ಗುಬ್ಬಿ | ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ರದ್ದತಿಗೆ ರೈತಸಂಘ ಒತ್ತಾಯ

Date:

 ಹೇಮಾವತಿ ನದಿ ತುಮಕೂರು ಜಿಲ್ಲೆಯ ರೈತರ ಬದುಕಿನ ಆಧಾರವಾಗಿದ್ದು, ಅದರ ನೀರನ್ನು ನಂಬಿಕೊಂಡು ಸಾವಿರಾರು ರೈತರು ಕೃಷಿ ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಹೇಮಾವತಿ ನೀರನ್ನು ಪೈಪ್‌ಲೈನ್ ಮೂಲಕ ಬೇರೆಡೆಗೆ ಹರಿಸುವ ಲಿಂಕ್ ಕೆನಾಲ್ ಕಾಮಗಾರಿ ಕೈಗೆತ್ತಿಕೊಂಡಿರುವುದು ಜಿಲ್ಲೆಯ ರೈತರಿಗೆ ಅನ್ಯಾಯವಾಗಲಿದೆ. ಕೂಡಲೇ ಕಾಮಗಾರಿ ಕೈಬಿಟ್ಟು ಜಿಲ್ಲೆಗೆ ಹೇಮಾವತಿ ನೀರು ಉಳಿಸಬೇಕು ಎಂದು ರೈತಸಂಘದ ಪದಾಧಿಕಾರಿಗಳು ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರನ್ನು ಒತ್ತಾಯಿಸಿದರು.

- Advertisement -

ಎತ್ತಿನಹೊಳೆ ಯೋಜನೆಯ ಕಾಮಗಾರಿ ವೀಕ್ಷಣೆಗೆ ಆಗಮಿಸಿದ್ದ ಸಚಿವರನ್ನು ಗುಬ್ಬಿ ತಾಲ್ಲೂಕಿನ ಗಡಿ ಭಾಗದಲ್ಲಿ ಭೇಟಿಯಾದ ರೈತಸಂಘದ ಜಿಲ್ಲಾಧ್ಯಕ್ಷ ಎ. ಗೋವಿಂದರಾಜು ನೇತೃತ್ವದ ನಿಯೋಗ ಮನವಿ ಸಲ್ಲಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಹೇಮಾವತಿ ಲಿಂಕ್ ಕೆನಾಲ್‌ಗೆ ಪೈಪ್‌ಲೈನ್ ಅಳವಡಿಸುವ ಪ್ರಸ್ತಾವನೆ ಅವೈಜ್ಞಾನಿಕವಾಗಿದ್ದು, ಇದರ ಬದಲಾಗಿ ಮುಖ್ಯ ನಾಲೆಯನ್ನು ಅಗಲೀಕರಣಗೊಳಿಸಿ ಕುಣಿಗಲ್ ಕೆರೆಗೆ ನೀರು ಹರಿಸುವ ವ್ಯವಸ್ಥೆ ಮಾಡಬೇಕು ಎಂದು ರೈತಸಂಘದ ಮುಖಂಡರು ಮನವಿ ಮಾಡಿದರು. ಕುಣಿಗಲ್ ಹೆಸರಿನಲ್ಲಿ ರಾಮನಗರ, ಮಾಗಡಿ ಹಾಗೂ ಬಿಡದಿ ಭಾಗಗಳಿಗೆ ನೀರು ಹರಿಸುವ ಯೋಜನೆಯಿಂದ ತುಮಕೂರು ಜಿಲ್ಲೆಯ ರೈತರಿಗೆ ಅನ್ಯಾಯವಾಗಲಿದೆ ಎಂದು ಅವರು ಸಚಿವರ ಗಮನಕ್ಕೆ ತಂದರು.

“ಕುಣಿಗಲ್ ತಾಲ್ಲೂಕಿನ ರೈತರಿಗೆ ನೀರು ನೀಡಬಾರದು ಎಂಬುದು ನಮ್ಮ ನಿಲುವಲ್ಲ. ಆದರೆ ಮುಖ್ಯ ನಾಲೆಯನ್ನು ಅಗಲೀಕರಣಗೊಳಿಸಿ ನೀರು ಹರಿಸುವ ವ್ಯವಸ್ಥೆ ಮಾಡಬೇಕು. ಹತ್ತು ಅಡಿ ವ್ಯಾಸದ ಬೃಹತ್ ಪೈಪ್‌ಲೈನ್ ಮೂಲಕ ಗುರುತ್ವಾಕರ್ಷಣೆಯ ಆಧಾರದ ಮೇಲೆ ನೀರು ಹರಿಸಿದರೆ, ತುಮಕೂರು ಜಿಲ್ಲೆಯ ರೈತರ ಹಿತಕ್ಕೆ ಧಕ್ಕೆಯಾಗಲಿದೆ. ಈಗಾಗಲೇ ಜಿಲ್ಲೆಯ ರೈತರು ನೀರಿನ ಸಮಸ್ಯೆ ಎದುರಿಸುತ್ತಿದ್ದು, ಅವರ ಹಿತ ಕಾಪಾಡುವುದು ಅಗತ್ಯ,” ಎಂದು ರೈತಸಂಘದ ಜಿಲ್ಲಾಧ್ಯಕ್ಷ ಎ. ಗೋವಿಂದರಾಜು ಹೇಳಿದರು.

“ಜಿಲ್ಲೆಗೆ ಹಂಚಿಕೆಯಾಗಿರುವ ಹೇಮಾವತಿ ನೀರಿನ ಪ್ರಮಾಣವೂ ಸಂಪೂರ್ಣವಾಗಿ ಜಿಲ್ಲೆಗೆ ಲಭ್ಯವಾಗುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಮತ್ತೊಂದು ಭಾಗಕ್ಕೆ ಇದೇ ನೀರನ್ನು ಪೈಪ್‌ಲೈನ್ ಮೂಲಕ ಹರಿಸುವುದು ಸರಿಯಲ್ಲ. ಜಿಲ್ಲೆಯ ಪಾಲಿನ ನೀರಿನ ಹಂಚಿಕೆಯನ್ನು ಹೆಚ್ಚಿಸಿ, ಮುಖ್ಯ ನಾಲೆಯ ಮೂಲಕವೇ ನೀರು ಹರಿಸುವ ವ್ಯವಸ್ಥೆ ಮಾಡಬೇಕು,” ಎಂದು ರೈತಸಂಘದ ತಾಲ್ಲೂಕು ಅಧ್ಯಕ್ಷ ಕೆ. ಎನ್. ವೆಂಕಟೇಗೌಡ ಒತ್ತಾಯಿಸಿದರು.

ರೈತಸಂಘದ ಮುಖಂಡರ ಮನವಿ ಆಲಿಸಿದ ಸಚಿವ ಎನ್. ಚಲುವರಾಯಸ್ವಾಮಿ, ಹೇಮಾವತಿ ಲಿಂಕ್ ಕೆನಾಲ್ ಕುರಿತು ಕುಣಿಗಲ್ ಹಾಗೂ ರಾಮನಗರ ಭಾಗದ ರೈತರು ಮತ್ತು ತುಮಕೂರು ಜಿಲ್ಲೆಯ ರೈತರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ಈ ಕುರಿತು ಮುಖ್ಯಮಂತ್ರಿಗಳೊಂದಿಗೆ ಮೊದಲು ಚರ್ಚಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಶಾಸಕ ಎಸ್. ಆರ್. ಶ್ರೀನಿವಾಸ್, ರೈತಸಂಘದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಲೋಕೇಶ್, ಗುರು ಚನ್ನಬಸಪ್ಪ, ಸತ್ತಿಗಪ್ಪ, ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಗ್ರಾಮೀಣ ಪ್ರದೇಶಗಳಲ್ಲಿ ನಿವೇಶನ ಹಂಚಿಕೆ ಪ್ರಕ್ರಿಯೆ ತ್ವರಿತಗೊಳಿಸಲು ಜಿಲ್ಲಾಧಿಕಾರಿ ಸೂಚನೆ

ಗ್ರಾಮೀಣ ಪ್ರದೇಶಗಳ ನಿವೇಶನ ರಹಿತ ಅರ್ಹ ಕುಟುಂಬಗಳಿಗೆ ನಿವೇಶನ ಹಂಚಿಕೆ ಪ್ರಕ್ರಿಯೆಯನ್ನು...

ಗುಬ್ಬಿ ಸಮೀಪ ಚಿರತೆ ಓಡಾಟ: ಆತಂಕದಲ್ಲಿ ನಾಗರಿಕರು

ಗುಬ್ಬಿ ಪಟ್ಟಣದ ಹೊರವಲಯದ ರಾಯವಾರ ಗ್ರಾಮದ ಮನೆಯೊಂದರ ಬಳಿ ಚಿರತೆ ಓಡಾಡಿರುವ...

ತುಮಕೂರು ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಯಾರಿಗೆ?: ಹೈಕಮಾಂಡ್ ಮುಂದೆ ಬಣ, ಸಾಮಾಜಿಕ ಸಮೀಕರಣದ ಸವಾಲು

ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್‌ನ ಸಂಘಟನಾ ಭವಿಷ್ಯ, ಸಾಮಾಜಿಕ ಸಮೀಕರಣ, ಮಹಿಳಾ ಪ್ರಾತಿನಿಧ್ಯ...

ಮಧುಗಿರಿ | ಪಿಎಚ್‌ಡಿ ಪದವಿ ಪಡೆದ ಕೃಷ್ಣಮೂರ್ತಿಗೆ ಅಭಿನಂದನೆ

ಮೈಸೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಹಾಗೂ ಮಂಡ್ಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶಿವಚಿತ್ತಪ್ಪ...