ತಿಪಟೂರು | ಎಸ್ಐಆರ್ ಪ್ರಕ್ರಿಯೆಯಿಂದ ಯಾವೊಬ್ಬ ಮತದಾರನೂ ಹೊರಗುಳಿಯಬಾರದು : ಸಿ. ಬಿ. ಶಶಿಧರ್ (ಟೂಡ)

Date:

 ಚುನಾವಣಾ ಆಯೋಗ ಹಮ್ಮಿಕೊಂಡಿರುವ ಈ ಎಸ್ಐಆರ್-ಪ್ರಕ್ರಿಯೆಯಿಂದಾಗಿ ಕ್ಷೇತ್ರದ ಯಾವೊಬ್ಬ ಮತದಾರನೂ ಹೊರಗುಳಿಯಬಾರದು. ಹಾಗೂ ಈ ಎಸ್ಐಆರ್-ಪ್ರಕ್ರಿಯೆಗೆ ಒಳಗಾಗುವ ಜನ-ಸಾಮಾನ್ಯರಿಗೆ ಅನಾನುಕೂಲ ಆಗದಂತೆ ದಾಖಲಾತಿಗಳ-ಲಭ್ಯತೆಯ ಕುರಿತು ಜಾಗೃತಿ ಮೂಡಿಸಲಾಗುವು ಎಂದು ಜನಸ್ಪಂದನ ಟ್ರಸ್ಟ್ ಅಧ್ಯಕ್ಷ ಸಿ. ಬಿ. ಶಶಿಧರ್ (ಟೂಡಾ) ತಿಳಿಸಿದರು 

- Advertisement -

ತಿಪಟೂರು ನಗರದ ರೋಟರಿ ಭವನದಲ್ಲಿ ಜನಸ್ಪಂದನ ಟ್ರಸ್ಟ್ ಮತ್ತು ಜನಪರ ಸಂಘಟನೆಗಳ ಸಹಯೋಗದಲ್ಲಿ ಶುಕ್ರವಾರ ಮಧ್ಯಾಹ್ನ ಎಸ್ಐಆರ್ ಕುರಿತು ಆಯೋಜಿಸಿದ್ದ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಅಕ್ಷರವಂಚಿತರು, ಅಲೆಮಾರಿ-ಆದಿವಾಸಿಗಳು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರು ಮತ್ತು ಹಿರಿಯ ನಾಗರಿಕರಿಗೆ ಎಸ್ಐಆರ್ ಪ್ರಕ್ರಿಯೆ ಬಗ್ಗೆ ಜಾಗೃತಿ ಮೂಡಿಸಲಾಗುವುದು. ಮುಖ್ಯವಾಗಿ, ಮತದಾರರ ಮತ-ಅಧಿಕಾರ ಹಕ್ಕನ್ನು ಸಂರಕ್ಷಿಸುವುದು ಕಾರ್ಯಾಗಾರದ ಪ್ರಮುಖ ಉದ್ದೇಶವಾಗಿದೆ ಎಂದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...
1003491208

ಅಕ್ರಮ ವಲಸಿಗರು, ಬಾಂಗ್ಲಾ ನುಸುಳುಕೋರರನ್ನು ಪತ್ತೆ ಹಚ್ಚುವ ಕೆಲಸಕ್ಕಾಗಿ ಎಸ್ಐಆರ್-ಪ್ರಕ್ರಿಯೆಯನ್ನು ಜಾರಿ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಆದರೆ, ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗ ಇದುವರೆಗೂ ಎಸ್ಐಆರ್-ಪ್ರಕ್ರಿಯೆ ಪೂರ್ಣಗೊಳಿಸಿರುವ ರಾಜ್ಯಗಳಲ್ಲಿ ಎಷ್ಟು-ಮಂದಿ ಅಕ್ರಮ ವಲಸಿಗರನ್ನು ಅಥವಾ ನುಸುಳುಕೋರರನ್ನು ಗುರ್ತಿಸಲಾಗಿದೆ ಎಂಬುದನ್ನು ಮೊದಲು ಸ್ಪಷ್ಟಪಡಿಸಬೇಕು. ಈ ಬಗ್ಗೆ ಯಾವುದೇ ಸ್ಪಷ್ಟ ವಿವರವನ್ನು ದೇಶದ ನಾಗರಿಕರ ಮುಂದೆ ಪ್ರಸ್ತುತಪಡಿಸದೆ (ಗಡಿ ರಾಜ್ಯಗಳನ್ನು ಹೊರತುಪಡಿಸಿ) ದೇಶದ ಉದ್ದಗಲಕ್ಕೂ ಈ ಎಸ್ಐಆರ್-ಜಾರಿ ಮಾಡಿರುವುದು ಎಷ್ಟು ಪ್ರಯೋಜನಕಾರಿ ಎಂಬುದರ ಬಗ್ಗೆ ಅನುಮಾನಗಳು ಮೂಡಿವೆ ಎಂದರು

1003491207

ಜಾಗೃತ ಕರ್ನಾಟಕದ ಆದಂ ಖಾನ್ ಎಸ್ಐಆರ್-ಪ್ರಕ್ರಿಯೆಯಲ್ಲಿ ಮತದಾರರು ವಹಿಸಬೇಕಾದ ಜಾಗ್ರತೆ ಮತ್ತು ಪಾಲಿಸಬೇಕಾದ ಕ್ರಮಗಳನ್ನು ಹಂತಹಂತವಾಗಿ ಪಿಪಿಟಿ-ಪ್ರಸೆಂಟೇಷನ್ ಜೊತೆ ವಾಲೆಂಟೀರ್ಸ್’ಗಳಿಗೆ ವಿವರಿಸಿದರು.

ಕಾರ್ಯಾಗಾರದಲ್ಲಿ, ಎಸ್ಐಆರ್-ಪ್ರಕ್ರಿಯೆಯನ್ನು ಅರ್ಥಮಾಡಿಕೊಳ್ಳಲು ಆಸಕ್ತರಿದ್ದ ನೂರಾರು ಮಂದಿ ನಾಗರಿಕರು ಪಾಲ್ಗೊಂಡಿದ್ದರು. 

ಇದೇ ಸಂದರ್ಭದಲ್ಲಿ ನೂರಾರು ಮಂದಿ ವಾಲೆಂಟೀರ್ಸ್’ಗಳ ಜೊತೆ ಜನಸ್ಪಂದನ ಟ್ರಸ್ಟ್ ಹಾಗೂ ಇತರೇ ಜನಪರ ಸಂಘಟನೆಗಳ ಶ್ರೀಕಾಂತ್ ಕೆಳಹಟ್ಟಿ, ತಾಸೀನ್ ಮೈಸೂರಿ, ಅಲ್ಲಾಬಕಾಶ್, ಸೈಯದ್ ಸಾದತ್, ಇಂದ್ರಮ್ಮ,ರಾಮಕೃಷೃಪ್ಪ, ರಾಜಮ್ಮ, ಮುಖಂಡ ನವೀನ್ ಸಾರ್ಥವಳ್ಳಿ, ಸಮೀ ಉಲ್ಲಾ,

ಮಾಜಿ ಗ್ರಾಪಂ ಅಧ್ಯಕ್ಷ ಉಮಾಮಹೇಶ್, ಶಫಿ ಉಲ್ಲಾ ಶರೀಫ್ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಧುಗಿರಿ | ಪರಂಪರೆ ಮತ್ತು ಐತಿಹಾಸಿಕ ಮಹತ್ವ ಅರಿಯುವುದು ಯುವಜನರ ಜವಾಬ್ದಾರಿ : ಡಾ. ಎಸ್.ವಿ. ವೆಂಕಟೇಶಯ್ಯ

ಐತಿಹಾಸಿಕ ಪರಂಪರೆ ನಮ್ಮ ಗತಕಾಲದ ಸಾಧನೆ, ಸಂಸ್ಕೃತಿ ಮತ್ತು ಅನನ್ಯತೆಯನ್ನು ಪ್ರತಿಬಿಂಬಿಸುವ...

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು : ಸಚಿವ ಎನ್. ಚಲುವರಾಯಸ್ವಾಮಿ

ಬರುವ ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ಯೋಜನೆಯ ನೀರು ಹರಿಸಲಾಗುವುದು ಎಂದು...

ಪಾವಗಡ | ರೈತನಿಗೆ ಬಾಂಬ್ ಬೆದರಿಕೆ; ಶಂಕಿತ ನಕ್ಸಲ್ ಬಂಧನ

ರೈತರ ಪಂಪ್‌ಸೆಟ್ ಬಳಿ ನಾಡಬಾಂಬ್ ಸ್ಫೋಟಿಸಿ ಹತ್ಯೆಗೆ ಯತ್ನಿಸಿದ ಆರೋಪ ಹಾಗೂ...

ತುಮಕೂರು| ಜಾತಿ, ಧರ್ಮದ ಭೇದವಿಲ್ಲದೆ ‘ಊರ ಹಬ್ಬ’ವಾಗಿ ತುಮಕೂರು ದಸರಾ : ಡಾ. ಜಿ. ಪರಮೇಶ್ವರ

ತುಮಕೂರು ಜಿಲ್ಲೆಯ ಸಂಸ್ಕೃತಿ, ಪರಂಪರೆ ಹಾಗೂ ಕಲೆಯನ್ನು ಅನಾವರಣಗೊಳಿಸುವ ‘ಊರ ಹಬ್ಬ’ವಾಗಿ...