ತುಮಕೂರು | ಯುಗಾದಿ, ರಂಜಾನ್ ; ರಂಗೇರಿದ ವಸ್ತ್ರ ವ್ಯಾಪಾರ : ಬಟ್ಟೆ ಜವಳಿ ಅಂಗಡಿಗಳಲ್ಲಿ ಜನಜಾತ್ರೆ

Date:

ಮಧ್ಯ ಪ್ರಾಚ್ಯ ದೇಶಗಳಲ್ಲಿ ಯುದ್ಧ ನಡೆದು ಜನತೆ ತತ್ತರಿಸಿರುವುದು ಒಂದು ಕಡೆಯಾದರೆ,  ಹಿಂದೂ ಮತ್ತು ಮುಸ್ಲಿಂ ಬಾಂಧವರ ಪ್ರಮುಖ ಹಬ್ಬಗಳಾದ ಯುಗಾದಿ ಮತ್ತು ರಂಜಾನ್ ಒಟ್ಟೊಟ್ಟಿಗೆ ಬಂದಿರುವ ಹಿನ್ನೆಲೆಯಲ್ಲಿ ಹಿಂದೂ ಮತ್ತು ಮುಸ್ಲಿಂ ಬಾಂಧವರು ಹಬ್ಬಕ್ಕೆ ಹೊಸ ಉಡುಪುಗಳನ್ನು ಖರೀದಿಸುವ ಭರಾಟೆಯಲ್ಲಿ ತೊಡಗಿದ್ದು, ಬಟ್ಟೆ ಅಂಗಡಿಗಳಲ್ಲಿ ವ್ಯಾಪಾರ ಬಲು ಜೋರಾಗಿ ನಡೆದಿದೆ.

- Advertisement -

ಬರುವ ಶನಿವಾರ ರಂಜನ್ ಹಬ್ಬ ಇರುವ ಹಿನ್ನೆಲೆಯಲ್ಲಿ ಕಳೆದ 15-20 ದಿನಗಳಿಂದಲೇ ನೆತ್ತಿ ಸುಡವ ಬಿಸಿಲಿನ ಝಳವನ್ನು ಲೆಕ್ಕಿಸದೆ ಮುಸ್ಲಿಂ ಬಾಂಧವರು ಬಟ್ಟೆ ಅಂಗಡಿಗಳಿಗೆ ಎಡತಾಕಿ ಖರೀದಿಯಲ್ಲಿ ತೊಡಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...
1002984415

ನಗರದ ಪ್ರಮುಖ ವ್ಯಾಪಾರ ವಹಿವಾಟು ನಡೆಯುವ ಎಂ.ಜಿ. ರಸ್ತೆ, ಎಸ್‌ಐಟಿ ಮುಖ್ಯ ರಸ್ತೆ, ಮಂಡಿಪೇಟೆ ರಸ್ತೆ, ಬಿ.ಹೆಚ್. ರಸ್ತೆ ಸೇರಿದಂತೆ ವಿವಿಧ ರಸ್ತೆಗಳಲ್ಲಿ ಇರುವ ಬಟ್ಟೆ ಅಂಗಡಿಗಳು ಜನರಿಂದ ತುಂಬಿ ಕಾಲಿಡಲು ಜಾಗವಿಲ್ಲದಷ್ಟರ ಮಟ್ಟಿಗೆ ಗಿಜಗುಡುತ್ತಿವೆ. 

ಕೆಲ ಬಟ್ಟೆ ಅಂಗಡಿಗಳಲ್ಲಿ ಮಾಮೂಲಿ ದಿನಗಳಲ್ಲಿ ನಾಲ್ಕೖದು ಮಂದಿ ವ್ಯಾಪಾರ ಮಾಡುತ್ತಿದ್ದರು. ಆದರೆ ರಂಜಾನ್ ಮತ್ತ ಯುಗಾದಿ ಹಬ್ಬದ ಭರಾಟೆ ಜೋರಾದ ಬಳಿಕ ಒಂದೊಂದು ಬಟ್ಟೆ ಅಂಗಡಿಯವರು 20 ರಿಂದ 30 ಜನರನ್ನು ಕರೆಸಿಕೊಂಡು ವ್ಯಾಪಾರದಲ್ಲಿ ತೊಡಗಿದ್ದಾರೆ. ಇದನ್ನು ಗಮನಿಸಿದರೆ ಕಲ್ಪತರುನಾಡು ತುಮಕೂರು ನಗರದಲ್ಲಿ ಎಷ್ಟರ ಮಟ್ಟಿಗೆ ಹಬ್ಬಕ್ಕೆ ಬಟ್ಟೆ ಖರೀದಿ ಭರಾಟೆ ನಡೆದಿದೆ ಎಂಬುದ ಗೊತ್ತಾಗುತ್ತದೆ.

1002984414

ನಗರದ ಎಂ.ಜಿ. ರಸ್ತೆಯಲ್ಲಿರುವ ಜ್ಯೋತಿಫ್ಯಾಷನ್ ಸೇರಿದಂತೆ ವಿವಿಧ ಬಟ್ಟೆ ಅಂಗಡಿಗಳಿಗೆ ನಗರ, ಗ್ರಾಮೀಣ ಪ್ರದೇಶ ಸೇರಿದಂತೆ ವಿವಿಧೆಡೆಯಿಂದ ಬಂದು ಜನತೆ ಬಟ್ಟೆ ಖರೀದಿಗೆ ಮುಗ್ಗಿ ಬೀಳುತ್ತಿರುವುದು ಸಾಮಾನ್ಯವಾಗಿದೆ.

1002984465

ಕೆಲ ಬಟ್ಟೆ ಅಂಗಡಿಗಳಲ್ಲಿ ಹಬ್ಬದ ಪ್ರಯುಕ್ತ ವಿಶೇಷ ರಿಯಾಯ್ತಿ, ಕೊಡುಗೆಗಳನ್ನು ನೀಡುತ್ತಿದ್ದರೆ, ಇನ್ನುಳಿದ ಅಂಗಡಿಗಳಲ್ಲಿ ಬೆಲೆ ಎಷ್ಟೇ ದುಪ್ಪಟ್ಟಾದರೂ ಜನ ಅದನ್ನು ಲೆಕ್ಕಿಸದೆ ಹೊಸ ಉಡುಪುಗಳ ಖರೀದಿಯನ್ನು ತೊಡಗಿರುವುದು ನಗರದ ಬಟ್ಟೆ ಅಂಗಡಿಗಳಲ್ಲಿ ಕಂಡು ಬರುತ್ತಿದೆ. 

ಬಟ್ಟೆ ಅಂಗಡಿಯವರು ಸಹ ಬಿಸಿಲಿನ ಝಳದಿಂದ ಬಳಲಿ ಬರುವ ಗ್ರಾಹಕರಿಗೆ ತಂಪು ಪಾನೀಯ ಕೊಡುವ ವ್ಯವಸ್ಥೆಯನ್ನು ಮಾಡಿಕೊಂಡು, ತಮ್ಮ ಅಂಗಡಿಗಳತ್ತ ಗ್ರಾಹಕರನ್ನು ಸೆಳೆಯುವ ತಂತ್ರಗಳನ್ನು ಅನುಸರಿಸುತ್ತಿರುವುದು ವಿಶೇಷವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ವಲಯ ಅರಣ್ಯಾಧಿಕಾರಿ

ಗುತ್ತಿಗೆದಾರರಿಂದ ಲಂಚದ ಹಣ ಪಡೆಯುತ್ತಿದ್ದ ಆರೋಪದ ಮೇರೆಗೆ ಗುಬ್ಬಿ ವಲಯ ಅರಣ್ಯಾಧಿಕಾರಿ...

ತುಮಕೂರು | ಉದ್ಯಮದ ಅಗತ್ಯಕ್ಕೆ ತಕ್ಕಂತೆ ಕೌಶಲ್ಯ ಬೆಳೆಸಿಕೊಳ್ಳಿ: ಡಾ. ಜಿ. ಪರಮೇಶ್ವರ

ಬದಲಾಗುತ್ತಿರುವ ತಂತ್ರಜ್ಞಾನ, ವಿಶೇಷವಾಗಿ ಕೃತಕ ಬುದ್ಧಿಮತ್ತೆ (AI) ಕುರಿತು ವಿದ್ಯಾರ್ಥಿಗಳು ನಿರಂತರವಾಗಿ...

ಗುಬ್ಬಿ | ಅಂಬೇಡ್ಕರ್, ಬುದ್ಧ, ಬಸವಣ್ಣ ಅವಹೇಳನ ಖಂಡಿಸಿ ದಸಂಸ ಪ್ರತಿಭಟನೆ

ಮಾಜಿಕ ಜಾಲತಾಣದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್, ಬುದ್ಧ ಹಾಗೂ...

ತುಮಕೂರು | 50 ಸಾವಿರ ಯುವಜನರಿಗೆ ಸಿಪಿಆರ್ ತರಬೇತಿ : ‘ಹಾರ್ಟ್ ಸೇಫ್ ತುಮಕೂರು’ ಅಭಿಯಾನಕ್ಕೆ ಡಿಸಿಎಂ ಚಾಲನೆ

ಹಠಾತ್ ಹೃದಯಾಘಾತ ಸಂಭವಿಸಿದ ಸಂದರ್ಭದಲ್ಲಿ ಆಸ್ಪತ್ರೆಗೆ ತಲುಪುವ ಮುನ್ನ ನೀಡುವ ಸಿಪಿಆರ್...