ತುರುವೇಕೆರೆ | ಪರಂಪರೆ ಪೂರ್ವಜರ ಉಡುಗೊರೆಯಲ್ಲ, ಮುಂದಿನ ಪೀಳಿಗೆಗೆ ನೀಡುವ ಸಾಲ : ಡಾ. ಮಹೇಶ್ ಕುಮಾರ್

Date:

ಪರಂಪರೆ ಎಂಬುದು ಪೂರ್ವಜರಿಂದ ಪಡೆದ ಉಡುಗೊರೆಯಲ್ಲ; ಮುಂದಿನ ಪೀಳಿಗೆಗೆ ಉಳಿಸಿ ನೀಡಲು ಪಡೆದಿರುವ ಸಾಲು. ಆದ್ದರಿಂದ ಪ್ರತಿಯೊಬ್ಬರೂ ತಮ್ಮ ಪರಂಪರೆಯನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಜವಾಬ್ದಾರಿ ಹೊಂದಿದ್ದಾರೆ ಎಂದು ತುಮಕೂರು ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಇತಿಹಾಸ ಉಪನ್ಯಾಸಕ ಡಾ. ಮಹೇಶ್ ಕುಮಾರ್ ಹೇಳಿದರು.

- Advertisement -

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತುಮಕೂರು ಸಂಶೋಧಕರ ತಂಡ, ಇತಿಹಾಸ ಸಂಕಲನ ಸಮಿತಿ ಹಾಗೂ ಕರ್ನಾಟಕ ಇತಿಹಾಸ ಅಕಾಡೆಮಿ, ಬೆಂಗಳೂರು ಇವರ ಸಹಯೋಗದಲ್ಲಿ ಸೆ. 18ರಂದು ಆಯೋಜಿಸಿದ್ದ ‘ಐತಿಹಾಸಿಕ ಪರಂಪರೆ ಉಳಿಸಿ’ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಟಾಟಾ ಸನ್ಸ್ ಬೋರ್ಡ್ ರೂಮ್ ಕಲಹದ ಆಳ ಅಗಲವೇನು...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕೌಟುಂಬಿಕ ಪರಂಪರೆ, ಜಲ ಪರಂಪರೆ, ಕ್ರೀಡಾ ಪರಂಪರೆ ಹಾಗೂ ಜನಪದ ಪರಂಪರೆಗಳು ಸಮಾಜದ ಸಾಂಸ್ಕೃತಿಕ ಅಸ್ಮಿತೆಯ ಪ್ರಮುಖ ಭಾಗಗಳಾಗಿವೆ. ಇವುಗಳ ಮಹತ್ವವನ್ನು ಅರಿತು ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು.

ಸಮಾಜಶಾಸ್ತ್ರ ಉಪನ್ಯಾಸಕ ವಿಜಯ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ಸಾಮಾಜಿಕ ಪರಂಪರೆಯಲ್ಲಿರುವ ಮಾನವೀಯ ಮೌಲ್ಯಗಳು ಹಾಗೂ ಅವುಗಳನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಅಗತ್ಯವನ್ನು ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ. ವೆಂಕಟೇಶ್ ಬಿ.ಜಿ. ಮಾತನಾಡಿ, ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆಯಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ಹಾಗೂ ಯುನೆಸ್ಕೋ (UNESCO) ವಹಿಸಿರುವ ಪಾತ್ರದ ಕುರಿತು ವಿವರಿಸಿದರು. ಕರ್ನಾಟಕದ ವಿಶ್ವ ಪಾರಂಪರಿಕ ತಾಣಗಳು ನಮ್ಮ ಐತಿಹಾಸಿಕ ಹಾಗೂ ಸಾಂಸ್ಕೃತಿಕ ಪರಂಪರೆಯ ಪ್ರಮುಖ ಭಾಗವಾಗಿದ್ದು, ಅವುಗಳ ಸಂರಕ್ಷಣೆಯ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು.

ಅಶೋಕನ ಮಸ್ಕಿ ಶಾಸನದ ಐತಿಹಾಸಿಕ ಮಹತ್ವ, ಸ್ಮಾರಕಗಳ ಸಂರಕ್ಷಣೆ ಹಾಗೂ ಜನಪದ ಸಂಸ್ಕೃತಿಯ ವೈವಿಧ್ಯತೆಯನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು ಎಂದು ಅವರು ಹೇಳಿದರು.

ಕಾರ್ಯಕ್ರಮವನ್ನು ಇತಿಹಾಸ ವಿಭಾಗದ ಹರೀಶ್ ಕುಮಾರ್ ಎಚ್.ಎಸ್. ಆಯೋಜಿಸಿದ್ದರು. ಮಂಜುನಾಥ್ ಸಿ.ಡಿ., ಪತ್ರಾಂಕಿತ ವ್ಯವಸ್ಥಾಪಕ ನರೇಂದ್ರ ಬಾಬು ಎಸ್.ಆರ್., ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ರಾಘವೇಂದ್ರ ಬಿ.ಎಸ್., ಐಕ್ಯೂಎಸಿ ಸಂಚಾಲಕ ಹಾಗೂ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ರಾಜೇಂದ್ರ ಪಿ., ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಪಿ.ಬಿ. ಕುಮಾರ್, ರಾಜ್ಯಶಾಸ್ತ್ರ ಉಪನ್ಯಾಸಕಿ ಸುಧಾ ಉಪಸ್ಥಿತರಿದ್ದರು.

ಕನ್ನಡ ವಿಭಾಗದ ಉಪನ್ಯಾಸಕ ಯೋಗೀಶ್ ಎನ್. ನಿರೂಪಿಸಿದರು. ಪದ್ಮರಾಜು ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು| ಜಾತಿ, ಧರ್ಮದ ಭೇದವಿಲ್ಲದೆ ‘ಊರ ಹಬ್ಬ’ವಾಗಿ ತುಮಕೂರು ದಸರಾ : ಡಾ. ಜಿ. ಪರಮೇಶ್ವರ

ತುಮಕೂರು ಜಿಲ್ಲೆಯ ಸಂಸ್ಕೃತಿ, ಪರಂಪರೆ ಹಾಗೂ ಕಲೆಯನ್ನು ಅನಾವರಣಗೊಳಿಸುವ ‘ಊರ ಹಬ್ಬ’ವಾಗಿ...

ತುಮಕೂರು ದಸರಾ ಉತ್ಸವಕ್ಕೆ ಪೂರ್ವಸಿದ್ಧತೆ: ಆಚರಣೆಗೆ ಜಿಲ್ಲಾಡಳಿತ ಸಜ್ಜು

ತುಮಕೂರು ನಗರದಲ್ಲಿ ದಸರಾ ಉತ್ಸವವನ್ನು ಎಲ್ಲರನ್ನೊಳಗೊಂಡಂತೆ ಜನಪರವಾಗಿ ಆಚರಿಸುವ ನಿಟ್ಟಿನಲ್ಲಿ ಅಗತ್ಯ...

ತುಮಕೂರು | ಬರ ಪರಿಹಾರ ಕಾಮಗಾರಿ ಕೈಗೊಳ್ಳಲು ರೈತ ಸಂಘದ ಜಿಲ್ಲಾಧ್ಯಕ್ಷ ಎ. ಗೋವಿಂದರಾಜು ಒತ್ತಾಯ

ತುಮಕೂರು ಜಿಲ್ಲೆಯಲ್ಲಿ ತೀವ್ರ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ತಿಪಟೂರು ಹೊರತುಪಡಿಸಿ ಜಿಲ್ಲೆಯ...

ತುಮಕೂರು | ಗ್ರಾಮೀಣ ಪ್ರದೇಶಗಳಲ್ಲಿ ನಿವೇಶನ ಹಂಚಿಕೆ ಪ್ರಕ್ರಿಯೆ ತ್ವರಿತಗೊಳಿಸಲು ಜಿಲ್ಲಾಧಿಕಾರಿ ಸೂಚನೆ

ಗ್ರಾಮೀಣ ಪ್ರದೇಶಗಳ ನಿವೇಶನ ರಹಿತ ಅರ್ಹ ಕುಟುಂಬಗಳಿಗೆ ನಿವೇಶನ ಹಂಚಿಕೆ ಪ್ರಕ್ರಿಯೆಯನ್ನು...