ತುಮಕೂರು | ಜನ ಚಳುವಳಿಗಳ ಅನ್ನದಾತೆ ಉಮಕ್ಕಾ ನಿಧನ

Date:

ವಿದ್ಯಾರ್ಥಿ, ಯುವಜನ ಹಾಗೂ ಜನವಿಜ್ಞಾನ ಚಳುವಳಿಗಳ ಕಾರ್ಯಕರ್ತರಿಗೆ ತಾಯಿಯಂತೆ ಆಸರೆಯಾಗಿದ್ದ, ಎಲ್ಲರ ಪ್ರೀತಿಯ ‘ಉಮಕ್ಕಾ’ ಎಂದೇ ಪರಿಚಿತರಾಗಿದ್ದ ಸಿ. ಉಮಾ ಅವರು ಭಾನುವಾರ ಸಂಜೆ 5.30ಕ್ಕೆ ನಿಧನರಾಗಿದ್ದಾರೆ.   ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

- Advertisement -

ಹಿರಿಯ ಹೋರಾಟಗಾರ ಸಿ. ಯತಿರಾಜು ಅವರ ಪತ್ನಿಯಾಗಿದ್ದ ಉಮಾ ಅವರು, ಹಿರಿಯ ಸಾಹಿತಿ ವಿ. ಚಿಕ್ಕವೀರಯ್ಯ ಅವರ ಪುತ್ರಿಯಾಗಿದ್ದರು. 1990ರ ದಶಕದಲ್ಲಿ ವಿದ್ಯಾರ್ಥಿ ಚಳುವಳಿ, ಯುವಜನ ಚಳುವಳಿ ಹಾಗೂ ಜನವಿಜ್ಞಾನ ಚಳುವಳಿಗಳ ಕಾರ್ಯಕರ್ತರು ಹೋರಾಟ, ಸಭೆ ಹಾಗೂ ಸಂಘಟನಾ ಕಾರ್ಯಗಳಲ್ಲಿ ನಿರತರಾಗಿದ್ದ ಸಂದರ್ಭಗಳಲ್ಲಿ ಯಾವುದೇ ಬೇಸರವಿಲ್ಲದೆ ಆತ್ಮೀಯವಾಗಿ ಅನ್ನ ನೀಡಿ, ಅವರಿಗೆ ತಾಯಿಯಂತೆಯೇ ಕಾಳಜಿ ವಹಿಸುತ್ತಿದ್ದರು. ಈ ಕಾರಣದಿಂದಲೇ ಚಳುವಳಿಗಳ ಕಾರ್ಯಕರ್ತರ ನಡುವೆ ಅವರು “ಜನ ಚಳುವಳಿಗಳ ಅನ್ನದಾತೆ” ಎಂಬ ಗೌರವಕ್ಕೆ ಪಾತ್ರರಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಅವರ ಸರಳತೆ, ಆತಿಥ್ಯ, ಮಾನವೀಯತೆ ಮತ್ತು ಚಳುವಳಿಗಳ ಬಗ್ಗೆ ಹೊಂದಿದ್ದ ಬದ್ಧತೆ ಅನೇಕ ಕಾರ್ಯಕರ್ತರ ಮನಸ್ಸಿನಲ್ಲಿ ಅಳಿಸಲಾಗದ ನೆನಪುಗಳಾಗಿ ಉಳಿದಿವೆ. ಅವರ ನಿಧನದ ಸುದ್ದಿ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಪ್ರಗತಿಪರ ವಲಯದಲ್ಲಿ ತೀವ್ರ ದುಃಖವನ್ನುಂಟು ಮಾಡಿದೆ.

ಮೃತರ ಅಂತ್ಯಕ್ರಿಯೆಯು ಆಗಸ್ಟ್ 3, 2026 (ಸೋಮವಾರ) ಬೆಳಿಗ್ಗೆ 10 ಗಂಟೆಗೆ, ತುಮಕೂರಿನ ಶ್ರೀದೇವಿ ಆಸ್ಪತ್ರೆ ಸಮೀಪದ ಲಿಂಗಾಪುರದಲ್ಲಿರುವ ಪ್ಯಾಲಿಯೇಟಿವ್ ಕೇಂದ್ರ (ರಿಮ್ಸ್ ಆಸ್ಪತ್ರೆ ಪಕ್ಕ) ಸಮೀಪದ ಅವರ ಜಮೀನಿನಲ್ಲಿ ನಡೆಯಲಿದೆ.

ಕುಟುಂಬಸ್ಥರು, ಬಂಧು-ಬಳಗ, ಹೋರಾಟಗಾರರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಅಂತಿಮ ದರ್ಶನ ಪಡೆದು ಗೌರವ ನಮನ ಸಲ್ಲಿಸಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಯಾರಿಗೆ?: ಹೈಕಮಾಂಡ್ ಮುಂದೆ ಬಣ, ಸಾಮಾಜಿಕ ಸಮೀಕರಣದ ಸವಾಲು

ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್‌ನ ಸಂಘಟನಾ ಭವಿಷ್ಯ, ಸಾಮಾಜಿಕ ಸಮೀಕರಣ, ಮಹಿಳಾ ಪ್ರಾತಿನಿಧ್ಯ...

ತುಮಕೂರು ದಸರಾ ಮೆರುಗು ಹೆಚ್ಚಿಸಲು ಸಂಗೀತ ಕಾರಂಜಿ, ತುಮಕೂರು ಸ್ಕ್ವೇರ್ : ಡಾ.ಜಿ. ಪರಮೇಶ್ವರ

ತುಮಕೂರು ದಸರಾ ಹಬ್ಬದ ಪೂರ್ವ ತಯಾರಿಯಾಗಿ ನಗರದ ಅಮಾನಿಕೆರೆಯಲ್ಲಿ ನವೀನ ರೀತಿಯ...

ಗುಬ್ಬಿ | ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ವಲಯ ಅರಣ್ಯಾಧಿಕಾರಿ

ಗುತ್ತಿಗೆದಾರರಿಂದ ಲಂಚದ ಹಣ ಪಡೆಯುತ್ತಿದ್ದ ಆರೋಪದ ಮೇರೆಗೆ ಗುಬ್ಬಿ ವಲಯ ಅರಣ್ಯಾಧಿಕಾರಿ...