ಬೆಂಗಳೂರಿನಿಂದ ಕುಣಿಗಲ್‌ಗೆ ಎಸಿ ಬಸ್ ಸೇವೆ : ಸಚಿವ ಬೈರತಿ ಸುರೇಶ್ ಹಸಿರು ನಿಶಾನೆ

Date:

 ರಾಜಧಾನಿ ಬೆಂಗಳೂರಿನಿಂದ ಜಿಲ್ಲೆಯ ಕುಣಿಗಲ್‌ಗೆ 8 ಬಿಎಂಟಿಸಿ ಹವಾನಿಯಂತ್ರಿತ (ಎಸಿ) ‘ವಜ್ರ’ ಬಸ್‌ಗಳ ಸಂಚಾರಕ್ಕೆ ಸಾರಿಗೆ ಸಚಿವ ಬೈರತಿ ಸುರೇಶ್ ಬುಧವಾರ ಹಸಿರು ನಿಶಾನೆ ತೋರಿದರು.

- Advertisement -

ಕುಣಿಗಲ್‌ನಲ್ಲಿ ಬಸ್ ಸಂಚಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನೂತನ ಸಾರಿಗೆ ಸಂಪರ್ಕದಿಂದ ಕುಣಿಗಲ್ ರಾಜಧಾನಿ ಬೆಂಗಳೂರಿಗೆ ಇನ್ನಷ್ಟು ಹತ್ತಿರವಾಗಲಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸಾಕ್ಷ್ಯ ಚಿತ್ರಗಳಿರದ ದೇಶವು ಚರಿತ್ರೆ ಇರದ ರಾಷ್ಟ್ರದಂತೆ ಎಂದಿದ್ದ...

ಚಿಲಿ ದೇಶದ ಜನರ ಸಾಮಾಜಿಕ ಬದುಕು ಹಾಗೂ ರಾಜಕೀಯ ಬೆಳವಣಿಗೆಗಳು ಹೆಣೆದುಕೊಂಡ ಘನವಾದ ಚರಿತ್ರೆಯ ಸಂಪುಟವಾಗಿ ಕಟ್ಟಿದ ಧೀಮಂತ ಸಿನೆಮಾ ಕಲಾವಿದ ಪ್ಯಾಟ್ರಿಷಿಯೊ ಗುಜ್ಮಾನ್, ಇತ್ತೀಚಿಗೆ ಇಲ್ಲವಾದರು. ಅವರ ಸೃಜನಶೀಲತೆ, ತುಡಿತ ಮತ್ತು...

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಕೇಂದ್ರ ಸರ್ಕಾರದಿಂದ 4,550 ಎಲೆಕ್ಟ್ರಿಕ್ ಬಸ್‌ಗಳನ್ನು ಬಿಎಂಟಿಸಿಗೆ ಪಡೆಯಲಾಗುತ್ತಿದ್ದು, ಮುಂದಿನ 4–5 ತಿಂಗಳಲ್ಲಿ ಈ ಬಸ್‌ಗಳು ಸಾರ್ವಜನಿಕ ಸೇವೆಗೆ ಲಭ್ಯವಾಗಲಿವೆ ಎಂದು ತಿಳಿಸಿದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ದೂರದೃಷ್ಟಿಯಿಂದಾಗಿ ಎಲೆಕ್ಟ್ರಿಕ್ ಬಸ್‌ಗಳನ್ನು ಪರಿಚಯಿಸಲಾಗುತ್ತಿದೆ. ಇದಕ್ಕಾಗಿ ರಾಜ್ಯ ಸರ್ಕಾರ ಸುಮಾರು ₹21 ಸಾವಿರ ಕೋಟಿ ವೆಚ್ಚ ಮಾಡಲಿದೆ ಎಂದು ಹೇಳಿದರು.

ಸರ್ಕಾರಿ ಸ್ವಾಮ್ಯದ ನಾಲ್ಕು ಸಾರಿಗೆ ನಿಗಮಗಳ ಬಸ್‌ಗಳಲ್ಲಿ ಶಕ್ತಿ ಯೋಜನೆಯಡಿ 2,64,73 ಲಕ್ಷ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದು, ಇದಕ್ಕಾಗಿ ರಾಜ್ಯ ಸರ್ಕಾರ ವಾರ್ಷಿಕ ₹10 ಸಾವಿರ ಕೋಟಿ ಭರಿಸುತ್ತಿದೆ ಎಂದು ತಿಳಿಸಿದರು.

ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲಿ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್ ನೀಡುವ ನಿರ್ಧಾರ ಕೈಗೊಂಡಿದ್ದರು. ಅದರಂತೆ ಸುಮಾರು 50 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್ ವಿತರಿಸಲಾಗುತ್ತಿದ್ದು, ಇದಕ್ಕಾಗಿ ಸರ್ಕಾರ ವಾರ್ಷಿಕ ₹350–400 ಕೋಟಿ ವೆಚ್ಚ ಮಾಡಲಿದೆ ಎಂದರು.

ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಜನಪರ ಕಾಳಜಿಯಿಂದ ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದರಿಂದ ಕೋಟ್ಯಂತರ ಜನರು ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ ಎಂದು ಹೇಳಿದರು.

ಬೆಂಗಳೂರು ನಗರ ಇನ್ನಷ್ಟು ವಿಸ್ತಾರವಾಗಬೇಕು ಎಂಬುದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ನಮ್ಮೆಲ್ಲರ ಆಶಯವಾಗಿದೆ. ಐಟಿ–ಬಿಟಿ ಸೇರಿದಂತೆ ವಿವಿಧ ಕೈಗಾರಿಕೆಗಳು ಹೆಚ್ಚಿನ ಸಂಖ್ಯೆಯಲ್ಲಿ ಸ್ಥಾಪನೆಯಾಗಬೇಕು. ಇದರಿಂದ ಉದ್ಯೋಗಾವಕಾಶಗಳು ಹೆಚ್ಚಲಿವೆ ಎಂದು ಸಚಿವರು ತಿಳಿಸಿದರು.

ರಾಜ್ಯ ಸರ್ಕಾರ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಮೂಲಕ ಕರ್ನಾಟಕವನ್ನು ದೇಶದ ನಂಬರ್‌ ಒನ್ ರಾಜ್ಯವನ್ನಾಗಿ ಮಾಡಲು ನಾವೆಲ್ಲರೂ ಪಣ ತೊಟ್ಟಿದ್ದೇವೆ ಎಂದು ಸಚಿವ ಬೈರತಿ ಸುರೇಶ್ ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಸಂಸದ ಹಾಗೂ ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್, ಶಾಸಕ ಡಾ. ರಂಗನಾಥ್ ಸೇರಿದಂತೆ ಅಧಿಕಾರಿಗಳು ಹಾಗೂ ವಿವಿಧ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಯಾರಿಗೆ?: ಹೈಕಮಾಂಡ್ ಮುಂದೆ ಬಣ, ಸಾಮಾಜಿಕ ಸಮೀಕರಣದ ಸವಾಲು

ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್‌ನ ಸಂಘಟನಾ ಭವಿಷ್ಯ, ಸಾಮಾಜಿಕ ಸಮೀಕರಣ, ಮಹಿಳಾ ಪ್ರಾತಿನಿಧ್ಯ...

ಸೋಲಿಡಾರಿಟಿ ಯೂತ್ ಮೂವ್ಮೆಂಟ್ ನಿಯೋಗದಿಂದ ಶಾಸಕ ಎನ್ ಎ ಹ್ಯಾರಿಸ್ ಭೇಟಿ: ಹಲವು ವಿಚಾರಗಳ ಬಗ್ಗೆ ಚರ್ಚೆ

ರಾಜ್ಯದಲ್ಲಿ ಯುವಜನರ ಸಮಸ್ಯೆಗಳಿಗೆ ಪರಿಣಾಮಕಾರಿ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ಯುವ...

ಬೆಂಗಳೂರು ವಿ.ವಿ ಯಡವಟ್ಟು: ರಾಮನಗರ ಸರ್ಕಾರಿ ಕಾಲೇಜಿನ 46 ಉತ್ತರ ಪತ್ರಿಕೆಗಳು ನಾಪತ್ತೆ

ಪರೀಕ್ಷೆ ಬರೆದು ಒಂದೂವರೆ ವರ್ಷ ಕಳೆದರೂ ಫಲಿತಾಂಶ ಬಾರದೆ ಕಾಯುತ್ತಿದ್ದ ವಿದ್ಯಾರ್ಥಿಗಳಿಗೆ...