ತುಮಕೂರು | ಕರ್ತವ್ಯಕ್ಕೆ ವೈದ್ಯರೇ ಗೈರು; ರೋಗಿ ಸಾವು

Date:

  • ತರಬೇತಿ ವೈದ್ಯರೊಬ್ಬರು ಚಿಕಿತ್ಸೆ ನೀಡುವ ಪ್ರಯತ್ನದಲ್ಲಿದ್ದಾಗ ರೋಗಿ ಸಾವು
  • ತಪ್ಪಿತಸ್ಥ ವೈದ್ಯರ ವಿರುದ್ಧ ತನಿಖೆ ನಡೆಸಿ ಕ್ರಮ ಕೈಗೊಳ್ಳಲು ಆದೇಶ

ಸಾರ್ವಜನಿಕ ಆಸ್ಪತ್ರೆಯಲ್ಲಿ ರಾತ್ರಿ ಪಾಳಿಯ ವೈದ್ಯರಿಲ್ಲದ ಕಾರಣ, ತುರ್ತುಚಿಕಿತ್ಸೆ ಸಿಗದೆ ಮಹಿಳೆಯೊಬ್ಬರು ಗುರುವಾರ ಮಧ್ಯರಾತ್ರಿ ಮೃತಪಟ್ಟ ಘಟನೆ ತುಮಕೂರಿನ ತುರುವೇಕೆರೆಯಲ್ಲಿ ನಡೆದಿದೆ. ಆಸ್ಪತ್ರೆ ವಿರುದ್ಧ ಮೃತರ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಮೃತ ಮಹಿಳೆ ನಿರ್ಮಲ (40) ಪಟ್ಟಣದ ಅಗಸರ ಬೀದಿಯ ನಿವಾಸಿ ಎನ್ನಲಾಗಿದೆ. ಗುರುವಾರ ರಾತ್ರಿ 11.45ರ ಸಮಯದಲ್ಲಿ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ತಕ್ಷಣ ಚಿಕಿತ್ಸೆಗೆ ಅವರನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಕರ್ತವ್ಯದಲ್ಲಿರದ ಕಾರಣ ರೋಗಿ ಮೃತಪಟ್ಟಿದ್ದಾರೆ ಎಂದು ಸಂಬಂಧಿಕರು ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಮೃತ ಮಹಿಳೆಗೆ, ಉಸಿರಾಟದ ತೊಂದರೆ ಕಾಣಿಸಿಕೊಂಡ ನಂತರ ಆಕೆಯ ಸಂಬಂಧಿಕರು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಿದ್ದಾರೆ. ತಕ್ಷಣ ಚಿಕಿತ್ಸೆ ನೀಡುವಂತೆ ರೋಗಿಯ ಕಡೆಯವರು ಕೇಳಿಕೊಂಡಿದ್ದಾರೆ. ರಾತ್ರಿ ಪಾಳಿಯಲ್ಲಿ ಕರ್ತವ್ಯದಲ್ಲಿ ಇರಬೇಕಾಗಿದ್ದ ವೈದ್ಯ ಡಾ.ಮುರಳಿ ಆಸ್ಪತ್ರೆಯಲ್ಲಿ ಇರಲಿಲ್ಲ. ಅಲ್ಲೇ ಇದ್ದ ತರಬೇತಿ ವೈದ್ಯರೊಬ್ಬರು (ಹೌಸ್ ಸರ್ಜನ್) ಚಿಕಿತ್ಸೆ ನೀಡುವ ಪ್ರಯತ್ನ ನಡೆಸಿದ್ದಾರೆ. ಆದರೆ, ಅವರ ಪ್ರಯತ್ನ ಫಲಕಾರಿಯಾಗದೇ ರೋಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ತಪ್ಪಿತಸ್ಥ ವೈದ್ಯರ ವಿರುದ್ಧ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು. ಪದೇಪದೇ ಇಂತಹ ಘಟನೆಗಳು ನಡೆಯುತ್ತಿದ್ದು, ಆರೋಗ್ಯ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಪಟ್ಟಣದ ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ವೈದ್ಯರು ಖಾಸಗಿ ಕ್ಲಿನಿಕ್ ಹೊಂದಿದ್ದಾರೆ. ಹೀಗಾಗಿ, ಇಲ್ಲಿ ಅವರು ಕರ್ತವ್ಯ ನಿರ್ವಹಿಸುವುದಿಲ್ಲ ಎಂದು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಮಾಹಿತಿ ಹಕ್ಕು ಕಾರ್ಯಕರ್ತ ಎಚ್‌ ಡಿ ರುದ್ರೇಶ್ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ?: ತಾಯಿ, ಮಗು ಸಾವು ಸೂಚ್ಯಂಕ; 10 ದೇಶಗಳ ಪಟ್ಟಿಯಲ್ಲಿ ಭಾರತಕ್ಕೆ ಅಗ್ರಸ್ಥಾನ

ಮನವಿ ಪತ್ರಕ್ಕೆ ಸ್ಪಂಧಿಸಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ, ಆಸ್ಪತ್ರೆಯಲ್ಲಿ ವೈದ್ಯರು ಇಲ್ಲದೆ, ಚಿಕಿತ್ಸೆ ಸಿಗದೆ ರೋಗಿ ಮೃತಪಟ್ಟಿರುವುದು ಗೊತ್ತಾಗಿದೆ. ಈ ಬಗ್ಗೆ ತನಿಖೆ ನಡೆಸಲು ಡಾ.ಪುರುಷೋತ್ತಮ್ ನೇತೃತ್ವದ ತಂಡ ರಚಿಸಲಾಗಿದೆ. ಐದು ದಿನಗಳಲ್ಲಿ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಈ ದಿನ.ಕಾಮ್‌ನೊಂದಿಗೆ ಮಾತನಾಡಿದ ಕರ್ನಾಟಕ ಅಸೋಸಿಯೇಷನ್ ​​ಆಫ್ ರೆಸಿಡೆಂಟ್ ಡಾಕ್ಟರ್ಸ್ (ಕೆಎಆರ್‍‌ಡಿ)ಸಂಘಟನೆಯ ಕಾರ್ಯಕರ್ತರಾದ ಹೆಸರು ಹೇಳಲು ಇಚ್ಛಿಸದ ವೈದ್ಯರೊಬ್ಬರು ಮಾತನಾಡಿ, “ಕೇರಳದಲ್ಲಿ ವಂದನಾ ಎಂ ವೈದ್ಯ ಮೃತಪಟ್ಟ ಪ್ರಕರಣ ಇನ್ನೂ ಮಾಸುವ ಮುನ್ನವೇ, ತುಮಕೂರಿನಲ್ಲಿ ನರ್ಸೊಬ್ಬರ ಮೇಲೆ ಹಲ್ಲೆಯಾಗುತ್ತಿದೆ. ರೋಗಿಗೆ ನೀಡಬೇಕಾದ ಎಲ್ಲ ಚಿಕಿತ್ಸೆ ನೀಡಿದ್ದರು. ಮಧ್ಯೆ ಹೃದಯಘಾತವಾದ ಕಾರಣ ಅವರು ಮೃತಪಟ್ಟಿದ್ದಾರೆ. ಇದರಲ್ಲಿ ನರ್ಸ್‌ ತಪ್ಪು ಇಲ್ಲ. ರೋಗಿಯ ಸಂಬಂಧಿಕರು ರಾತ್ರಿ ಏಕಾಏಕಿ ದಾಳಿ ಮಾಡಿ ಅವಾಚ್ಯ ಶಬ್ಧದಲ್ಲಿ ಆಕೆಯನ್ನು ನಿಂದಿಸಿದ್ದಾರೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಬರ ಪರಿಹಾರ ಕಾಮಗಾರಿ ಕೈಗೊಳ್ಳಲು ರೈತ ಸಂಘದ ಜಿಲ್ಲಾಧ್ಯಕ್ಷ ಎ. ಗೋವಿಂದರಾಜು ಒತ್ತಾಯ

ತುಮಕೂರು ಜಿಲ್ಲೆಯಲ್ಲಿ ತೀವ್ರ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ತಿಪಟೂರು ಹೊರತುಪಡಿಸಿ ಜಿಲ್ಲೆಯ...

ತುಮಕೂರು | ಗ್ರಾಮೀಣ ಪ್ರದೇಶಗಳಲ್ಲಿ ನಿವೇಶನ ಹಂಚಿಕೆ ಪ್ರಕ್ರಿಯೆ ತ್ವರಿತಗೊಳಿಸಲು ಜಿಲ್ಲಾಧಿಕಾರಿ ಸೂಚನೆ

ಗ್ರಾಮೀಣ ಪ್ರದೇಶಗಳ ನಿವೇಶನ ರಹಿತ ಅರ್ಹ ಕುಟುಂಬಗಳಿಗೆ ನಿವೇಶನ ಹಂಚಿಕೆ ಪ್ರಕ್ರಿಯೆಯನ್ನು...

ಗುಬ್ಬಿ ಸಮೀಪ ಚಿರತೆ ಓಡಾಟ: ಆತಂಕದಲ್ಲಿ ನಾಗರಿಕರು

ಗುಬ್ಬಿ ಪಟ್ಟಣದ ಹೊರವಲಯದ ರಾಯವಾರ ಗ್ರಾಮದ ಮನೆಯೊಂದರ ಬಳಿ ಚಿರತೆ ಓಡಾಡಿರುವ...

ತುಮಕೂರು ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಯಾರಿಗೆ?: ಹೈಕಮಾಂಡ್ ಮುಂದೆ ಬಣ, ಸಾಮಾಜಿಕ ಸಮೀಕರಣದ ಸವಾಲು

ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್‌ನ ಸಂಘಟನಾ ಭವಿಷ್ಯ, ಸಾಮಾಜಿಕ ಸಮೀಕರಣ, ಮಹಿಳಾ ಪ್ರಾತಿನಿಧ್ಯ...