ತುರುವೇಕೆರೆ | ದಬ್ಬೇಘಟ್ಟ ಹೋಬಳಿ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಎಲ್.ಮಂಜಯ್ಯಗೌಡ ಆಯ್ಕೆ

Date:

Advertisements

ತುರುವೇಕೆರೆ ತಾಲ್ಲೂಕಿನ ದಬ್ಬೇಘಟ್ಟ ಹೋಬಳಿ ಮಟ್ಟದ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ನಿವೃತ್ತ ಶಿಕ್ಷಕ ಎಲ್.ಮಂಜಯ್ಯಗೌಡ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕಸಾಪ ದಬ್ಬೇಘಟ್ಟ ಹೋಬಳಿ ಘಟಕದ ಅಧ್ಯಕ್ಷ ಕೆ.ಟಿ.ಸಂಪತ್ತು ತಿಳಿಸಿದ್ದಾರೆ.

ತುರುವೇಕೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅ. 26 ರಂದು ದಬ್ಬೇಘಟ್ಟ ಹೋಬಳಿಯ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಈ ಸಮ್ಮೇಳನಾಧ್ಯಕ್ಷ ಸ್ಥಾನಕ್ಕೆ ಜಿಲ್ಲಾ ಕಸಾಪ ಅಧ್ಯಕ್ಷರ ನಿರ್ದೇಶನದ ಮೇರೆಗೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಹಾಗು ದಬ್ಬೇಘಟ್ಟ ಹೋಬಳಿ ಅಧ್ಯಕ್ಷರು, ಪದಾಧಿಕಾರಿಗಳ ಅಭಿಪ್ರಾಯ ಪಡೆದು ದಬ್ಬೇಘಟ್ಟ ಹೋಬಳಿಯ ಲಕ್ಷ್ಮೀದೇವರಹಳ್ಳಿ ಗ್ರಾಮದ ನಿವೃತ್ತ ಪ್ರಾಧಾಪ್ಯಕ ಎಲ್.ಮಂಜಯ್ಯಗೌಡರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು ಎಂದು ಅವರು ತಿಳಿಸಿದರು.

ಸಮ್ಮೇಳನದ ಅಧ್ಯಕ್ಷರಾದ ಎಲ್.ಮಂಜಯ್ಯಗೌಡರು ತಾಲ್ಲೂಕಿನ ವಿವಿಧ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕನ್ನಡ ಸಹ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಅಲ್ಲದೆ ತಾಲ್ಲೂಕು ಕನ್ನಡ ಭಾಷಾ ಭೋಧಕರ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿ, ನಿವೃತ್ತರಾಗಿದ್ದಾರೆ. ಇವರು, ಭಾಷೆ, ಸಾಹಿತ್ಯ, ಸಂಸ್ಕೃತಿ, ಸಂಘಟನಾ ಕಲೆಯಲ್ಲಿ ಹೆಚ್ಚು ಆಸಕ್ತಿಯುಳ್ಳವರಾಗಿದ್ದಾರೆ ಎಂದು ಸಂಪತ್ ತಿಳಿಸಿದರು. ದಬ್ಬೇಘಟ್ಟ ಗ್ರಾಮದ ಭೈರವ ಕಾನ್ವೆಂಟ್ ಆವರಣದಲ್ಲಿ ಅ.26 ರ ಶನಿವಾರ ಬೆಳಗ್ಗೆ 8 ಕ್ಕೆ ಸಮ್ಮೇಳನ ಪ್ರಾರಂಭವಾಗಿ ಅದೇ ದಿನ ಸಂಜೆಗೆ ಕಾರ್ಯಕ್ರಮ ಮುಕ್ತಾಯವಾಗಲಿದೆ.

Advertisements

ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಲಿದ್ದಾರೆ. ಶಾಸಕ ಎಂ.ಟಿ.ಕೃಷ್ಣಪ್ಪನವರು ಅಧ್ಯಕ್ಷತೆ ವಹಿಸಲಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಎಸ್.ಜಿ.ಸಿದ್ದರಾಮಯ್ಯನವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದಾರೆ. ಗಾಂಧೀ ಸೇವಾ ಪ್ರಶಸ್ತಿ ಪುರಸ್ಕೃರಾದ ಪ್ರೊ.ಜಿ.ಬಿ.ಶಿವರಾಜ್ ಸಮಾರೋಪ ಸಮಾರಂಭದಲ್ಲಿ ಉಪನ್ಯಾಸ ನೀಡಲಿದ್ದಾರೆ.

ಜಿಲ್ಲಾ ಕಸಾಪ ಅಧ್ಯಕ್ಷ ಸಿದ್ದಲಿಂಗಪ್ಪ, ಆದಿಚುಂಚನಗಿರಿ ಮಠದ ಪೀಠಾಕ್ಷರಾದ ನಿರ್ಮಲಾನಂಧನಾಥ ಸ್ವಾಮೀಜಿ, ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ, ಮಾಜಿ ಶಾಸಕರಾದ ಮಸಾಲ ಜಯರಾಮ್, ಎಚ್.ಬಿ.ನಂಜೇಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಬೆಮೆಲ್ ಕಾಂತರಾಜು, ತಾಲ್ಲೂಕು ಕಸಾಪ ಅಧ್ಯಕ್ಷ ಡಿ.ಪಿ.ರಾಜು ಸೇರಿದಂತೆ ಅನೇಕ ಗಣ್ಯರು, ಜನಪ್ರತಿನಿಧಿಗಳು, ಸಾಹಿತ್ಯಾಸಕ್ತರು ವಿವಿಧ ಸಂಘಟನೆಗಳು ಮತ್ತು ಗ್ರಾಮಸ್ಥರು ಆಗಮಿಸಲಿದ್ದಾರೆ ಎಂದು ಸಂಪತ್ ತಿಳಿಸಿದರು.

ಈ ಸಂಧರ್ಭದಲ್ಲಿ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾದ ಸುಬ್ರಹ್ಮಣಿ ಶ್ರೀಕಂಠೇಗೌಡರು, ತಾಲ್ಲೂಕು ಕಸಾಪ ಅಧ್ಯಕ್ಷ ಡಿ.ಪಿ.ರಾಜು, ಮುಖಂಡರಾದ ಉಗ್ರೇಗೌಡರು, ಗೌರವಾಧ್ಯಕ್ಷ ಹೇಮಚಂದ್ರು, ಹುಲಿಕಲ್ ಕೃಷ್ಣಾಚಾರ್, ಮಂಜುನಾಥ್, ಕೆ.ಬಿ.ರಾಮಸ್ವಾಮಿ ಇನ್ನಿತರರು ಇದ್ದರು.

ವರದಿ – ನಾಗಭೂಷಣ್ ತುರುವೇಕೆರೆ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X