ತುಮಕೂರು | ಶೂಟಿಂಗ್ ರೇಂಜ್, ಬ್ಯಾಸ್ಕೆಟ್ ಬಾಲ್ ಅಂಕಣಗಳ ಲೋಕಾರ್ಪಣೆ

Date:

ತುಮಕೂರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶೂಟಿಂಗ್ ರೇಂಜ್, ಟೆನಿಸ್, ಬ್ಯಾಸ್ಕೆಟ್ ಬಾಲ್ ಅಂಕಣಗಳು ಹಾಗೂ ಅಮಾನಿಕೆರೆಯಲ್ಲಿ ಕಯಾಕಿಂಗ್ ಮತ್ತು ಕೆನೋಯಿಂಗ್ ಜಲಕ್ರೀಡಾ ಕೇಂದ್ರಗಳನ್ನು ಭಾನುವಾರ ಲೋಕಾರ್ಪಣೆ ಮಾಡಲಾಯಿತು.

- Advertisement -

ಜಿಲ್ಲಾಡಳಿತ, ಪಂಚಾಯತ್, ಯುವ ಸಬಲೀಕರಣ‌ ಮತ್ತು  ಕ್ರೀಡಾ ಇಲಾಖೆ, ತುಮಕೂರು ಮಹಾನಗರ ಪಾಲಿಕೆ, ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಆಯೋಜಿಸಿದ್ದ ಈ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ ಉದ್ಘಾಟಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ನಂತರ ಮಾತನಾಡಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ತುಮಕೂರಿನ ಯುವ ಸಮುದಾಯ ಹಾಗೂ ಕ್ರೀಡಾಸಕ್ತರಿಗೆ ಉತ್ತಮ ಸೌಲಭ್ಯಗಳಿರುವ ಕ್ರೀಡಾಂಗಣಗಳ ಅವಶ್ಯ ಇತ್ತು. ಈ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಉತ್ತಮ ಗುಣಮಟ್ಟದ ಸೌಲಭ್ಯಗಳಿರುವ ಶೂಟಿಂಗ್ ರೇಂಜ್, ಬ್ಯಾಸ್ಕೆಟ್ ಬಾಲ್ ಅಂಕಣ, ಟೆನ್ನಿಸ್ ಅಂಕಣಗಳನ್ನು ನುರಿತ ಕ್ರೀಡಾ ತಜ್ಞರ ಮಾರ್ಗದರ್ಶನದಲ್ಲಿ ನಿರ್ಮಿಸಲಾಗಿದೆ ಎಂದರು.

1002984734

ಅಲ್ಲದೆ ಜಿಲ್ಲಾ ಕೇಂದ್ರದ ಹೃದಯಭಾಗದಲ್ಲಿ ಇಷ್ಟು ವಿಶಾಲವಾದ ಸುಂದರ ಕೆರೆ ಎಲ್ಲ ಜಿಲ್ಲೆಗಳಲ್ಲಿ ಇಲ್ಲ. ಇರುವ ಅವಕಾಶಗಳನ್ನು ಇಲ್ಲಿ ಬಳಸಿಕೊಂಡ ಜಲಕ್ರೀಡಾ ಸ್ಪರ್ಧಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಯಾಕಿಂಗ್ ಮತ್ತು ಕೆನೋಯಿಂಗ್ ತರಬೇತಿ ಕೇಂದ್ರ ಆರಂಭಿಸಲಾಗಿದೆ ಎಂದರು.

 ಬೇಸಿಗೆ ರಜೆಗಳನ್ಮು ವ್ಯರ್ಥವಾಗಿ ಕಳೆಯದೆ ನಮ್ಮ ಜಿಲ್ಲೆಯ ಮಕ್ಕಳು ಅರ್ಥಪೂರ್ಣವಾಗಿ ಕಳೆಯಬೇಕು. ಪೋಷಕರು ಇದರ ಸದುಪಯೋಗಪಡೆದುಕೊಳ್ಳಬೇಕು ಎಂದರು.

ತುಮಕೂರು ಇತ್ತೀಚಿನ ದಿನಗಳಲ್ಲಿ ಕ್ರೀಡಾ ಹಬ್ ಆಗಿದೆ. ಈಗಾಗಲೇ ಜಿಲ್ಲಾ ಕ್ರೀಡಾ ಹಾಸ್ಟೆಲ್ ಇದ್ದು ಮತ್ತೊಂದು ಕ್ರೀಡಾ ಹಾಸ್ಟೆಲ್ ಸ್ಥಾಪನೆಗೆ ಚಿಂತನೆ ಇದೆ ಎಂದರು.

ತುಮಕೂರು ಜಿಲ್ಲಾದ್ಯಂತ ವಿವಿಧ ತಾಲೂಕುಗಳಲ್ಲಿ ನಡೆಯುತ್ತಿರುವ ಜನಸಂಪರ್ಕ ಸಭೆ ಯಶಸ್ವಿಯಾಗುತ್ತಿದೆ. ಗುಬ್ಬಿ, ಶಿರಾ, ಕೊರಟಗೆರೆ ತಾಲೂಕುಗಳಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದರು.

ಮುಂದಿನ ದಿನಗಳಲ್ಲಿ ಇದನ್ನು ಆಧಾರ್ ಅದಾಲತ್ ರೀತಿಯಲ್ಲಿ ನಿರಂತರವಾಗಿ ಹಮ್ಮಿಕೊಳ್ಳಲು ಚಿಂತನೆ ಇದೆ. ಪೌತಿ ಖಾತೆ ಆಂದೋಲನ ಕೂಡ ಹಮ್ಮಿಕೊಳ್ಳಲಾಗುವುದು. ಈ ವಾರದಲ್ಲಿ 10 ಸಾವಿರ ಆನ್ ಲೈನ್ ನಲ್ಲಿ ಪೌತಿ ಖಾತೆ ಮಾಡಿದ್ದೇವೆ. ಜನಸಂಪರ್ಕ ಸಭೆಯಲ್ಲಿ ಸ್ಥಳದಲ್ಲೇ ಕೆಲವು ಪರಿಹಾರಗಳು ಆಗಿವೆ ಎಂದರು.

ಉದ್ಘಾಟನಾ ಸಮಾರಂಭದಲ್ಲಿ ಶಾಸಕ ಜಿ.ಬಿ.ಜ್ಯೋತಿಗಣೇಶ್, ಬಿಎಂಟಿಸಿ ನಿಗಮದ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ವಿ.ಅಶ್ವಿಜ, ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ಎ.ಅಶೋಕ್, ತುಮಕೂರು ಮಹಾನಗರ ಪಾಲಿಕೆ ಆಯುಕ್ತೆ ಶೋಭ ಸಿ., ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಉಮೇಶ್ ಚಂದ್ರ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ವಲಯ ಅರಣ್ಯಾಧಿಕಾರಿ

ಗುತ್ತಿಗೆದಾರರಿಂದ ಲಂಚದ ಹಣ ಪಡೆಯುತ್ತಿದ್ದ ಆರೋಪದ ಮೇರೆಗೆ ಗುಬ್ಬಿ ವಲಯ ಅರಣ್ಯಾಧಿಕಾರಿ...

ತುಮಕೂರು | ಉದ್ಯಮದ ಅಗತ್ಯಕ್ಕೆ ತಕ್ಕಂತೆ ಕೌಶಲ್ಯ ಬೆಳೆಸಿಕೊಳ್ಳಿ: ಡಾ. ಜಿ. ಪರಮೇಶ್ವರ

ಬದಲಾಗುತ್ತಿರುವ ತಂತ್ರಜ್ಞಾನ, ವಿಶೇಷವಾಗಿ ಕೃತಕ ಬುದ್ಧಿಮತ್ತೆ (AI) ಕುರಿತು ವಿದ್ಯಾರ್ಥಿಗಳು ನಿರಂತರವಾಗಿ...

ಗುಬ್ಬಿ | ಅಂಬೇಡ್ಕರ್, ಬುದ್ಧ, ಬಸವಣ್ಣ ಅವಹೇಳನ ಖಂಡಿಸಿ ದಸಂಸ ಪ್ರತಿಭಟನೆ

ಮಾಜಿಕ ಜಾಲತಾಣದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್, ಬುದ್ಧ ಹಾಗೂ...

ತುಮಕೂರು | 50 ಸಾವಿರ ಯುವಜನರಿಗೆ ಸಿಪಿಆರ್ ತರಬೇತಿ : ‘ಹಾರ್ಟ್ ಸೇಫ್ ತುಮಕೂರು’ ಅಭಿಯಾನಕ್ಕೆ ಡಿಸಿಎಂ ಚಾಲನೆ

ಹಠಾತ್ ಹೃದಯಾಘಾತ ಸಂಭವಿಸಿದ ಸಂದರ್ಭದಲ್ಲಿ ಆಸ್ಪತ್ರೆಗೆ ತಲುಪುವ ಮುನ್ನ ನೀಡುವ ಸಿಪಿಆರ್...