ತುಮಕೂರು | ಎಐ ಡೇಟಾ ಸೆಂಟರ್ ವಿರೋಧಿಸಿ ಆಗಸ್ಟ್ 6ರಿಂದ ಮೂರು ದಿನ ಸತ್ಯಾಗ್ರಹ: ಎ. ಗೋವಿಂದರಾಜು

Date:

ಎಐ (ಕೃತಕ ಬುದ್ಧಿಮತ್ತೆ) ಡೇಟಾ ಸೆಂಟರ್‌ಗಳ ಸ್ಥಾಪನೆಯಿಂದ ಯುವಜನರ ಉದ್ಯೋಗ, ಪರಿಸರ ಹಾಗೂ ಜಲಸಂಪನ್ಮೂಲಗಳ ಮೇಲೆ ಗಂಭೀರ ದುಷ್ಪರಿಣಾಮ ಉಂಟಾಗುವ ಸಾಧ್ಯತೆ ಇದೆ ಎಂದು ಆರೋಪಿಸಿ, ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಗಾಂಧಿ ಸಹಜ ಬೇಸಾಯ ಆಶ್ರಮದ ನೇತೃತ್ವದಲ್ಲಿ ವಿವಿಧ ರೈತಪರ ಸಂಘಟನೆಗಳ ಸಹಯೋಗದೊಂದಿಗೆ ಆಗಸ್ಟ್ 6, 7 ಮತ್ತು 8ರಂದು ದೊಡ್ಡ ಹೊಸೂರಿನಲ್ಲಿ ಮೂರು ದಿನಗಳ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಹಾಗೂ ತುಮಕೂರು ಜಿಲ್ಲಾಧ್ಯಕ್ಷ ಎ. ಗೋವಿಂದರಾಜು ತಿಳಿಸಿದರು.

- Advertisement -

ತುಮಕೂರು ನಗರದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಬಿಡದಿ ಸಮೀಪ ಸುಮಾರು 9,470 ಎಕರೆ ಪ್ರದೇಶದಲ್ಲಿ ಟೌನ್‌ಶಿಪ್ ಯೋಜನೆ ಜಾರಿಗೆ ತರುವ ಉದ್ದೇಶ ಹೊಂದಿದ್ದು, ಅದರ ಭಾಗವಾಗಿ ಆಟೋಮೇಷನ್ ಹಾಗೂ ಎಐ ಡೇಟಾ ಸೆಂಟರ್ ಸ್ಥಾಪಿಸಲು ಮುಂದಾಗಿದೆ. ಈ ಯೋಜನೆಗೆ ಹೇಮಾವತಿ ನಾಲಾ ವ್ಯವಸ್ಥೆಯಿಂದ ಸುಮಾರು 70 ಕಿ.ಮೀ. ಎಕ್ಸ್‌ಪ್ರೆಸ್ ಕೆನಾಲ್ ಮೂಲಕ ನೀರು ಒದಗಿಸುವ ಯೋಜನೆ ಇದೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಇದರಿಂದ ಜಿಲ್ಲೆಯ ನೀರಾವರಿ ಯೋಜನೆಗಳಿಗೆ ಧಕ್ಕೆಯಾಗುವ ಸಾಧ್ಯತೆ ಇದ್ದು, ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ಪೀಳಿಗೆಗೆ ಭೂಮಿ ಮತ್ತು ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಲಿದೆ. ಈ ಹಿನ್ನೆಲೆಯಲ್ಲಿ ದೊಡ್ಡ ಹೊಸೂರಿನ ಗಾಂಧಿ ಸಹಜ ಬೇಸಾಯ ಆಶ್ರಮದಲ್ಲಿ ಮೂರು ದಿನಗಳ ಸತ್ಯಾಗ್ರಹ ಆಯೋಜಿಸಲಾಗಿದೆ ಎಂದು ಹೇಳಿದರು.

ಆಗಸ್ಟ್ 6ರಂದು ಎಐ ಡೇಟಾ ಸೆಂಟರ್‌ಗಳ ಪರಿಣಾಮಗಳ ಕುರಿತು ಅಧ್ಯಯನ ನಡೆಸಿರುವ ಅಮೆರಿಕದ ಸಂಶೋಧಕರು ಸೇರಿದಂತೆ ವಿವಿಧ ತಜ್ಞರು ವಿಚಾರ ಮಂಡಿಸಲಿದ್ದಾರೆ. ಆಗಸ್ಟ್ 7ರಂದು ದೊಡ್ಡ ಹೊಸೂರು ಸಮೀಪದ ಹೊನ್ನುಡಿಕೆ ಹ್ಯಾಂಡ್‌ಪೋಸ್ಟ್‌ನಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಬೃಹತ್ ಪಾದಯಾತ್ರೆ ನಡೆಸಿ, ಎಐ ಡೇಟಾ ಸೆಂಟರ್‌ಗಳ ಸಾಧಕ-ಬಾಧಕಗಳ ಕುರಿತು ಸರ್ಕಾರದ ಗಮನ ಸೆಳೆಯಲಾಗುವುದು. ಆಗಸ್ಟ್ 8ರಂದು ಮುಂದಿನ ಹೋರಾಟದ ರೂಪುರೇಷೆಗಳ ಕುರಿತು ರೈತ ನಾಯಕರು, ಹೋರಾಟಗಾರರು ಹಾಗೂ ವಿದ್ಯಾರ್ಥಿ-ಯುವಜನರೊಂದಿಗೆ ಚರ್ಚೆ ನಡೆಯಲಿದೆ ಎಂದು ವಿವರಿಸಿದರು.

ಇದೇ ಸಂದರ್ಭದಲ್ಲಿ ಆಗಸ್ಟ್ 10ರಂದು ಕ್ವಿಟ್ ಇಂಡಿಯಾ ಚಳವಳಿಯ ಅಂಗವಾಗಿ ಕಿಸಾನ್ ಸಂಯುಕ್ತ ಹೋರಾಟ, ಜೆಸಿಟಿಯು ಹಾಗೂ ಇತರ ಸಂಘಟನೆಗಳ ಸಹಯೋಗದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ವಿರುದ್ಧ “ಜೈಲ್ ಭರೋ” ಚಳವಳಿಯನ್ನೂ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಕೃಷಿ ವಿಜ್ಞಾನಿ ಹಾಗೂ ಗಾಂಧಿ ಸಹಜ ಬೇಸಾಯ ಆಶ್ರಮದ ಮುಖ್ಯಸ್ಥ ಡಾ. ಮಂಜುನಾಥ್ ಮಾತನಾಡಿ, ಎಐ ಮತ್ತು ಆಟೋಮೇಷನ್ ತಂತ್ರಜ್ಞಾನಗಳ ಪರಿಣಾಮವಾಗಿ ಉದ್ಯೋಗಾವಕಾಶಗಳು ಕುಂಠಿತವಾಗಲಿದ್ದು, ವಿಶೇಷವಾಗಿ ಟೆಕ್ಸ್ಟೈಲ್ ಕ್ಷೇತ್ರದಲ್ಲಿ ಲಕ್ಷಾಂತರ ಮಹಿಳಾ ಕಾರ್ಮಿಕರು ಉದ್ಯೋಗ ಕಳೆದುಕೊಳ್ಳುವ ಅಪಾಯವಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಉದ್ಯೋಗ ಕಡಿಮೆಯಾದರೆ ಜನರ ಖರೀದಿ ಸಾಮರ್ಥ್ಯ ಕುಸಿದು, ಮಾರುಕಟ್ಟೆ ಹಾಗೂ ದೇಶದ ಆರ್ಥಿಕತೆಯ ಮೇಲೂ ಪರಿಣಾಮ ಬೀಳಲಿದೆ. ಬಡತನ ನಿರ್ಮೂಲನೆಯ ಬದಲಿಗೆ ಬಡವರನ್ನೇ ನಿರ್ಮೂಲನೆ ಮಾಡುವ ಪರಿಸ್ಥಿತಿ ನಿರ್ಮಾಣವಾಗುವ ಅಪಾಯವಿದೆ ಎಂದು ಹೇಳಿದರು.

ಒಂದು ಗಿಗಾವಾಟ್ ಸಾಮರ್ಥ್ಯದ ಎಐ ಡೇಟಾ ಸೆಂಟರ್‌ಗೆ ವರ್ಷಕ್ಕೆ ಸುಮಾರು 4 ಟಿಎಂಸಿ ನೀರು ಅಗತ್ಯವಿದ್ದು, ಇದರಿಂದ ನೀರಿನ ಬಿಕ್ಕಟ್ಟು ಉಂಟಾಗಬಹುದು. ಜೊತೆಗೆ ರಸ್ತೆ, ವಿಮಾನ ನಿಲ್ದಾಣ ಹಾಗೂ ಇತರೆ ಮೂಲಸೌಕರ್ಯಗಳ ನಿರ್ಮಾಣಕ್ಕಾಗಿ ಕೃಷಿಭೂಮಿ ಕಳೆದುಕೊಳ್ಳುವ ಪರಿಸ್ಥಿತಿಯೂ ಎದುರಾಗಬಹುದು ಎಂದು ಅಭಿಪ್ರಾಯಪಟ್ಟರು.

ಮೂರು ದಿನಗಳ ಸತ್ಯಾಗ್ರಹದಲ್ಲಿ ತಜ್ಞರ ಉಪನ್ಯಾಸ, ಸಂವಾದ, ಪಾದಯಾತ್ರೆ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆಯಲಿದ್ದು, ಸುಮಾರು 2,500 ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಹೇಳಿದರು.

ಅಮೆರಿಕದ ಸಂಶೋಧಕ ರೇಮೋಲ್, ದೇವಜೈನ್ ಹಾಗೂ ಶಾಸಕ ದರ್ಶನ ಪುಟ್ಟಣ್ಣಯ್ಯ ಎಐ ಡೇಟಾ ಸೆಂಟರ್‌ಗಳ ಕುರಿತು ವಿಚಾರ ಮಂಡಿಸಲಿದ್ದಾರೆ. ಪರಿಸರವಾದಿ ಸುರೇಶ್ ಹೆಬ್ಳಿಕರ್, ಬಡಗಲಪುರ ನಾಗೇಂದ್ರಪ್ಪ, ಮಹಿಮಾ ಜೆ. ಪಟೇಲ್ ಸೇರಿದಂತೆ ಹಲವು ತಜ್ಞರು ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಯುಕ್ತ ಹೋರಾಟದ ಸಿ. ಯತಿರಾಜು ಮಾತನಾಡಿದರು. ರೈತ ಸಂಘದ ಮುಖಂಡರಾದ ಜಿ.ಎಸ್. ಶಂಕರಪ್ಪ, ನಾಗರತ್ನಮ್ಮ, ಚಿಕ್ಕಬೋರೇಗೌಡ, ವೆಂಕಟಪ್ಪಗೌಡ, ಕೆಂಚಪ್ಪ, ಲಕ್ಷ್ಮಣಗೌಡ, ಅರೇಹಳ್ಳಿ ಮಂಜುನಾಥ್, ಮೋಹನ್, ರಂಗಮುದ್ದಯ್ಯ, ಜಿ.ಜೆ. ಲೋಕೇಶ್, ಲಿಂಗರಾಜು ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ವಲಯ ಅರಣ್ಯಾಧಿಕಾರಿ

ಗುತ್ತಿಗೆದಾರರಿಂದ ಲಂಚದ ಹಣ ಪಡೆಯುತ್ತಿದ್ದ ಆರೋಪದ ಮೇರೆಗೆ ಗುಬ್ಬಿ ವಲಯ ಅರಣ್ಯಾಧಿಕಾರಿ...

ತುಮಕೂರು | ಉದ್ಯಮದ ಅಗತ್ಯಕ್ಕೆ ತಕ್ಕಂತೆ ಕೌಶಲ್ಯ ಬೆಳೆಸಿಕೊಳ್ಳಿ: ಡಾ. ಜಿ. ಪರಮೇಶ್ವರ

ಬದಲಾಗುತ್ತಿರುವ ತಂತ್ರಜ್ಞಾನ, ವಿಶೇಷವಾಗಿ ಕೃತಕ ಬುದ್ಧಿಮತ್ತೆ (AI) ಕುರಿತು ವಿದ್ಯಾರ್ಥಿಗಳು ನಿರಂತರವಾಗಿ...

ಗುಬ್ಬಿ | ಅಂಬೇಡ್ಕರ್, ಬುದ್ಧ, ಬಸವಣ್ಣ ಅವಹೇಳನ ಖಂಡಿಸಿ ದಸಂಸ ಪ್ರತಿಭಟನೆ

ಮಾಜಿಕ ಜಾಲತಾಣದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್, ಬುದ್ಧ ಹಾಗೂ...

ತುಮಕೂರು | 50 ಸಾವಿರ ಯುವಜನರಿಗೆ ಸಿಪಿಆರ್ ತರಬೇತಿ : ‘ಹಾರ್ಟ್ ಸೇಫ್ ತುಮಕೂರು’ ಅಭಿಯಾನಕ್ಕೆ ಡಿಸಿಎಂ ಚಾಲನೆ

ಹಠಾತ್ ಹೃದಯಾಘಾತ ಸಂಭವಿಸಿದ ಸಂದರ್ಭದಲ್ಲಿ ಆಸ್ಪತ್ರೆಗೆ ತಲುಪುವ ಮುನ್ನ ನೀಡುವ ಸಿಪಿಆರ್...