ತುಮಕೂರು | ಜಗಳ ಬಿಡಿಸಲು ಬಂದ ಪೊಲೀಸರ ವಾಹನವನ್ನೇ ಕದ್ದೊಯ್ದ ಭೂಪ!

Date:

Advertisements

ಜಗಳ ಬಿಡಿಸಲು ಬಂದ ಪೊಲೀಸರ 112 ವಾಹನವನ್ನೇ ಕದ್ದೊಯ್ದು ಪೊಲೀಸರನ್ನು ಹೈರಾಣು ಮಾಡಿರುವ ಪ್ರಕರಣ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕು, ಸಿ.ಎಸ್ ಪುರ ಪೊಲೀಸ್ ಠಾಣೆ ವ್ಯಾಪ್ತಿಯ ನಾರಾನಹಳ್ಳಿಯಲ್ಲಿ ಸಂಭವಿಸಿದ್ದು, ಮುನಿಯ ಎಂಬಾತ ಪೊಲೀಸರ ವಾಹನ ಹೊತ್ತೊಯ್ದಿದ್ದಾನೆ.

ಸೋಮವಾರ ರಾತ್ರಿ ಇಲ್ಲಿನ ಮುನಿಯ ಮತ್ತು ಆತನ ಸಹೋದರನ ನಡುವೆ ಜಗಳ ನಡೆಯುತ್ತಿತ್ತು. ಆಗ‌ ಮುನಿಯನ ಸಹೋದರ 112 ಪೊಲೀಸ್ ಸಹಾಯವಾಣಿಗೆ ಕರೆ ಮಾಡಿ ಸ್ಥಳಕ್ಕೆ ಬರುವಂತೆ ಮನವಿ ಮಾಡಿದ್ದಾನೆ. ಸ್ಥಳಕ್ಕೆ ಬಂದ 112 ಪೊಲೀಸರು ಜಗಳ ಬಿಡಿಸಿ ಮುನಿಯನಿಗೆ ತಿಳಿ ಹೇಳಿದ್ದಾರೆ.

ಇದರಿಂದ ಕುಪಿತಗೊಂಡ ಮುನಿಯ ಪೊಲೀಸರು ಬಂದಿದ್ದ 112 ವಾಹನದ ಹಿಂಬದಿಯ ಗಾಜು ಹೊಡೆದು ಹಾಕಿದ್ದಾನೆ. ಪೊಲೀಸರು ಕಾರಿನಿಂದ ಇಳಿದು ಗಾಜು ಪರಿಶೀಲನೆ ಮಾಡುತ್ತಿದ್ದಾಗ. ಏಕಾಏಕಿ ಕಾರು ಹತ್ತಿದ ಮುನಿಯ ಕಾರನ್ನು ಚಲಾಯಿಸಿಕೊಂಡು ಸ್ಥಳದಿಂದ ಪರಾರಿಯಾಗಿದ್ದಾನೆ.

Advertisements

ಈ ಸುದ್ದಿ ಓದಿದ್ದೀರಾ? ಮೈಸೂರು | ತಾಂತ್ರಿಕ ಸಮಸ್ಯೆಯಿಂದ ʼಗೃಹಲಕ್ಷ್ಮಿ ಯೋಜನೆʼಗೆ ತೊಂದರೆ: ಯತೀಂದ್ರ ಸಿದ್ದರಾಮಯ್ಯ

ಈ ಅನಿರೀಕ್ಷಿತ ಘಟನೆಯಿಂದ ಕಕ್ಕಾಬಿಕ್ಕಿಯಾದ ಪೊಲೀಸರು ಇಡೀ ರಾತ್ರಿ ಮುನಿಯ ಹಾಗೂ 112 ವಾಹನವನ್ನು ಹುಡುಕಿದ್ದಾರೆ. ಕೊನೆಗೆ ಸತತ ಮೂರ್ನಾಲ್ಕು ಗಂಟೆಗಳ ಹುಡುಕಾಟದ ಬಳಿಕ ತುಮಕೂರು ತಾಲೂಕಿನ ಹೆಬ್ಬೂರು ಬಳಿ ವಾಹನ ಸಮೇತವಾಗಿ ಮುನಿಯ ಪತ್ತೆಯಾಗಿದ್ದಾನೆ. ಕೊನೆಗೂ‌ ಮುನಿಯನನ್ನು ಪತ್ತೆ ಮಾಡಿದ ಪೊಲೀಸರು 112 ವಾಹನವನ್ನು ಸುಪರ್ದಿಗೆ ಪಡೆದು, ಮುನಿಯನನ್ನು ವಶಕ್ಕೆ ಪಡೆದಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X