ತುಮಕೂರು | ಆಧುನಿಕ ಗೋಡ್ಸೆಗಳಿಂದ ಗಾಂಧಿ ವಿಚಾರ ಹತ್ಯೆ : ಕೆ. ದೊರೆರಾಜ್

Date:

ಗಾಂಧಿ ಹುತ್ಮಾತ ದಿನಾಚರಣೆ ಕೇವಲ ದಿನಾಚರಣೆಯಲ್ಲ ಒಂದು ಎಚ್ಚರದ ದಿನ ಗಾಂಧಿ ಒಬ್ಬ ವ್ಯಕ್ತಿಯಲ್ಲ, ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದ ಇಡೀ ಜಗತ್ತಿನ ಆಸ್ತಿ ಮಹಾತ್ಮ ಗಾಂಧೀಜಿ ಎಂದು ಚಿಂತಕ ಪ್ರೊ. ಕೆ.ದೊರೆರಾಜ್ ಅಭಿಪ್ರಾಯಪಟ್ಟರು

- Advertisement -

ತುಮಕೂರು ನಗರದ ಸ್ವಾತಂತ್ರ್ಯ ಚೌಕದಲ್ಲಿ ಸೌಹಾರ್ದ ಕರ್ನಾಟಕ, ಸೌಹಾರ್ದ ತುಮಕೂರು ಹಮ್ಮಿಕೊಂಡಿದ್ದ ಪ್ರತಿಜ್ಞಾ ವಿಧಿ ಭೋದನೆ ಹಾಗೂ ಮಹಾತ್ಮ ಹುತಾತ್ಮ ದಿನಾಚರಣೆಯಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಾಣತ್ಯಾಗ ಮಾಡಿದ ಹುತಾತ್ಮರಿಗೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಅಹಿಂಸೆ, ಸಮಾನತೆ, ಶಾಂತಿ ಹಾಗೂ ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದ ವ್ಯಕ್ತಿಯನ್ನು ಒಬ್ಬ ಹಂತಕ ಹತ್ಯೆ ಮಾಡುತ್ತಾನೆ ಎಂದರೆ ಅದು ಒಬ್ಬ ವ್ಯಕ್ತಿಯ ಹತ್ಯೆಯಲ್ಲ ಮೌಲ್ಯಗಳ ವಿರುದ್ಧ ಇದ್ದ ದ್ವೇಷ. ಎಂದರು.

ಮಾನವೀಯ ಮೌಲ್ಯಗಳು, ಸತ್ಯ, ಅಹಿಂಸೆ, ಸಮಾನತೆಯ ಪರವಿದ್ದ ವ್ಯಕ್ತಿಯನ್ನು ಅಸಮಾನತೆ, ಕೋಮುವಾದದಿಂದ ಹಿಂಸೆಯ ಜಗತ್ತನ್ನು ಸೃಷ್ಠಿಮಾಡುವ ವಿಚಾರವನ್ನು ಹೊಂದಿರುವ ಗೂಡ್ಸೆ ಎಂಬ ವ್ಯಕ್ತಿ ಗುಂಡು ಹಾರಿಸಿ ಕೊಲ್ಲುತ್ತಾನೆ ಆದರೆ ಇಂದು ಆಧುನಿಕ ಗೂಡ್ಸೆಗಳು ಸುಳ್ಳುಗಳನ್ನು ಹರಡುವ ಮೂಲಕ ಗಾಂಧಿಯೇ ಸುಳ್ಳು ಎಂಬ ವಿಚಾರಗಳನ್ನು ಜನರಲ್ಲಿ ಬಿತ್ತಿ ಗಾಂಧಿಯ ವಿಚಾರಗಳನ್ನು ಮರೆಮಾಚುವ ಕೆಲಸವನ್ನು ಮಾಡುತ್ತಿರುವುದು ಎಲ್ಲರಿಗೂ ಎಚ್ಚರಿಕೆಯ ದಿನ ಎಂದು ತಿಳಿಸಿದರು.

ಪರಿಸರವಾದಿ ಸಿ. ಯತಿರಾಜು ಮಾತನಾಡಿ ದೇಶ ಹೊಸಹತುಶಾಹಿ ನೀತಿಗಳಿಗೆ ಬಲಿಯಾಗುತ್ತಿದ್ದು, ಗಾಂಧಿಯನ್ನು ಕೊಂದವರು ಇಂದು ಸಂವಿಧಾನವನ್ನು ಕೊಲ್ಲಲು ಮುಂದಾಗಿದ್ದಾರೆ. ಅಲ್ಲದೆ ಸಂವಿಧಾನದ ಆಶಯಗಳಿಗೆ ಗುಂಡು ಹೊಡೆಯುವ ಕೆಲಸ ನಿರಂತರವಾಗಿ ನಡೆಯುತ್ತಿದ್ದು, ಗೂಡ್ಸೆಗಾಗಿ ದೇವಸ್ಥಾನ ಕಟ್ಟುವವರು 6 ಬಾರಿ ಗಾಂಧಿಯನ್ನು ಕೊಲ್ಲಲು ಪ್ರಯತ್ನಿಸಿದ್ದರು, ಹೀಗಾಗಿ ಮಹಾತ್ಮ ಗಾಂಧಿಯ ವಿಚಾರವನ್ನು ಉಳಿಸುವ ಪ್ರಸ್ತುತತೆ ಹೆಚ್ಚು ಇದೆ ಎಂದರು.

ಸ್ಲಂ ಜನಾದೋಲನದ ಅಧ್ಯಕ್ಷ ಎ. ನರಸಿಂಹಮೂರ್ತಿ ಮಾತನಾಡಿ ದೇಶದ ಸ್ವಾತಂತ್ರ್ಯ ಚಳುವಳಿಗೆ ಹೋರಾಡಿದ ಗಾಂಧಿ ಸ್ವದೇಶಿ ವಸ್ತುಗಳನ್ನು ಬಳಸಬೇಕು ಎಂದು ಸ್ವದೇಶಿ ಚಳುವಳಿಯನ್ನು ನಡೆಸಿದರು ಆದರೆ ಕೇಂದ್ರ ಸರ್ಕಾರ ಗಾಂಧಿಯವರ ಆಶಯಗಳನ್ನು ಮೂಲೆಗುಂಪು ಮಾಡುತ್ತಿದೆ ಎಂದರು.

ಸಿಐಟಿಯು ಜಿಲ್ಲಾಧ್ಯಕ್ಷ ಸೈಯದ್‌ಮುಜೀಬ್ ಮಾತನಾಡಿ ಅಸಹಿಷ್ಣುತೆ, ಅಶಾಂತಿ ಹೆಚ್ಚುತ್ತಿದ್ದು, ಮಾನವೀಯತೆ, ಅಹಿಂಸೆ, ಶಾಂತಿಯ ಸಂಕೇತವಾದ ಗಾಂಧಿಯವರ ವಿಚಾರಧಾರೆಗಳನ್ನು ಯುವಕರು ಹೆಚ್ಚು ಹೆಚ್ಚು ಪಾಲಿಸಬೇಕಾಗಿದೆ ಎಂದರು

ಸಭೆಯಲ್ಲಿ ಪಂಡಿತ್ ಜವಹರ್, ತಾಜುದ್ದೀನ್ ಷರೀಫ್ ಮಾತನಾಡಿದರು, ಚಂದ್ರ, ಅರುಣ್ ಸೌಹಾರ್ದ ಗೀತೆಗಳನ್ನು ಹಾಡಿದರು, ಜನವಾದಿ ಮಹಿಳಾ ಸಂಘಟನೆಯ ಕಲ್ಪನಾ ಪ್ರತಿಜ್ಞಾ ವಿಧಿ ಭೋದಿಸಿದರು. ಕಾರ್ಯಕ್ರಮದಲ್ಲಿ ಎನ್.ಕೆ ಸುಬ್ರಮಣ್ಯ, ಟಿ.ಜಿ.ಶಿವಲಿಂಗಯ್ಯ, ಅಶ್ವಥ್ ನಾರಾಯಣ್ ಗುಟ್ಟೆ, ಹೆಚ್ ಗೋವಿಂದಯ್ಯ, ಚಂದ್ರಪ್ಪ, ಇಂತಿಯಾಜ್ ಭಾಗಿಯಾದರು. ಕಾರ್ಯಕ್ರಮವನ್ನು ಚಂದ್ರು ನಿರೂಪಿಸಿ, ರಾಘವೇಂದ್ರ ಸ್ವಾಗತಿಸಿ, ಅರುಣ್ ವಂದಿಸಿದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಯಾರಿಗೆ?: ಹೈಕಮಾಂಡ್ ಮುಂದೆ ಬಣ, ಸಾಮಾಜಿಕ ಸಮೀಕರಣದ ಸವಾಲು

ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್‌ನ ಸಂಘಟನಾ ಭವಿಷ್ಯ, ಸಾಮಾಜಿಕ ಸಮೀಕರಣ, ಮಹಿಳಾ ಪ್ರಾತಿನಿಧ್ಯ...

ತುಮಕೂರು ದಸರಾ ಮೆರುಗು ಹೆಚ್ಚಿಸಲು ಸಂಗೀತ ಕಾರಂಜಿ, ತುಮಕೂರು ಸ್ಕ್ವೇರ್ : ಡಾ.ಜಿ. ಪರಮೇಶ್ವರ

ತುಮಕೂರು ದಸರಾ ಹಬ್ಬದ ಪೂರ್ವ ತಯಾರಿಯಾಗಿ ನಗರದ ಅಮಾನಿಕೆರೆಯಲ್ಲಿ ನವೀನ ರೀತಿಯ...

ಗುಬ್ಬಿ | ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ವಲಯ ಅರಣ್ಯಾಧಿಕಾರಿ

ಗುತ್ತಿಗೆದಾರರಿಂದ ಲಂಚದ ಹಣ ಪಡೆಯುತ್ತಿದ್ದ ಆರೋಪದ ಮೇರೆಗೆ ಗುಬ್ಬಿ ವಲಯ ಅರಣ್ಯಾಧಿಕಾರಿ...