್ಣರನ್ನು ಸಚಿವ ಸಂಪುಟಕ್ಕೆ ಮರು ಸೇರ್ಪಡೆಗೊಳಿಸಿ: ಜಿ ಎನ್‌ ಮೂರ್ತಿ

ರಾಜ್ಯದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರ ಬೆನ್ನೆಲುಬಾದ ಹಾಗೂ ಅವರ ವಿರುದ್ಧ...