ತುಮಕೂರು | ಹಣ ಮಂಜೂರಾತಿಗೆ ಅಧಿಕಾರಿಗಳಿಂದ ಲಂಚ; ಗ್ರಾ.ಪಂ ಕಚೇರಿಯಲ್ಲಿ ದನ ಕಟ್ಟಿ ಪ್ರತಿಭಟನೆ

Date:

Advertisements

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ (ಮನರೇಗಾ) ನಿರ್ಮಿಸಿದ ದನದ ಕೊಟ್ಟಿಗೆ ಕಾಮಗಾರಿಗೆ ಹಣ ಮಂಜೂರು ಮಾಡಲು ಗ್ರಾಮ ಪಂಚಾಯಿತಿ ಅಧಿಕಾರಿಗಳು ವಿಳಂಬ ಮಾಡುತ್ತಿದ್ದರು. ಇದರಿಂದಾಗಿ, ಕಳೆದ 4 ವರ್ಷಗಳಿಂದ ಅಲೆದಾಡಿ ಹೈರಾಣಾಗಿದ್ದ ರೈತನೋರ್ವ ಹಸುಗಳನ್ನೇ ಪಂಚಾಯತಿಗೆ ಕರೆತಂದು ಪ್ರತಿಭಟಿಸಿದ್ದಾರೆ.

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಸಾಸಲುಕುಂಟೆ ಗ್ರಾಮ ಪಂಚಾಯಿತಿಯಲ್ಲಿ ಘಟನೆ ನಡೆದಿದ್ದು, ಕೆಂಚಮ್ಮನಹಳ್ಳಿ ಗ್ರಾಮದ ಗೋಪಾಲ್ ಎನ್ನುವ ರೈತ ಎತ್ತುಗಳೊಂದಿಗೆ ಆಗಮಿಸಿ ಪಂಚಾಯಿತಿ ಕಚೇರಿಯಲ್ಲಿ ಬೀಡು ಬಿಟ್ಟಿರುವುದು ಕಂಡುಬಂದಿದೆ. ಅಧಿಕಾರಿಗಳು ಆಗಮಿಸುವವರೆಗೂ ತನ್ನ ಹೋರಾಟ ನಿಲ್ಲುವುದಿಲ್ಲವೆಂದು ಪಟ್ಟುಹಿಡಿದಿದ್ದಾರೆ.

ಬಿಲ್ ನೀಡಲು ಲಂಚ ಪಡೆದುಕೊಂಡು ವಿನಾಕಾರಣ ತಡ ಮಾಡುತ್ತಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿ ತನ್ನ ಎತ್ತುಗಳೊಂದಿಗೆ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ತನ್ನ ಆಕ್ರೋಶ ಹೊರಹಾಕಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Advertisements

ಈ ಸುದ್ದಿ ಓದಿದ್ದೀರಾ? ರಾಯಚೂರು | ದರ್ಗಾ ಕಮಾನ್ ನಿರ್ಮಾಣ ವಿವಾದ; ಎರಡು ಗುಂಪುಗಳ ನಡುವೆ ಘರ್ಷಣೆ

“ಉದ್ಯೋಗ ಖಾತ್ರಿ ಯೋಜನೆಯಲ್ಲಿ ನನ್ನ ಹೊಲದಲ್ಲಿ ದನದಕೊಟ್ಟಿಗೆ ನಿರ್ಮಾಣ ಮಾಡಿದ್ದು, ₹57,000 ಬಿಲ್‌ಗಾಗಿ ಗ್ರಾ.ಪಂ ಕಂಪ್ಯೂಟರ್ ಆಪರೇಟರ್ ನಿಂಗರಾಜು ₹3,000 ಲಂಚ ಪಡೆದುಕೊಂಡು ಹಣ ಮಂಜೂರು ಮಾಡದೆ ಅಲೆದಾಡಿಸುತ್ತಿದ್ದಾರೆ” ಎಂದು ರೈತ ಗೋಪಾಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವರದಿ – ಸಿಟಿಜನ್ ಜರ್ನಲಿಸ್ಟ್ ಅನಿಲ್ ಕುಮಾರ್ ಪಾವಗಡ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Download Eedina App Android / iOS

X