ತುಮಕೂರು | ಎಲ್ಲ ಜಾತಿಗಳ ಪರವಾಗಿ ಹೋರಾಟ ಸಾಗಿದೆ: ದಸಂಸ ಸಂಚಾಲಕ

Date:

ಪ್ರೊ‌. ಬಿ. ಕೃಷ್ಣಪ್ಪ ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿಗೆ 50ವರ್ಷದ ಸಂಭ್ರಮದಲ್ಲಿದೆ. ಬುದ್ಧ, ಬಸವ, ಅಂಬೇಡ್ಕರ್ ರಚಿಸಿ ಸ್ಥಾಪಿಸಿದ ಸಂವಿಧಾನದಡಿಯಲ್ಲಿ ಶೋಷಿತ, ದಮನಿತ, ದಲಿತರ ಪರವಾಗಿ ಸಾಮಾಜಿಕ ನ್ಯಾಯ ಒದಗಿಸಿ ಎಲ್ಲಾ ಜಾತಿಗಳ ಪರವಾಗಿ ಹೋರಾಟ ನಡೆಸುತ್ತಾ ಸಮಿತಿ ಸಾಗಿದೆ ಎಂದು ದಸಂಸ ತುಮಕೂರು ಜಿಲ್ಲಾ ಸಂಚಾಲಕ ಕುಂದೂರು ತಿಮ್ಮಯ್ಯ ಹೇಳಿದರು.

- Advertisement -

ತುಮಕೂರಿನ ಪ್ರವಾಸಿ ಮಂದಿರದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ತಿಪಟೂರಿನಲ್ಲಿ ಸ್ಥಾಪಿತವಾಗಿ 46ವರ್ಷ ತುಂಬಿದೆ. ಶೋಷಿತರಾ, ಸಾಮಾಜಿಕ ನ್ಯಾಯಕ್ಕಾಗಿ ಸಾವಿರಾರು ಕಿ.ಮೀ. ಪಾದಯಾತ್ರೆ ನಡೆಸಿ ನ್ಯಾಯ ದೊರಕಿಸಿ ಕೊಟ್ಟಿದ್ದೇವೆ. ಸಮಿತಿಯ ಆದೇಶದಂತೆ ಪದಾಧಿಕಾರಿಗಳು ಆಯ್ಕೆಯಾಗಿದ್ದಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಸಾಮಾಜಿಕ ನ್ಯಾಯಗಳಿಂದ ವಂಚಿತರಾದ ಯಾವುದೇ ಸಮುದಾಯದ ಪರ ಹೋರಾಟ ಮಾಡಲು ಸಮಿತಿ ಸಿದ್ಧವಿದೆ. ಇತ್ತೀಚೆಗೆ ತಮ್ಮ ವೈಯಕ್ತಿಕ ವಿಚಾರಕ್ಕೆ ಧನವಂತರು ದಲಿತರನ್ನು ಜಾತಿನಿಂದನೆ ಪ್ರಕರಣಗಳಿಗೆ ಉಪಯೋಗಿಸಿಕೊಳ್ಳುತ್ತಿದ್ದಾರೆ. ಈ ವಿಚಾರವಾಗಿ ದಲಿತರು ಎಚ್ಚೆತ್ತುಕೊಳ್ಳಬೇಕು, ಸಮಿತಿ ನ್ಯಾಯದ ಪರವಿರುತ್ತದೆ ಎಂದರು.

ಕರ್ನಾಟಕ ದಸಂಸ ಸ್ಥಾಪಿತವಾಗಿ 50ನೇ ವರ್ಷದ ಸಂಭ್ರಮಾಚರಣೆಯಲ್ಲಿದೆ ಈ ಕಾರ್ಯಕ್ರಮ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ನಡೆಯಲಿದೆ. ಮೊದಲ ಬಾರಿಗೆ ತಾಲೂಕು ಸಂಚಾಲಕನಾಗಿ ಆಯ್ಕೆಯಾದಾಗ ಪಾದಯಾತ್ರೆಯ ಮುಖಾಂತರ, ಹೋರಾಟ ನಡೆಸಿ ಸಾಮಾಜಿಕ ನ್ಯಾಯ ದೊರಕಿಸಿ ಕೊಟ್ಟಿದ್ದೇವು ಎಂದರು.

ತಿಪಟೂರು ತಾಲೂಕು ಸಂಚಾಲಕರಾಗಿ ಮೋಹನ್ ಜಕ್ಕನಹಳ್ಳಿ, ಸಂಘಟನಾ ಸಂಚಾಲಕರಾಗಿ ಮಂಜುನಾಥ್ ಹರಚನಹಳ್ಳಿ, ರಂಗಸ್ವಾಮಿ ಹುಲಿಹಳ್ಳಿ, ಉಗ್ರ ನರಸಿಂಹಯ್ಯ ಯಗಚಿಕಟ್ಟೆ, ಚಂದ್ರಶೇಖರ್ ಗಡಬನಹಳ್ಳಿ, ಚಂದ್ರಶೇಖರ್ ಕರಡಾಳು, ಸುರೇಶ್ ಕರಿಕೆರೆ, ಲೋಕೇಶ್ ಚಿಗ್ಗಾವಿ, ರವೀಶ್ ಮಂಜುನಾಥ್ ಪುರ, ಮೋಹನ್ ಬಾಬು ಬೈರಾಪುರ, ಖಜಾಂಚಿಯಾಗಿ ರಮೇಶ್ ಶಿವಪುರ, ಕಾನೂನು ಸಲಹೆಗಾರರಾಗಿ ವೆಂಕಟೇಶ್, ತಿಪಟೂರು, ಮಹಿಳಾ ಸಂಚಾಲಕಿಯಾಗಿ ಧನಲಕ್ಷ್ಮಿ ಕೊನೇಹಳ್ಳಿ, ಸಂಘಟನಾ ಸಂಚಾಲಕರಾಗಿ ನಂದಿನಿ, ಮಡೆ ನೂರು, ಶಾರದಾ ಕಲ್ಲು ಶೆಟ್ಟಿಹಳ್ಳಿ, ನಗರ ಸಂಚಾಲಕರಾಗಿ ರಮೇಶ್ ಮಾರನಗೆರೆ ನಗರ ಸಂಘಟನಾ ಸಂಚಾಲಕರಾಗಿ, ಮಂಜುನಾಥ್ ಮಾರನಗೆರೆ, ಸಂದೀಪ್ ಮಣಿಕಂಠ ಮುನ್ನು ಕಂಚಾಘಟ್ಟ ಮನೋಜ್ ಲೋಕೇಶ್, ಕಸಬಾ ಹೋಬಳಿ ಸಂಚಾಲಕರಾಗಿ ಗಿರೀಶ್ ಕುಮಾರ್ ನಾಗಹಳ್ಳಿ, ಆಯ್ಕೆಯಾಗಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರುಗಳಾದ ನಾಗತಿಹಳ್ಳಿ ಕೃಷ್ಣಮೂರ್ತಿ, ಶಿವಲಿಂಗಪ್ಪ, ಮುರುಳಿ, ಮಧುಸೂಧನ್, ಧನಲಕ್ಷ್ಮಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...